AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಭವನ ತಲುಪಿದ ಕೋಲಾರ ಬಿಜೆಪಿ ಸಂಸದ ಮುನಿಸ್ವಾಮಿ-ಕಾಂಗ್ರೆಸ್​ ಶಾಸಕ ನಾರಾಯಣಸ್ವಾಮಿ ಜಟಾಪಟಿ

ಕೋಲಾರದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಮತ್ತು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್​.ನಾರಾಯಣಸ್ವಾಮಿ ನಡುವಿನ ಜಟಾಪಟಿ ಇದೀಗ ರಾಜಭವನ ತಲುಪಿದೆ. ಸಂಸದ ಮುನಿಸ್ವಾಮಿ ಅವರು ಇಂದು ನಾರಾಯಣಸ್ವಾಮಿ ವಿರುದ್ಧ ದೂರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ರಾಜಭವನ ತಲುಪಿದ ಕೋಲಾರ ಬಿಜೆಪಿ ಸಂಸದ ಮುನಿಸ್ವಾಮಿ-ಕಾಂಗ್ರೆಸ್​ ಶಾಸಕ ನಾರಾಯಣಸ್ವಾಮಿ ಜಟಾಪಟಿ
ಸಂಸದ ಮುನಿಸ್ವಾಮಿ ಮತ್ತು ಶಾಸಕ ಎಸ್​ ನಾರಾಯಸ್ವಾಮಿ ನಡುವೆ ಜಟಾಪಟಿ
ಕಿರಣ್​ ಹನಿಯಡ್ಕ
| Edited By: |

Updated on: Sep 27, 2023 | 2:21 PM

Share

ಬೆಂಗಳೂರು,/ಕೋಲಾರ (ಸೆಪ್ಟೆಂಬರ್ 27): ಕೋಲಾರದಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ವೇದಿಕೆಯಲ್ಲಿ ಬಿಜೆಪಿ ಸಂಸದ ಎಸ್.ಮುನಿಸ್ವಾಮಿ((MP Muniswamy) ಮತ್ತು ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್​.ನಾರಾಯಣಸ್ವಾಮಿ (SN Narayanaswamy) ನಡುವೆ ಜಟಾಪಟಿ ನಡೆದಿದ್ದು, ಇದೀಗ ಈ ಗಲಾಟೆ ರಾಜಭವನ ತಲುಪಿದೆ. ಕೋಲಾರದಲ್ಲಿ ಜನತಾ ದರ್ಶನದ ವೇಳೆ ನಡೆದಿದ್ದ ಗಲಾಟೆ ಬಗ್ಗೆ ಸಂಸದ ಮುನಿಸ್ವಾಮಿ ಅವರು ಇಂದು (ಸೆಪ್ಟೆಂಬರ್ 27) ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ ಮತ್ತು ಕೇಶವ ಪ್ರಸಾದ್ ಅವರೊಂದಿಗೆ ರಾಜಭವನಕ್ಕೆ ತೆರಳಿ ಕೈ ಶಾಸಕ ನಾರಾಯಣಸ್ವಾಮಿ ವಿರುದ್ಧ ದೂರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ಸಂಸದ ಮುನಿಸ್ವಾಮಿ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಇಬ್ಬರು ವೇದಿಕೆ ಮೇಲೆ ಜಗಳ ಮಾಡಿಕೊಂಡಿದ್ದು, ಇಬ್ಬರ ಜಗಳ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಕೂಡಲೇ ಮಧ್ಯ ಪ್ರವೇಶಿಸಿದ್ದ ಪೊಲೀಸರು ಇಬ್ಬರು ನಾಯಕರನ್ನು ವೇದಿಕೆಯಿಂದ ಕೆಳಗೆ ಕರೆದುಕೊಂಡು ಬಂದು ಸಮಾಧಾನ ಮಾಡಿದ್ದರು. ಇಷ್ಟಕ್ಕೆ ಸುಮ್ಮನಾಗದ ಸಂಸದ ಮುನಿಸ್ವಾಮಿ, ನಾರಾಯಣಸ್ವಾಮಿ ವಿರುದ್ಧ ರಾಜಭವನದ ಮೆಟ್ಟಿಲೇರಿದ್ದು, ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಕೋಲಾರದಲ್ಲಿ ಸಂಸದ-ಶಾಸಕರ ನಡುವೆ ಜಟಾಪಟಿ, ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿದ ಮುನಿಸ್ವಾಮಿ

ಗಲಾಟೆ ಹಿನ್ನೆಲೆ

ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ, ಭೂಗಳರನ್ನ ಇಟ್ಕೊಂಡು ಕಾರ್ಯಕ್ರಮ ಮಾಡುತ್ತಿದ್ದೀರಾ ಅಂತ ಕಿಡಿಕಾರಿದ್ದರು. ಈ ಮಾತು ಕೇಳುತ್ತಿದ್ದಂತೆ, ಶಾಸಕ ನಾರಾಯಣಸ್ವಾಮಿ ರೊಚ್ಚಿಗೆದ್ದರು. ಇಂತಹ ಕಾರ್ಯಕ್ರಮದಲ್ಲಿ ಹೀಗೆಲ್ಲ ಯಾಕೆ ಮಾತನಾಡುತ್ತೀರಿ, ಒತ್ತುವರಿ ಮಾಡಿರುವವ ಹೆಸರು ಹೇಳಿ ಎಂದು ರೊಚ್ಚಿಗೆದ್ದರು.ಇದು ನಂತರ ಪರಸ್ಪರ ಕಾದಾಟದ ಹಂತಕ್ಕೆ ಹೋಯ್ತು. ಇಬ್ಬರೂ ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡಿದ್ದು, ಕೈ ಕೈಮಿಲಾಯಿಸುವ ಹಂತಕ್ಕೆ ಹೋಗಿತ್ತು. ಅಲ್ಲದೇ ಬೋ.. ಮಗನೇ, ಅಪ್ಪನಿಗೆ ಹುಟ್ಟಿದ್ರೆ ಸಾಬೀತು ಮಾಡು ಎಂದು ನಾರಾಯಣಸ್ವಾಮಿ ಕೂಗಾಡಿದ್ದರು.

ಕೊನೆಗೆ ಇಬ್ಬರ ಮಾತಿನ ವಾಕ್ಸಮರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಕೂಡಲೇ ಮಧ್ಯ ಪ್ರವೇಶ ಮಾಡಿದ ಎಸ್​ಪಿ ನಾರಾಯಣ್, ಸಂಸದ ಮುನಿಸ್ವಾಮಿ ಅವರನ್ನು ಕಾರ್ಯಕ್ರಮದಿಂದ ಹೊರಗೆ ಕರೆದುಕೊಂಡು ಹೋಗಿದ್ದರು. ಇತ್ತ ಸಚಿವ ಬೈರತಿ ಸುರೇಶ್ ಅವರು ಶಾಸಕರನ್ನು ಸಮಾಧಾನಗೊಳಿಸಿದ್ದರು. ಇನ್ನು ಕಾರ್ಯಕ್ರಮ ಮುಗಿದ ಮೇಲೆ ಶಾಸಕ ನಾರಾಯಣಸ್ವಾಮಿ ಮಾತನಾಡಿ, ನನ್ನ ಮೇಲೆ ಮಾಡಿರುವ ಆರೋಪ ಸಾಬೀತು ಪಡಿಸಿದರೆ ನಿಮ್ಮ ಮನೆಯಲ್ಲಿ ಜೀತ ಮಾಡುತ್ತೇನೆ ಎಂದು ಸವಾಲು ಹಾಕಿದ್ದರು.

ಜನಪ್ರತಿನಿಧಿಗಳು ಎನ್ನುವುದನ್ನು ನೋಡದೇ ಅಧಿಕಾರಿಗಳು ಮತ್ತು ಸಾರ್ವಜನಿಕರ ಮುಂದೆ ಉಭಯ ನಾಯಕರು ಕಿತ್ತಾಡಿಕೊಂಡ ವಿಡಿಯೋವನ್ನು ಜನರು ತಮ್ಮ ಮೊಬೈಲ್​ಗಳಲ್ಲಿ ಸೆರೆ ಹಿಡಿದಿದ್ದು, ಇದೀಗ ಆ ವಿಡಿಯೋ ವೈರಲ್ ಆಗುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Kiran Haniyadka
Kiran Haniyadka
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ