AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ನಾಯಕರು ಯಾರನ್ನೂ ಮುಗಿಸುವ ಪ್ರಶ್ನೆ ಇಲ್ಲ, ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಕುಮಾರಸ್ವಾಮಿಗೆ ಶಿವಕುಮಾರ್ ತಿರುಗೇಟು

ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಮಾಡಿರುವ ಸರಣಿ ಟ್ವೀಟ್ ವಿಚಾರವಾಗಿ ಸಿಂದಗಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ನಾಯಕರು ಯಾರನ್ನೂ ಮುಗಿಸುವ ಪ್ರಶ್ನೆ ಇಲ್ಲ. ಪಕ್ಷದ ನಾಯಕರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಕುಮಾರಸ್ವಾಮಿದು ರಾಜಕಾರಣ ಹೇಳಿಕೆ, ವಾಸ್ತವಾಂಶ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ನಾಯಕರು ಯಾರನ್ನೂ ಮುಗಿಸುವ ಪ್ರಶ್ನೆ ಇಲ್ಲ, ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ: ಕುಮಾರಸ್ವಾಮಿಗೆ ಶಿವಕುಮಾರ್ ತಿರುಗೇಟು
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
TV9 Web
| Edited By: |

Updated on:Oct 16, 2021 | 4:14 PM

Share

ಸಿಂದಗಿ‌: ಇಂದು ಬೆಳಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಮಾಡಿರುವ ಸರಣಿ ಟ್ವೀಟ್ ವಿಚಾರವಾಗಿ ಸಿಂದಗಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ನಾಯಕರು ಯಾರನ್ನೂ ಮುಗಿಸುವ ಪ್ರಶ್ನೆ ಇಲ್ಲ. ಪಕ್ಷದ ನಾಯಕರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. HDK ರಾಜಕೀಯವಾಗಿ ಏನಾದರು ಮಾತನಾಡಿರಬಹುದು. ಅದು ರಾಜಕಾರಣ ಹೇಳಿಕೆ, ವಾಸ್ತವಾಂಶ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ‌ ಉಪ ಚುನಾವಣೆ ಸಮರ ಪ್ರಚಾರ ಭರಾಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಕೆಪಿಸಿಸಿ ಅಧ್ಯಕ್ಷ ಡಿ‌ಕೆ ಶಿವಕುಮಾರ್ ಪ್ರಚಾರ ನಡೆಸಿದರು. ಇಂದು ಅನಂತ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಅಬ್ಸರ್ವರ್ ಸಭೆ ನಡೆಸಿದ ಬಳಿಕ ಮಾತನಾಡಿದ ಡಿಕೆಶಿ ಬೆಲೆ ಏರಿಕೆ ಬಿಸಿ ಎಲ್ಲರಿಗೂ ತಟ್ಟಿದೆ. ಮತದಾರ ತನಗೆ ಆಗಿರೋ ನೋವು ಹೇಳಿಕೊಳ್ಳಲು ಇದೊಂದು ಸಮಯ ಬಂದಿದೆ. ಅದನ್ನ ಹಾನಗಲ್ ಹಾಗೂ ಸಿಂದಗಿ ಮತದಾರರು ಮಾಡುತ್ತಾರೆ ಎಂದು ಆಶಿಸಿದರು.

ರಾಯಚೂರು ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ವಿವಾದಾತ್ಮಕ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಡಿ ಕೆ ಶಿವಕುಮಾರ್ ಇದು ಬಿಜೆಪಿಯ ಮೂಲಭೂತ ಸಂಸ್ಕೃತಿ. ಅಖಂಡ ಕರ್ನಾಟಕದ ಬಗ್ಗೆ ಚಿಂತನೆ ಇಲ್ಲ. ಸಾಯಂಕಾಲದ ಒಳಗೆ ಶಿವರಾಜ್ ಪಾಟೀಲ್ ನನ್ನು ಶಾಸಕ ಸ್ಥಾನದಿಂದ, ಪಕ್ಷದಿಂದ ಹೊರಗೆ ಹಾಕಬೇಕು. ಶಾಸಕ ಪಾಟೀಲ್ ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದರು. ಅಖಂಡ ಕರ್ನಾಟಕಕ್ಕೆ ಧಕ್ಕೆಯಾಗಿದೆ. ಈ ಹೇಳಿಕೆ ಮೂಲಕ ಗಡಿಯಲ್ಲಿ ಐಕ್ಯತೆಗೆ ಹಾಳು ಮಾಡಿದ್ದಾರೆ. ಸಿಎಂ ಕ್ಷಮೆ ಕೇಳಬೇಕು ಎಂದು ಡಿಕೆಶಿ ಇದೇ ವೇಳೆ ಆಗ್ರಹಿಸಿದರು.

ಇಂದು ಬೆಳಗ್ಗೆ ಸರಣಿ ಟ್ವೀಟ್​ ಮಾಡಿ, ಕುಮಾರಸ್ವಾಮಿ ಏನು ಹೇಳಿದರು? ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಸರಣಿ ಟ್ವೀಟ್​ಗಳನ್ನು ಮಾಡಿ, ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗ್ತಿದೆ ಎಂದು ಹೆಸರು ಉಲ್ಲೇಖಿಸದೆ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲಾ ಪೋಣಿಸಿ ‘ಅಹಿಂದ’ ಎಂದು ಜನರನ್ನು ‘ಅಡ್ಡದಾರಿ’ ಹಿಡಿಸಿದ. ‘ಸಿದ್ದಹಸ್ತ ಶೂರ’ರಿಂದ ತಮ್ಮ ಪಕ್ಷದ ಒಬ್ಬೊಬ್ಬ ನಾಯಕನನ್ನೇ ಟಾರ್ಗೆಟ್ ಮಾಡಿ ಮುಗಿಸ್ತಿದ್ದಾರೆ. ‘ಅಲ್ಪಸಂಖ್ಯಾತರ ಅಂತ್ಯ ರಾಜಕಾರಣ’ದ ಟರ್ಮಿನೇಟರ್‌ ಆಗಿ ಹೊರಹೊಮ್ಮಿದ್ದಾರೆ ಎಂದು ಹೆಸರು ಉಲ್ಲೇಖಿಸದೆ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಸರಣಿ ಟ್ವೀಟ್ ಮಾಡಿದ್ದಾರೆ.

ಸಿದ್ದಹಸ್ತ ಸೂತ್ರಧಾರಿಯಿಂದ ಒಳ ರಾಜಕೀಯ ನಡೆದಿದೆ. ಅದಕ್ಕೆ ಅಲ್ಪಸಂಖ್ಯಾತ ನಾಯಕರು ಬಲಿಯಾಗಿದ್ದಾರೆ. ಒಳ ರಾಜಕೀಯಕ್ಕೆ ಬಲಿಯಾದವರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್‌ನ ‘ರಾಜಕೀಯ ನರಮೇಧ’ಕ್ಕೆ ಕಾರಣ ಯಾರು? ಇದರ ಬಗ್ಗೆ ಜನರಿಗೆ ಗೊತ್ತಾಗಲಿ ಎಂದು ಹೆಚ್‌ಡಿಕೆ ಟ್ವೀಟ್ ಮಾಡಿ ಹೇಳಿದ್ದಾರೆ.

Siddaramaiah ವಿರುದ್ಧ ಮತ್ತೆ ಮುಗಿಬಿದ್ದ HD Kumaraswamy! ಸಿದ್ದರಾಮಯ್ಯ ಹೆಸರು ಉಲ್ಲೇಖಿಸದೆ HDK ಹೊಸ ಬಾಂಬ್

ಜೆಡಿಎಸ್ ನಾಯಕ  ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್​

(KPCC president dk shivakumar reacts to hd kumaraswamy tweet on siddaramaiah in sindagi)

Published On - 4:13 pm, Sat, 16 October 21

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್