Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ: ಪುತ್ತೂರಿನ ಪ್ರಕರಣ ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ

ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದು ಇಡೀ ರಾಜ್ಯದಲ್ಲಿ ಸುದ್ದು ಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ ಎಂದಿದ್ದಾರೆ.

ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ: ಪುತ್ತೂರಿನ ಪ್ರಕರಣ ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ
ಪುತ್ತೂರಿನ ಪ್ರಕರಣವನ್ನು ಖಂಡಿಸಿದ ಕೋಟ ಶ್ರೀನಿವಾಸ್ ಪೂಜಾರಿ
Follow us
Rakesh Nayak Manchi
|

Updated on: May 18, 2023 | 2:55 PM

ಉಡುಪಿ: ಇಡೀ ರಾಜ್ಯಾದ್ಯಂತ ಸುದ್ದು ಮಾಡುತ್ತಿರುವ ಪುತ್ತೂರಿನ ಹಿಂದೂ ಕಾರ್ಯಕರ್ತರ (Hindu Workers) ಮೇಲಿನ ಪೊಲೀಸರ ಹಲ್ಲೆಯನ್ನು ಖಂಡಿಸಿದ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary), ಕಾನೂನು ಕ್ರಮ ತೆಗೆದುಕೊಳ್ಳಿ ಹಲ್ಲೆ ಮಾಡಲು ಯಾರಿಗೂ ಅಧಿಕಾರವಿಲ್ಲ. ಬಿಜೆಪಿ ಇದನ್ನು ಖಂಡಿಸಿದೆ ತನಿಖೆ ಮಾಡಲು ಆಗ್ರಹಿಸಿದೆ. ಹಲ್ಲೆ ಮಾಡುವ ಮತ್ತು ದೌರ್ಜನ್ಯ ಮಾಡುವ ಅಧಿಕಾರ ಯಾರಿಗೂ ಇಲ್ಲ. ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂಬ ಅಗ್ರಹವನ್ನು ಬಿಜೆಪಿ ಮಾಡಿದೆ. ಜಿಲ್ಲಾ ಮಟ್ಟದಲ್ಲಿ ತನಿಖೆ ಮಾಡುವುದಾಗಿ ಎಸ್​ಪಿ ಹೇಳಿದ್ದಾರೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಕೂಡ ಇದನ್ನು ಖಂಡಿಸಿದ್ದಾರೆ. ತನಿಖೆ ಮಾಡಬೇಕು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ ಇದಕ್ಕೆ ನಾವು ಬದ್ಧವಾಗಿದ್ದೇವೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸೋಲಿಗೆ ನಳಿನ್ ಕುಮಾರ್ ಕಟೀಲ್ ಹಾಗೂ ಸದಾನಂದಗೌಡ ಅವರೇ ಕಾರಣ ಎಂದು ಆರೋಪಿಸಿ ಪುತ್ತೂರು ಕ್ಷೇತ್ರದಲ್ಲಿ ನೊಂದ ಹಿಂದೂ ಕಾರ್ಯಕರ್ತರು ನಾಯಕರ ಬ್ಯಾನರ್​ಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ಹೊರಹಾಕಿದ್ದರು. ಪ್ರಕರಣ ಸಂಬಂಧ ಪೊಲೀಸರು ಕೆಲವರನ್ನು ಬಂಧಿಸಿ ಅಮಾನುಶವಾಗಿ ಹಲ್ಲೆ ನಡೆಸಿದ್ದಾರೆ. ಬಂಧನದ ವಿಚಾರ ತಿಳಿದ ಅರುಣ್ ಕುಮಾರ್ ಪುತ್ತಿಲ ಅವರು ಬಿಡಿಸಿ ಕೊಂಡೋಗಿದ್ದರು. ಇದಾದ ಬಳಿಕ ಹಲ್ಲೆಗೊಳಗಾದ ಕಾರ್ಯಕರ್ತರ ಗಾಯದ ಫೋಟೋಗಳು ವೈರಲ್ ಆಗಿದ್ದವು.

ರಾಷ್ಟ್ರ ವಿರೋಧಿಗಳ ವಿರುದ್ಧ ಕ್ರಮ ಆಗಬೇಕು: ಕೋಟ ಶ್ರೀನಿವಾಸ್ ಪೂಜಾರಿ

ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ಅಭಿನಂದನೆ ಶುಭಾಶಯ ತಿಳಿಸಿದ ಕೋಟ ಶ್ರೀನಿವಾಸ್ ಪೂಜಾರಿ, ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರಾಜ್ಯದಲ್ಲಿ ನಡೆದಿರುವ ವಿದ್ಯಾಮಾನಗಳು ಆತಂಕ ಹುಟ್ಟಿಸುತ್ತಿವೆ. ಭಟ್ಕಳ ಶಿರಸಿಯಲ್ಲಿ ಪಾಕಿಸ್ತಾನ ಮಾದರಿಯ ಧ್ವಜಗಳು ಹಾರಿಸಿ ಕೇಕೆ ಹಾಕಿದ್ದಾರೆ, ಬೆಳಗಾವಿಯ ಸಂಭ್ರಮೋತ್ಸವದಲ್ಲಿ ಪಾಕಿಸ್ತಾನ ಪರ ಘೋಷಣೆ ಮೊಳಗಿವೆ. ಶಿವಮೊಗ್ಗದಲ್ಲಿ ಬಿಜೆಪಿ ಮತದಾರರು, ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿವೆ. ಇಡೀ ರಾಜ್ಯದಲ್ಲಿ ಇಂತಹ ವಿದ್ಯಮಾನಗಳು ಖಂಡನೀಯ ಎಂದರು.

ಇದನ್ನೂ ಓದಿ: ನಳಿನ್, ಡಿವಿ ಚಿತ್ರಕ್ಕೆ ಚಪ್ಪಲಿ ಹಾಕಿದ್ದವರಿಗೆ ಮನಸೋ ಇಚ್ಚೆ ಥಳಿತ: ಪುತ್ತೂರು ಗ್ರಾಮಾಂತರ ಠಾಣೆ ಸಬ್ ಇನ್ಸ್‌ಪೆಕ್ಟರ್, ಪೇದೆ ಅಮಾನತು

ರಾಷ್ಟ್ರ ವಿರೋಧಿ ಕೃತ್ಯ ಮಾಡುವವರಿಗೆ ಸಿಗುವ ಪ್ರೋತ್ಸಾಹ ಆತಂಕಕಾರಿಯಾಗಿದೆ. ವಿಪಕ್ಷ ಸ್ಥಾನದಲ್ಲಿ ನಿಂತು ಬಿಜೆಪಿ ಇದನ್ನು ಗಂಭೀರವಾಗಿ ನೋಡುತ್ತಿದೆ, ಕರ್ನಾಟಕವನ್ನು ಪಶ್ಚಿಮ ಬಂಗಾಳ, ಕೇರಳ ಮಾಡಿದರೆ ನಾವು ಸಹಿಸಲ್ಲ. ಬಿಜೆಪಿ ಇದಕ್ಕೆ ಪ್ರತಿರೋಧ ಮಾಡುವ ಜನಪರ ಹೋರಾಟ ಮಾಡುತ್ತೇವೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಜಾರಿಗೆ ತರಬೇಕು ರಾಷ್ಟ್ರ ವಿರೋಧಿಗಳ ವಿರುದ್ಧ ಕ್ರಮ ಆಗಬೇಕು. ಹೊಸ ಮುಖ್ಯಮಂತ್ರಿ ಕಾಂಗ್ರೆಸ್ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ನಾನ ಮಾಡದೆ ಪೂಜೆ ಮಾಡಿದ್ರೆ ಪರಿಣಾಮ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
ಸ್ನಾನ ಮಾಡದೆ ಪೂಜೆ ಮಾಡಿದ್ರೆ ಪರಿಣಾಮ ಏನಾಗುತ್ತೆ ಗೊತ್ತಾ? ವಿಡಿಯೋ ನೋಡಿ
Daily Horoscope: ರವಿ ಕುಂಭ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ತಿಳಿಯಿ
Daily Horoscope: ರವಿ ಕುಂಭ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ತಿಳಿಯಿ
ಸಾವಿರಾರು ಎಕರೆಯ ಕುದುರೆಮುಖ ಅರಣ್ಯದಲ್ಲಿ ಭಾರಿ ಕಾಡ್ಗಿಚ್ಚು
ಸಾವಿರಾರು ಎಕರೆಯ ಕುದುರೆಮುಖ ಅರಣ್ಯದಲ್ಲಿ ಭಾರಿ ಕಾಡ್ಗಿಚ್ಚು
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ
ಮತ್ತೆ ಚಂದನ್ ಶೆಟ್ಟಿ ತಬ್ಬಿಕೊಂಡು ಕಣ್ಣೀರು ಹಾಕಿದ ನಿವೇದಿತಾ ಗೌಡ
ಪ್ರಧಾನಿ ಮೋದಿಗೆ ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ
ಪ್ರಧಾನಿ ಮೋದಿಗೆ ಮಾರಿಷಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ
ಕೆಲವೇ ಕೆಲವು ನಿಮಿಷ ಸುರಿದ ಮಳೆಗೆ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಕೆಲವೇ ಕೆಲವು ನಿಮಿಷ ಸುರಿದ ಮಳೆಗೆ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಕೆಂಡದಂಥಾ ಬಿಸಿಲಿಗೆ ಬಸವಳಿದ ಬೆಂಗಳೂರಿಗೆ ತಂಪೆರೆದ ಮಳೆರಾಯ
ಕೆಂಡದಂಥಾ ಬಿಸಿಲಿಗೆ ಬಸವಳಿದ ಬೆಂಗಳೂರಿಗೆ ತಂಪೆರೆದ ಮಳೆರಾಯ
ಮತ್ತೆ ಜತೆಯಾಗಿ ಸುದ್ದಿಗೋಷ್ಠಿ ಮಾಡುತ್ತಿರುವ ನಿವೇದಿತಾ ಗೌಡ, ಚಂದನ್ ಶೆಟ್ಟಿ
ಮತ್ತೆ ಜತೆಯಾಗಿ ಸುದ್ದಿಗೋಷ್ಠಿ ಮಾಡುತ್ತಿರುವ ನಿವೇದಿತಾ ಗೌಡ, ಚಂದನ್ ಶೆಟ್ಟಿ
ಕೇಂದ್ರ ಏಜೆನ್ಸಿ ಮಧ್ಯಪ್ರವೇಶ ಮಾಡಿದ್ದಕ್ಕೆ ರನ್ಯಾ ಪ್ರಕರಣ ಬೆಳಕಿಗೆ: ಶಾಸಕ
ಕೇಂದ್ರ ಏಜೆನ್ಸಿ ಮಧ್ಯಪ್ರವೇಶ ಮಾಡಿದ್ದಕ್ಕೆ ರನ್ಯಾ ಪ್ರಕರಣ ಬೆಳಕಿಗೆ: ಶಾಸಕ
ಮಾರಿಷಸ್ ಅಧ್ಯಕ್ಷರ ಪತ್ನಿಗೆ ಬನಾರಸಿ ಸೀರೆ ಕೊಟ್ಟ ಪ್ರಧಾನಿ ಮೋದಿ
ಮಾರಿಷಸ್ ಅಧ್ಯಕ್ಷರ ಪತ್ನಿಗೆ ಬನಾರಸಿ ಸೀರೆ ಕೊಟ್ಟ ಪ್ರಧಾನಿ ಮೋದಿ