AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Politics: ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಸೆಕೆಂಡ್ ಇನ್ನಿಂಗ್ಸ್; ಯಾರೆಲ್ಲಾ ರಾಜಕೀಯಕ್ಕೆ ಎಂಟ್ರಿ?

Bureaucrats and Politcs: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಹಲವು ಮಾಜಿ ಸರ್ಕಾರಿ ಅಧಿಕಾರಿಗಳು ರಾಜಕೀಯ ಬಣ್ಣ ಹಚ್ಚಿದ್ದಾರೆ ಅಥವಾ ಹಚ್ಚಲಿದ್ದಾರೆ. ಕೆಲವರು ವಿವಿಧ ಪಕ್ಷಗಳ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಅಂಥವರ ಪಟ್ಟಿ ಇಲ್ಲಿದೆ:

Politics: ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ಸೆಕೆಂಡ್ ಇನ್ನಿಂಗ್ಸ್; ಯಾರೆಲ್ಲಾ ರಾಜಕೀಯಕ್ಕೆ ಎಂಟ್ರಿ?
ಭಾಸ್ಕರ್ ರಾವ್
TV9 Web
| Edited By: |

Updated on:Feb 14, 2023 | 1:33 PM

Share

ಬೆಂಗಳೂರು: ಕೆಲ ವರ್ಷಗಳ ಹಿಂದಿನವರೆಗೂ ರಾಜಕೀಯಕ್ಕೆ ಸರ್ಕಾರಿ ಅಧಿಕಾರಿಗಳು (Bureaucrats), ಸ್ವಾಮೀಜಿಗಳು ನೇರ ಪ್ರವೇಶ ಮಾಡುವುದು ಬಹಳ ಅಪರೂಪ ಎಂಬಂತಿತ್ತು. ಈಗ ಸರ್ಕಾರಿ ಅಧಿಕಾರಿಗಳು ನಿವೃತ್ತಿ ನಂತರ ಅಥವಾ ರಾಜೀನಾಮೆ ನೀಡಿ ರಾಜಕೀಯ ಹಾದಿ ಹಿಡಿಯುವ ಟ್ರೆಂಡ್ ಶುರುವಾಗಿದೆ. ಮಾಜಿ ಐಎಎಸ್ ಅಧಿಕಾರಿ ಎಸ್ ಜೈಶಂಕರ್ ಅವರು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಸೈ ಎನಿಸಿದ್ದಾರೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಕೆ ಅಣ್ಣಾಮಲೈ ಈಗ ತಮಿಳುನಾಡಿನಲ್ಲಿ ಬಿಜೆಪಿಯ ಸ್ಟಾರ್ ಮ್ಯಾನ್ ಆಗಿದ್ದಾರೆ. ಮಾಜಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಆಮ್ ಆದ್ಮಿ ಪಥಕ್ಕೆ ಹೊರಳಿದ್ದಾರೆ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಹಲವು ಮಾಜಿ ಸರ್ಕಾರಿ ಅಧಿಕಾರಿಗಳು ರಾಜಕೀಯ ಬಣ್ಣ ಹಚ್ಚಿದ್ದಾರೆ ಅಥವಾ ಹಚ್ಚಲಿದ್ದಾರೆ. ಕೆಲವರು ವಿವಿಧ ಪಕ್ಷಗಳ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ.

ಸರ್ಕಾರಿ ಅಧಿಕಾರಿಗಳ ರಾಜಕೀಯ ಹಾದಿ

ಭಾಸ್ಕರ್ ರಾವ್, ಮಾಜಿ ಐಪಿಎಸ್ ಅಧಿಕಾರಿ: ಎಎಪಿ ಬೆಂಗಳೂರು

ಕೆ ಮಥಾಯ್, ಮಾಜಿ ಐಎಎಸ್ ಅಧಿಕಾರಿ: ಎಎಪಿ ಬೆಂಗಳೂರು

ಹೆಚ್​ಟಿ ಅನಿಲ್ ಕುಮಾರ್, ನಿವೃತ್ತ ಐಎಎಸ್ ಅಧಿಕಾರಿ: ಬಿಜೆಪಿ

ಎಂ ಲಕ್ಷ್ಮೀನಾರಾಯಣನ್, ನಿವೃತ್ತ ಐಎಎಸ್ ಅಧಿಕಾರಿ: ಬಿಜೆಪಿ

ಸುಧಾಮ್ ದಾಸ್, ಐಆರ್​ಎಸ್ ಅಧಿಕಾರಿ: ಕಾಂಗ್ರೆಸ್

ಸುಭಾಷ್ ಚಂದ್ರ ರಾಥೋಡ್, ಸಿವಿಲ್ ನ್ಯಾಯಾಧೀಶ: ಜೆಡಿಎಸ್

ಇದನ್ನೂ ಓದಿ: Belagavi: ಆತ ಸರ್ಕಾರಿ ನೌಕರಿಯಲ್ಲಿದ್ದ ಬಾಡಿ ಬಿಲ್ಡರ್, ಪತ್ನಿ ಕೆಎಎಸ್ ಅಧಿಕಾರಿ: ಆದರೂ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಇವರ ಪೈಕಿ ಭಾಸ್ಕರ್ ರಾವ್ ಅವರು ಬೆಂಗಳೂರಿನ ಬಿಜೆಪಿ ಭದ್ರಕೋಟೆ ಬಸವನಗುಡಿಯಲ್ಲಿ ಎಎಪಿ ಟಿಕೆಟ್​ನಲ್ಲಿ ಸ್ಪರ್ಧಿಸುವ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ಈಗಾಗಲೇ ಅವರು ಸುತ್ತಾಟ ನಡೆಸಿದ್ದಾರೆ. ಕೆ ಮಥಾಯಿ ಕೂಡ ಬೆಂಗಳೂರಿನ ಒಂದು ಕ್ಷೇತ್ರದಲ್ಲಿ ಪೊರಕೆ ಗುರುತಿನಡಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ.

ಎಚ್​ಟಿ ಅನಿಲ್ ಕುಮಾರ್ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಜಿ ಪರಮೇಶ್ವರ್ ವಿರುದ್ಧ ಸ್ಪರ್ಧಿಸಬಹುದು. ಎಂ ಲಕ್ಷ್ಮೀನಾರಾಯಣ್ ಅವರು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಹಿಂದೆ ರಾಜಕೀಯ ಹಾದಿ ಹಿಡಿದ ಅಧಿಕಾರಿಗಳು

ಹೆಚ್​ಟಿ ಸಾಂಗ್ಲಿಯಾನ, ಕೋದಂಡರಾಮಯ್ಯ, ಬಿ.ಸಿ. ಪಾಟೀಲ್, ಪಿ ರಾಜೀವ್ ಮೊದಲಾದವರು ರಾಜಕೀಯಕ್ಕೆ ಧುಮುಕಿ ಒಂದಷ್ಟ ಯಶಸ್ಸು ಕಂಡಿದ್ದವರು. ಬಿ.ಸಿ. ಪಾಟೀಲ್ ರಾಜಕೀಯ ಬುನಾದಿ ಹಾಕಿಕೊಂಡು ಮಂತ್ರಿಯಾಗಿ ಗಮನ ಸೆಳೆದಿದ್ದಾರೆ. ಪಿ ರಾಜೀವ್ ಅವರು ಬಿಜೆಪಿಯಲ್ಲಿ ಉಜ್ವಲ ಭವಿಷ್ಯ ಹೊಂದಿದ್ದಾರೆ.

Published On - 1:33 pm, Tue, 14 February 23

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್