Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ ಆರೋಪ

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿದೆ. ಆಡಳಿತಾತ್ಮಕ ಸಮಸ್ಯೆ ಊಹೆಗೆ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ ಎಂದು ಬಿಜೆಪಿ ಎಂಎಲ್​ಸಿ ಕೋಟ ಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ. ಯಾವ ಕಾರಣಕ್ಕೆ ಇಂಥ ಅನಾಹುತಗಳನ್ನು ಮಾಡುತ್ತಿದ್ದೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ ಆರೋಪ
ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಸಿದ್ದರಾಮಯ್ಯ
Follow us
TV9 Web
| Updated By: Rakesh Nayak Manchi

Updated on: Oct 16, 2023 | 5:29 PM

ಉಡುಪಿ, ಅ.16: ಸಿದ್ದರಾಮಯ್ಯ (Siddaramaiah) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳಾಗಿವೆ. ಆಡಳಿತಾತ್ಮಕ ಸಮಸ್ಯೆ ಊಹೆಗೆ ನಿಲುಕದಷ್ಟು ಹದಗೆಟ್ಟಿದೆ. ಕರ್ನಾಟಕದಲ್ಲಿ ಲಂಚ ಕೊಡದೆ ಯಾವ ಕೆಲಸವೂ ಆಗುದಿಲ್ಲ ಎಂದು ಬಿಜೆಪಿ ಎಂಎಲ್​ಸಿ ಕೋಟ ಶ್ರೀನಿವಾಸ್ ಪೂಜಾರಿ (Kota Srinivas Poojary) ಆರೋಪಿಸಿದ್ದಾರೆ. ಯಾವ ಕಾರಣಕ್ಕೆ ಇಂಥ ಅನಾಹುತಗಳನ್ನು ಮಾಡುತ್ತಿದ್ದೀರಿ ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 12,500 ಮದ್ಯದಂಗಡಿ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಅಂಗಡಿಯ ವರ್ಗಾವಣೆಗೆ 18 ಲಕ್ಷ ರೂಪಾಯಿ ಸರಕಾರಕ್ಕೆ ಪಾವತಿಸುವ ನಿಯಮವಿದೆ. ಹೆಚ್ಚುವರಿ 25 ಲಕ್ಷ ರೂಪಾಯಿಗೆ ಅಧಿಕಾರಿಗಳು ಬೇಡಿಕೆ ಇಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್​ಗೆ 1000 ಕೋಟಿ ರೂ. ಟಾರ್ಗೆಟ್: ಯಾವ ರಾಜ್ಯಕ್ಕೆ ಎಷ್ಟು? ಬಿಜೆಪಿ ಟ್ವೀಟ್

ಹೊಸ ಸನ್ನದಿಗೆ 10 ಲಕ್ಷದ ಬದಲು 75 ಲಕ್ಷ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಅಬಕಾರಿ ಇಲಾಖೆಯಿಂದ 42,000 ಕೋಟಿ ರೂಪಾಯಿ ಆದಾಯ ಬರುತ್ತದೆ. ಅಬಕಾರಿ ಇಲಾಖೆ ಅಧಿಕಾರಿಗಳು ಭ್ರಷ್ಟಾಚಾರದ ಕೋಪವಾಗಿ ವ್ಯಾಪಾರಿಗಳನ್ನು ಕಾಡುತ್ತಿದ್ದಾರೆ. ಲಂಚ ಕೊಡದೆ ಯಾವ ಕೆಲಸವು ಆಗುದಿಲ್ಲ. ಅಧಿಕಾರಿಗಳು ಮಾಹಿತಿ ಹಕ್ಕಿನ ಏಜೆಂಟ್​​ಗಳಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ದಯವಿಟ್ಟು ಈ ಪತ್ರದ ಹಿನ್ನೆಲೆಯಲ್ಲಿ ತನಿಖೆ ಆಗಬೇಕು. ಅಬಕಾರಿ ಇಲಾಖೆ ಅಧಿಕಾರಿಗಳು ಅಬಕಾರಿ ಸಚಿವರ ತನಿಖೆ ಆಗಬೇಕು. ಮುಖ್ಯಮಂತ್ರಿಗಳ ಕೃಪಾಕಟಾಕ್ಷದ ಅಡಿಯಲ್ಲೇ ಇದೆಲ್ಲವೂ ನಡೆಯುತ್ತಿದೆಯೇ? ಮುಖ್ಯಮಂತ್ರಿಯಾಗಿ ತಾವು ತೆಗೆದುಕೊಂಡ ಕ್ರಮವನ್ನು ಜನತೆ ಮುಂದೆ ಇಡಬೇಕು ಎಂದು ಒತ್ತಾಯಿಸಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್