AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಟಿ ಸೋಮಶೇಖರ್,​​ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಬೇಕೆಂದು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್​ ನೀಡಿದ್ದಾರೆ: ಶಾಸಕ ಎನ್​ ಶ್ರೀನಿವಾಸ್​​​

ಎಸ್.ಟಿ.ಸೋಮಶೇಖರ್ ಅಥವಾ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್​ ನೀಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಶಾಸಕ ಎನ್.ಶ್ರೀನಿವಾಸ್ ಹೇಳಿದ್ದಾರೆ. ಶಾಸಕ ಎಸ್.ಟಿ.ಸೋಮಶೇಖರ್​ ಸಹ ಕಾಂಗ್ರೆಸ್​ಗೆ ಬರುವ ವಿಶ್ವಾಸವಿದೆ. ಬೆಂಬಲಿಗರು ಬರುತ್ತೇವೆ ಅಂದ್ಮೇಲೆ ಸೋಮಶೇಖರ್ ಬಿಜೆಪಿಯಲ್ಲಿ ಇರ್ತಾರಾ ಎಂದು ಪ್ರಶ್ನಿಸಿದರು.

ಎಸ್​ಟಿ ಸೋಮಶೇಖರ್,​​ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಬೇಕೆಂದು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್​ ನೀಡಿದ್ದಾರೆ: ಶಾಸಕ ಎನ್​ ಶ್ರೀನಿವಾಸ್​​​
ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್
ಕಿರಣ್​ ಹನಿಯಡ್ಕ
| Edited By: |

Updated on: Aug 17, 2023 | 5:43 PM

Share

ಬೆಂಗಳೂರು, ಆಗಸ್ಟ್​ 17: ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ (ST Somashekar)​ ಕಾಂಗ್ರೆಸ್​ ಪಕ್ಷಕ್ಕ ಮರು ಸೇರ್ಪಡೆಯಾಗಲು ಬಯಸಿದ್ದು, ಸ್ವಲ್ಪ ಕಾಲಾವಕಾಶ ಕೇಳಿದ್ದಾರೆ ಎನ್ನಲಾಗುತ್ತಿದೆ. ಇದರ ಮಧ್ಯೆ ಎಸ್.ಟಿ.ಸೋಮಶೇಖರ್ ಅಥವಾ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್​ ನೀಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಶಾಸಕ ಎನ್.ಶ್ರೀನಿವಾಸ್ ಹೇಳಿದ್ದಾರೆ. ಹೇರೋಹಳ್ಳಿಯಲ್ಲಿರುವ ಯಶವಂತಪುರ ಶಾಸಕರ ಕಚೇರಿಯಲ್ಲಿ ನಡೆದ ಸಭೆ ಮಾತನಾಡಿದ ಅವರು, ಶಾಸಕರು ನಮ್ಮ ಪಕ್ಷಕ್ಕೆ ಬರುವುದಾದರೆ ಸಿದ್ದರಾಮಯ್ಯ ಒಪ್ಪಿಕೊಳ್ಳುತ್ತಾರೆ. ಶಾಸಕ ಸೋಮಶೇಖರ್ ಬೆಂಬಲಿಗರು ಕಾಂಗ್ರೆಸ್ ಸೇರುವುದಾಗಿ ಹೇಳಿದ್ದಾರೆ ಎಂದರು.

ಸ್ಥಳೀಯವಾಗಿ ಶಾಸಕರು, ಬೆಂಬಲಿಗರ ಕತ್ತು ಕೊಯ್ಯುವ ಕೆಲಸ ನಡೆಯುತ್ತಿದೆ: ಶಾಸಕ ಎನ್.ಶ್ರೀನಿವಾಸ್

ಶಾಸಕ ಎಸ್.ಟಿ.ಸೋಮಶೇಖರ್​ ಸಹ ಕಾಂಗ್ರೆಸ್​ಗೆ ಬರುವ ವಿಶ್ವಾಸವಿದೆ. ಬೆಂಬಲಿಗರು ಬರುತ್ತೇವೆ ಅಂದ್ಮೇಲೆ ಸೋಮಶೇಖರ್ ಬಿಜೆಪಿಯಲ್ಲಿ ಇರ್ತಾರಾ ಎಂದು ಪ್ರಶ್ನಿಸಿದರು. ಸ್ಥಳೀಯವಾಗಿ ಶಾಸಕರು, ಬೆಂಬಲಿಗರ ಕತ್ತು ಕೊಯ್ಯುವ ಕೆಲಸ ನಡೆಯುತ್ತಿದೆ. ಎಸ್.ಟಿ.ಸೋಮಶೇಖರ್​ ಬಿಜೆಪಿಯಲ್ಲಿ ಗೆದ್ದಿದ್ದು ಸ್ವಂತ ಬಲದಿಂದ. ಅವರನ್ನು ಸೋಲಿಸಲು ಬಿಜೆಪಿಯವರು JDS ಜೊತೆ ಕೈಜೋಡಿಸಿದ್ದರು. ಇದೆಲ್ಲಾ ಕಾರಣಗಳಿಂದ ಶಾಸಕ ಸೋಮಶೇಖರ್, ಬೆಂಬಲಿಗರು ಬೇಸರಗೊಂಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ಗೆ ಮರು ಸೇರ್ಪಡೆಗೆ ಬೆಂಬಲಿಗರ ಮನವಿ, ಸಮಯ ಕೇಳಿದ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್

ಬಿಜೆಪಿಯಲ್ಲಿ ನಮಗೆ ಉಳಿಗಾಲವಿಲ್ಲ, ನಮ್ಮ ವಿರುದ್ಧ ಪಿತೂರಿ ನಡೆಯುತ್ತಿದೆ. ಆದಷ್ಟು ಬೇಗ ಒಂದು ನಿರ್ಧಾರ ಮಾಡಿ ಎಂದು ಶಾಸಕ ಎಸ್.ಟಿ.ಸೋಮಶೇಖರ್​ಗೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಆದರೆ ಎಸ್.ಟಿ.ಸೋಮಶೇಖರ್ ಸ್ವಲ್ಪ ಸಮಯ ಬೇಕು ಎಂದಿದ್ದಾರೆ ಎಂದು ತಿಳಿಸಿದರು.

‘ಕಾಂಗ್ರೆಸ್​ನಲ್ಲಿ ಕಾಂಗ್ರೆಸ್ ಕೆಲಸ, ಬಿಜೆಪಿಯಲ್ಲಿ BJP ಕೆಲಸ ಮಾಡುವೆ’: ಎಸ್.ಟಿ.ಸೋಮಶೇಖರ್

ನಗದಲ್ಲಿ ಶಾಸಕ ಎಸ್.ಟಿ.ಸೋಮಶೇಖರ್​ ಮಾತನಾಡಿ, ‘ಕಾಂಗ್ರೆಸ್​ನಲ್ಲಿ ಕಾಂಗ್ರೆಸ್ ಕೆಲಸ, ಬಿಜೆಪಿಯಲ್ಲಿ BJP ಕೆಲಸ ಮಾಡುವೆ’ ನಾವು ಎಲ್ಲರ ಮೇಲೂ ವಿಶ್ವಾಸ ಇಡಬೇಕಾಗುತ್ತದೆ. ನನ್ನ ಪ್ರಕಾರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್​ ಅಧಿಕಾರಕ್ಕೆ ಬಂದ ನಂತರ ಏಕೆ ಬದಲಾದರಿ ಎಂದು ಕೇಳಿದ್ದೇನೆ ಎಂದರು.

ಇದನ್ನೂ ಓದಿ: ಕಾಂಗ್ರೆಸ್​ನತ್ತ ಮುಖ ಮಾಡಿದ್ರಾ ಶಾಸಕ ಎಸ್​ಟಿ ಸೋಮಶೇಖರ್? ಕಟೀಲ್, ಸಿಟಿ ರವಿ ಮೇಲಿಂದ ಮೇಲೆ ಕಾಲ್

ಕುಡಿಯುವ ನೀರಿನ ಬಗ್ಗೆ ಭಿಕ್ಷೆ ಕೇಳಬೇಕೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್​ ಗಿರಿನಾಥ್​ಗೆ ಕೇಳಿದ್ದೇನೆ. ಇಂದು ಬೆಳಗ್ಗೆ ರಾಕೇಶ್ ಸಿಂಗ್​ಗೂ ರೇಗಿದ್ದೇನೆ. ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಅನುದಾನ ಬಿಡುಗಡೆಯಾಗಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪೊಲೀಸರ ಕಣ್ಣಿಗೆ ಬಿದ್ದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ