AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ: ಡಿಕೆ ಶಿವಕುಮಾರ್ ಹೇಳಿಕೆ

DK Shivakumar: ಕಾಂಗ್ರೆಸ್ ಈ ದೇಶಕ್ಕೆ ಅನಿವಾರ್ಯ ಎಂಬುದನ್ನ ನೆನಪಿಸಲು ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ: ಡಿಕೆ ಶಿವಕುಮಾರ್ ಹೇಳಿಕೆ
ಡಿಕೆ ಶಿವಕುಮಾರ್
TV9 Web
| Edited By: |

Updated on: Nov 09, 2021 | 2:38 PM

Share

ಬೆಂಗಳೂರು: ದೇವೇಂದ್ರಪ್ಪ ಕಾಂಗ್ರೆಸ್ ಸೇರ್ಪಡೆ ತಡವಾಗ್ತಾ ಇತ್ತು. ಆದರೆ ಆ ಗಳಿಗೆ ಈಗ ಕೂಡಿ ಬಂದಿದೆ. ಅವರ ಜತೆ ಬಂದ ಎಲ್ಲ ಬೆಂಬಲಿಗರಿಗೆ ಸ್ವಾಗತ ಕೋರುವೆ. ಬೇಷರತ್ತಾಗಿ ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರಬಹುದು. ಷರತ್ತು ಹಾಕಿಕೊಂಡು ಬರುವವರಿಗೆ ಅವಕಾಶ ಇರಲ್ಲ. ಅಧಿಕಾರಕ್ಕಾಗಿ ಷರತ್ತು ಹಾಕಿದರೆ ನಾವು ಕೇಳೋದಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು (ನವೆಂಬರ್ 9) ಹೇಳಿಕೆ ನೀಡಿದ್ದಾರೆ.

12 ವರ್ಷದ ಬಳಿಕ ಸದಸ್ಯತ್ವ ಅಭಿಯಾನ ಮಾಡ್ತಿದ್ದೇವೆ. ಹೊಸದಾಗಿ 5 ರೂಪಾಯಿ ಕಟ್ಟಿ ನೋಂದಣಿ ಮಾಡಿಕೊಳ್ಳಬೇಕು. ನವೆಂಬರ್ 14 ರಂದು ಪ್ಯಾಲೇಸ್ ಗ್ರೌಂಡ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಸ್ತುವಾರಿಗಳಿರುತ್ತಾರೆ. ಕಾಂಗ್ರೆಸ್ ಈ ದೇಶಕ್ಕೆ ಅನಿವಾರ್ಯ ಎಂಬುದನ್ನ ನೆನಪಿಸಲು ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಟ್ ಕಾಯಿನ್ ದಂಧೆ ವಿಚಾರವಾಗಿ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕ ಸಿ.ಟಿ. ರವಿಗೆ ಟಾಂಗ್ ಕೊಟ್ಟಿದ್ದಾರೆ. ದಂಧೆಯಲ್ಲಿ ಕಾಂಗ್ರೆಸ್‌ನವರು ಭಾಗಿಯಾಗಿದ್ರೆ ಗಲ್ಲಿಗೇರಿಸಿ. ನಾವು ಯಾರ ಬೆಂಬಲಕ್ಕೂ ನಿಂತಿಲ್ಲ ಎಂದು ಹೇಳಿದ್ದಾರೆ. ಯಾರನ್ನು ಬೇಕಾದರೂ ತನಿಖೆಗೊಳಪಡಿಸಲಿ. ಸಂದೀಪ್ ಪಾಟೀಲ್ ಸುದ್ದಿಗೋಷ್ಠಿ ನನಗೆ ನೆನಪಿದೆ. ಗೃಹ ಸಚಿವರು ಮಾತನಾಡಿರುವುದೂ ನನಗೆ ನೆನಪಿದೆ. ಅದೆಲ್ಲದರ ಬಗ್ಗೆ‌ಯೂ ಅವರು ತನಿಖೆ ಮಾಡಲಿ. ನಮ್ಮ ಬಳಿಯೂ ದಾಖಲೆ ಇವೆ, ತನಿಖೆ ಮಾಡಿಸ್ತಿದ್ದೇವೆ. ಆಂತರಿಕ ತನಿಖೆ ಮಾಡಿಸುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಸೂಕ್ತ ಸಮಯದಲ್ಲಿ ಈ ವಿಚಾರ ಬಹಿರಂಗಪಡಿಸ್ತೇವೆ. ಈಗ ನೀವು ಆಡಳಿತದಲ್ಲಿದ್ದೀರಿ ತನಿಖೆ ಮಾಡಿಸಿ. ಶ್ರೀಕಿಯನ್ನ ಈಗ ಏಕೆ ಅರೆಸ್ಟ್ ಮಾಡಲಾಯಿತು. ಅವನ ವಿರುದ್ಧ ಹೈಕೋರ್ಟ್‌ನಲ್ಲಿ ಕೇಸ್ ಇತ್ತು. ಅದೆಲ್ಲಾ ಏನಾಯ್ತು, ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿ. ಇದೆಲ್ಲವು ಕೂಡ ಸಾಕಷ್ಟು ಅನುಮಾನ ಸೃಷ್ಟಿಸುತ್ತಿದೆ. ಬಿಟ್ ಕಾಯಿನ್ ಪ್ರಕರಣ EDಗೆ ಕೊಟ್ಟಿದ್ದೇವೆ ಅಂತಾರೆ. ಆದರ ನೋಟಿಫಿಕೇಷನ್‌ನಲ್ಲಿ ಏನಿದೆ ಮಾಹಿತಿ ನೀಡಲಿ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶದ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದ್ದಾರೆ: ಡಿಕೆ ಶಿವಕುಮಾರ್

ಇದನ್ನೂ ಓದಿ: ಇಡೀ ಭಾರತದಲ್ಲಿ ಬದಲಾವಣೆ ಅಲೆ ಪ್ರಾರಂಭವಾಗಿದೆ: ಉಪಚುನಾವಣೆ ಫಲಿತಾಂಶದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು