AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ: ಡಿಕೆ ಶಿವಕುಮಾರ್ ಹೇಳಿಕೆ

DK Shivakumar: ಕಾಂಗ್ರೆಸ್ ಈ ದೇಶಕ್ಕೆ ಅನಿವಾರ್ಯ ಎಂಬುದನ್ನ ನೆನಪಿಸಲು ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ: ಡಿಕೆ ಶಿವಕುಮಾರ್ ಹೇಳಿಕೆ
ಡಿಕೆ ಶಿವಕುಮಾರ್
TV9 Web
| Updated By: ganapathi bhat|

Updated on: Nov 09, 2021 | 2:38 PM

Share

ಬೆಂಗಳೂರು: ದೇವೇಂದ್ರಪ್ಪ ಕಾಂಗ್ರೆಸ್ ಸೇರ್ಪಡೆ ತಡವಾಗ್ತಾ ಇತ್ತು. ಆದರೆ ಆ ಗಳಿಗೆ ಈಗ ಕೂಡಿ ಬಂದಿದೆ. ಅವರ ಜತೆ ಬಂದ ಎಲ್ಲ ಬೆಂಬಲಿಗರಿಗೆ ಸ್ವಾಗತ ಕೋರುವೆ. ಬೇಷರತ್ತಾಗಿ ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬರಬಹುದು. ಷರತ್ತು ಹಾಕಿಕೊಂಡು ಬರುವವರಿಗೆ ಅವಕಾಶ ಇರಲ್ಲ. ಅಧಿಕಾರಕ್ಕಾಗಿ ಷರತ್ತು ಹಾಕಿದರೆ ನಾವು ಕೇಳೋದಿಲ್ಲ ಎಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು (ನವೆಂಬರ್ 9) ಹೇಳಿಕೆ ನೀಡಿದ್ದಾರೆ.

12 ವರ್ಷದ ಬಳಿಕ ಸದಸ್ಯತ್ವ ಅಭಿಯಾನ ಮಾಡ್ತಿದ್ದೇವೆ. ಹೊಸದಾಗಿ 5 ರೂಪಾಯಿ ಕಟ್ಟಿ ನೋಂದಣಿ ಮಾಡಿಕೊಳ್ಳಬೇಕು. ನವೆಂಬರ್ 14 ರಂದು ಪ್ಯಾಲೇಸ್ ಗ್ರೌಂಡ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಸ್ತುವಾರಿಗಳಿರುತ್ತಾರೆ. ಕಾಂಗ್ರೆಸ್ ಈ ದೇಶಕ್ಕೆ ಅನಿವಾರ್ಯ ಎಂಬುದನ್ನ ನೆನಪಿಸಲು ಪ್ರಯತ್ನ ಮಾಡುತ್ತೇವೆ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಟ್ ಕಾಯಿನ್ ದಂಧೆ ವಿಚಾರವಾಗಿ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕ ಸಿ.ಟಿ. ರವಿಗೆ ಟಾಂಗ್ ಕೊಟ್ಟಿದ್ದಾರೆ. ದಂಧೆಯಲ್ಲಿ ಕಾಂಗ್ರೆಸ್‌ನವರು ಭಾಗಿಯಾಗಿದ್ರೆ ಗಲ್ಲಿಗೇರಿಸಿ. ನಾವು ಯಾರ ಬೆಂಬಲಕ್ಕೂ ನಿಂತಿಲ್ಲ ಎಂದು ಹೇಳಿದ್ದಾರೆ. ಯಾರನ್ನು ಬೇಕಾದರೂ ತನಿಖೆಗೊಳಪಡಿಸಲಿ. ಸಂದೀಪ್ ಪಾಟೀಲ್ ಸುದ್ದಿಗೋಷ್ಠಿ ನನಗೆ ನೆನಪಿದೆ. ಗೃಹ ಸಚಿವರು ಮಾತನಾಡಿರುವುದೂ ನನಗೆ ನೆನಪಿದೆ. ಅದೆಲ್ಲದರ ಬಗ್ಗೆ‌ಯೂ ಅವರು ತನಿಖೆ ಮಾಡಲಿ. ನಮ್ಮ ಬಳಿಯೂ ದಾಖಲೆ ಇವೆ, ತನಿಖೆ ಮಾಡಿಸ್ತಿದ್ದೇವೆ. ಆಂತರಿಕ ತನಿಖೆ ಮಾಡಿಸುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ.

ಸೂಕ್ತ ಸಮಯದಲ್ಲಿ ಈ ವಿಚಾರ ಬಹಿರಂಗಪಡಿಸ್ತೇವೆ. ಈಗ ನೀವು ಆಡಳಿತದಲ್ಲಿದ್ದೀರಿ ತನಿಖೆ ಮಾಡಿಸಿ. ಶ್ರೀಕಿಯನ್ನ ಈಗ ಏಕೆ ಅರೆಸ್ಟ್ ಮಾಡಲಾಯಿತು. ಅವನ ವಿರುದ್ಧ ಹೈಕೋರ್ಟ್‌ನಲ್ಲಿ ಕೇಸ್ ಇತ್ತು. ಅದೆಲ್ಲಾ ಏನಾಯ್ತು, ಈ ಬಗ್ಗೆ ಇನ್ನಷ್ಟು ಮಾಹಿತಿ ನೀಡಲಿ. ಇದೆಲ್ಲವು ಕೂಡ ಸಾಕಷ್ಟು ಅನುಮಾನ ಸೃಷ್ಟಿಸುತ್ತಿದೆ. ಬಿಟ್ ಕಾಯಿನ್ ಪ್ರಕರಣ EDಗೆ ಕೊಟ್ಟಿದ್ದೇವೆ ಅಂತಾರೆ. ಆದರ ನೋಟಿಫಿಕೇಷನ್‌ನಲ್ಲಿ ಏನಿದೆ ಮಾಹಿತಿ ನೀಡಲಿ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶದ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದ್ದಾರೆ: ಡಿಕೆ ಶಿವಕುಮಾರ್

ಇದನ್ನೂ ಓದಿ: ಇಡೀ ಭಾರತದಲ್ಲಿ ಬದಲಾವಣೆ ಅಲೆ ಪ್ರಾರಂಭವಾಗಿದೆ: ಉಪಚುನಾವಣೆ ಫಲಿತಾಂಶದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ