AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಟಿ ಸೋಮಶೇಖರ್,​​ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಬೇಕೆಂದು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್​ ನೀಡಿದ್ದಾರೆ: ಶಾಸಕ ಎನ್​ ಶ್ರೀನಿವಾಸ್​​​

ಎಸ್.ಟಿ.ಸೋಮಶೇಖರ್ ಅಥವಾ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್​ ನೀಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಶಾಸಕ ಎನ್.ಶ್ರೀನಿವಾಸ್ ಹೇಳಿದ್ದಾರೆ. ಶಾಸಕ ಎಸ್.ಟಿ.ಸೋಮಶೇಖರ್​ ಸಹ ಕಾಂಗ್ರೆಸ್​ಗೆ ಬರುವ ವಿಶ್ವಾಸವಿದೆ. ಬೆಂಬಲಿಗರು ಬರುತ್ತೇವೆ ಅಂದ್ಮೇಲೆ ಸೋಮಶೇಖರ್ ಬಿಜೆಪಿಯಲ್ಲಿ ಇರ್ತಾರಾ ಎಂದು ಪ್ರಶ್ನಿಸಿದರು.

ಎಸ್​ಟಿ ಸೋಮಶೇಖರ್,​​ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಬೇಕೆಂದು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್​ ನೀಡಿದ್ದಾರೆ: ಶಾಸಕ ಎನ್​ ಶ್ರೀನಿವಾಸ್​​​
ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ಕಿರಣ್​ ಹನಿಯಡ್ಕ
| Edited By: |

Updated on: Aug 17, 2023 | 5:43 PM

Share

ಬೆಂಗಳೂರು, ಆಗಸ್ಟ್​ 17: ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ (ST Somashekar)​ ಕಾಂಗ್ರೆಸ್​ ಪಕ್ಷಕ್ಕ ಮರು ಸೇರ್ಪಡೆಯಾಗಲು ಬಯಸಿದ್ದು, ಸ್ವಲ್ಪ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗುತ್ತಿದೆ. ಇದರ ಮಧ್ಯೆ ಎಸ್.ಟಿ.ಸೋಮಶೇಖರ್ ಅಥವಾ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್​ ನೀಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಶಾಸಕ ಎನ್.ಶ್ರೀನಿವಾಸ್ ಹೇಳಿದ್ದಾರೆ. ಹೇರೋಹಳ್ಳಿಯಲ್ಲಿರುವ ಯಶವಂತಪುರ ಶಾಸಕರ ಕಚೇರಿಯಲ್ಲಿ ನಡೆದ ಸಭೆ ಮಾತನಾಡಿದ ಅವರು, ಶಾಸಕರು ನಮ್ಮ ಪಕ್ಷಕ್ಕೆ ಬರುವುದಾದರೆ ಸಿದ್ದರಾಮಯ್ಯ ಒಪ್ಪಿಕೊಳ್ಳುತ್ತಾರೆ. ಶಾಸಕ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರುವುದಾಗಿ ಹೇಳಿದ್ದಾರೆ ಎಂದರು.

ಸ್ಥಳೀಯವಾಗಿ ಶಾಸಕರು, ಬೆಂಬಲಿಗರ ಕತ್ತು ಕೊಯ್ಯುವ ಕೆಲಸ ನಡೆಯುತ್ತಿದೆ: ಶಾಸಕ ಎನ್.ಶ್ರೀನಿವಾಸ್

ಶಾಸಕ ಎಸ್.ಟಿ.ಸೋಮಶೇಖರ್​ ಸಹ ಕಾಂಗ್ರೆಸ್​ಗೆ ಬರುವ ವಿಶ್ವಾಸವಿದೆ. ಬೆಂಬಲಿಗರು ಬರುತ್ತೇವೆ ಅಂದ್ಮೇಲೆ ಸೋಮಶೇಖರ್ ಬಿಜೆಪಿಯಲ್ಲಿ ಇರ್ತಾರಾ ಎಂದು ಪ್ರಶ್ನಿಸಿದರು. ಸ್ಥಳೀಯವಾಗಿ ಶಾಸಕರು, ಬೆಂಬಲಿಗರ ಕತ್ತು ಕೊಯ್ಯುವ ಕೆಲಸ ನಡೆಯುತ್ತಿದೆ. ಎಸ್.ಟಿ.ಸೋಮಶೇಖರ್​ ಬಿಜೆಪಿಯಲ್ಲಿ ಗೆದ್ದಿದ್ದು ಸ್ವಂತ ಬಲದಿಂದ. ಅವರನ್ನು ಸೋಲಿಸಲು ಬಿಜೆಪಿಯವರು JDS ಜೊತೆ ಕೈಜೋಡಿಸಿದ್ದರು. ಇದೆಲ್ಲಾ ಕಾರಣಗಳಿಂದ ಶಾಸಕ ಸೋಮಶೇಖರ್, ಬೆಂಬಲಿಗರು ಬೇಸರಗೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಮರು ಸೇರ್ಪಡೆಗೆ ಬೆಂಬಲಿಗರ ಮನವಿ, ಸಮಯ ಕೇಳಿದ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್

ಬಿಜೆಪಿಯಲ್ಲಿ ನಮಗೆ ಉಳಿಗಾಲವಿಲ್ಲ, ನಮ್ಮ ವಿರುದ್ಧ ಪಿತೂರಿ ನಡೆಯುತ್ತಿದೆ. ಆದಷ್ಟು ಬೇಗ ಒಂದು ನಿರ್ಧಾರ ಮಾಡಿ ಎಂದು ಶಾಸಕ ಎಸ್.ಟಿ.ಸೋಮಶೇಖರ್​ಗೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಆದರೆ ಎಸ್.ಟಿ.ಸೋಮಶೇಖರ್ ಸ್ವಲ್ಪ ಸಮಯ ಬೇಕು ಎಂದಿದ್ದಾರೆ ಎಂದು ತಿಳಿಸಿದರು.

‘ಕಾಂಗ್ರೆಸ್​ನಲ್ಲಿ ಕಾಂಗ್ರೆಸ್ ಕೆಲಸ, ಬಿಜೆಪಿಯಲ್ಲಿ BJP ಕೆಲಸ ಮಾಡುವೆ’: ಎಸ್.ಟಿ.ಸೋಮಶೇಖರ್

ನಗದಲ್ಲಿ ಶಾಸಕ ಎಸ್.ಟಿ.ಸೋಮಶೇಖರ್​ ಮಾತನಾಡಿ, ‘ಕಾಂಗ್ರೆಸ್​ನಲ್ಲಿ ಕಾಂಗ್ರೆಸ್ ಕೆಲಸ, ಬಿಜೆಪಿಯಲ್ಲಿ BJP ಕೆಲಸ ಮಾಡುವೆ’ ನಾವು ಎಲ್ಲರ ಮೇಲೂ ವಿಶ್ವಾಸ ಇಡಬೇಕಾಗುತ್ತದೆ. ನನ್ನ ಪ್ರಕಾರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಏಕೆ ಬದಲಾದರಿ ಎಂದು ಕೇಳಿದ್ದೇನೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​ನತ್ತ ಮುಖ ಮಾಡಿದ್ರಾ ಶಾಸಕ ಎಸ್​ಟಿ ಸೋಮಶೇಖರ್? ಕಟೀಲ್, ಸಿಟಿ ರವಿ ಮೇಲಿಂದ ಮೇಲೆ ಕಾಲ್

ಕುಡಿಯುವ ನೀರಿನ ಬಗ್ಗೆ ಭಿಕ್ಷೆ ಕೇಳಬೇಕೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ಗೆ ಕೇಳಿದ್ದೇನೆ. ಇಂದು ಬೆಳಗ್ಗೆ ರಾಕೇಶ್ ಸಿಂಗ್​ಗೂ ರೇಗಿದ್ದೇನೆ. ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ