AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತ ದಾಳಿಯಿಂದ ಬಿಜೆಪಿ ಭ್ರಷ್ಟಾಚಾರಕ್ಕೆ ಸಾಕ್ಷಿ ಸಿಕ್ಕಿದೆ; ಡಿಕೆ ಶಿವಕುಮಾರ್

ಇಷ್ಟು ದಿನ ಬಿಜೆಪಿಯವರು ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತದವರೇ ಸಾಕ್ಷಿ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಗಣಪತಿ ಶರ್ಮಾ
|

Updated on:Mar 02, 2023 | 11:04 PM

Share

ಬೆಂಗಳೂರು: ಲೋಕಾಯುಕ್ತ ದಾಳಿಯಿಂದ ಬಿಜೆಪಿ (BJP) ಭ್ರಷ್ಟಾಚಾರಕ್ಕೆ ಸಾಕ್ಷಿ ಸಿಕ್ಕಿದೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳಿದರು. ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್‌ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಬೆನ್ನಲ್ಲೇ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾತನಾಡಿದ ಅವರು, ಇಷ್ಟು ದಿನ ಬಿಜೆಪಿಯವರು ಭ್ರಷ್ಟಾಚಾರಕ್ಕೆ ಸಾಕ್ಷಿ ಕೇಳುತ್ತಿದ್ದರು. ಈಗ ಲೋಕಾಯುಕ್ತದವರೇ ಸಾಕ್ಷಿ ಕೊಟ್ಟಿದ್ದಾರೆ. ಈಗ ಯಾರು ರಾಜೀನಾಮೆ ಕೊಡುತ್ತಾರೆ? ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರಾ? ಸಚಿವರು ಕೊಡುತ್ತಾರಾ ಅಥವಾ ನಿಗಮ ಮಂಡಳಿ ಅಧ್ಯಕ್ಷರು ಕೊಡುತ್ತಾರಾ ಎಂದು ಪ್ರಶ್ನಿಸಿದರು.

‘10 ಲಕ್ಷ 20 ಲಕ್ಷಕ್ಕೆಲ್ಲ ಐಟಿ, ಇಡಿಯವರು ಓಡಿ ಬರುತ್ತಾರೆ’

ರಾಜ್ಯದಲ್ಲಿ ಎಲ್ಲಿ ನೋಡಿದರೂ ಲಂಚಾವತಾರ ತಾಂಡವವಾಡುತ್ತಿದೆ. 10 ಲಕ್ಷ ಅಥವಾ 20 ಲಕ್ಷಕ್ಕೆಲ್ಲ ಐಟಿ, ಇಡಿಯವರು ಓಡಿ ಬರುತ್ತಾರೆ. ಶಾಸಕರ ಪುತ್ರ ಪ್ರಶಾಂತ್​ ಕಚೇರಿಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ. ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಎಲ್ಲಿ ಹೋಗಿದೆ ಎಂದು ಡಿಕೆಶಿ ಪ್ರಶ್ನಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಬೇಕೆಂದು ಅವರು ಆಗ್ರಹಿಸಿದರು. ಸಿದ್ದರಾಮಯ್ಯ, ನಾನು ಅಂದು ವಿಧಾನಸೌಧದಲ್ಲಿ ಧರಣಿ ಮಾಡುತ್ತಿದ್ದಾಗ ಗೋಡೆ ಬಡಿದಿದ್ದೆವು. ಆಗ ವಿಧಾನಸೌಧದ ಗೋಡೆಗೆ ಬಡಿದಾಗ ಕಾಸು ಕಾಸು ಎನ್ನುತ್ತಿತ್ತು. ಡಿ. ಕೆಂಪಣ್ಣ 40%, ಮಠಾಧೀಶರು 30%, ವಿಶ್ವನಾಥ್ 20% ಆರೋಪ ಮಾಡಿದ್ದರು ಎಂದು ಡಿಕೆಶಿ ಹೇಳಿದರು.

ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ 40 ಲಕ್ಷ ರೂ. ಲಂಚ ಸ್ವೀಕರಿಸುವಾಗ ಪ್ರಶಾಂತ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಎಸ್​ಡಿಎಲ್​ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ. ಬೇರೆ ಟೆಂಡರ್​​ಗೆ ಸಂಬಂಧಿಸಿ ಇತರೆ ಮೂವರು ಕಚೇರಿಯಲ್ಲಿದ್ದರು. ಅವರೂ ಸಹ ಪ್ರಶಾಂತ್​​ಗೆ ಹಣ ನೀಡಲುಬಂದಿದ್ದರು. ಅವರನ್ನೂ ಬಂಧಿಸಲಾಗಿದೆ. ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ; ಹೀಗಿತ್ತು ಕಾರ್ಯಾಚರಣೆ

ವಿಧಾನಸಭೆ ಚುನಾವಣೆ ಪ್ರಚಾರದ ಭರಾಟೆ ಜೋರಾಗಿರುವ ಸಂದರ್ಭದಲ್ಲೇ ಬಿಜೆಪಿ ಶಾಸಕರ ಪುತ್ರ ಲಂಚ ಪಡೆಯುತ್ತಿದ್ದಾಗ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಪ್ರತಿಪಕ್ಷಗಳಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ಸಾಧನೆ ತೋರಿಸಿ ಮತ ಕೇಳುತ್ತೇವೆ; ಜಮೀರ್ ಅಹ್ಮದ್

ನಾವು ಸಾಧನೆ ತೋರಿಸಿ ಮತ ಕೇಳುವವರು. ಬಿಜೆಪಿಯವರಂತೆ ಹಿಂದೂ – ಮುಸ್ಲಿಂ ಜಗಳ ಸೃಷ್ಟಿಸಿ ಮತ ಕೇಳುವುದಿಲ್ಲ. ಅವರ ಸಾಧನೆ 40 ಪರ್ಸಂಟ್ ಕಮಿಷನ್ ಹೊಡೆಯುವುದು ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಟೀಕಿಸಿದ್ದಾರೆ. ಹುಕ್ಕೇರಿಯಲ್ಲಿ ನಡೆಯುತ್ತಿರುವ ಪ್ರಜಾಧ್ವನಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ರಾಜ್ಯದ ಜನರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಅನ್ನುತ್ತಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 pm, Thu, 2 March 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ