AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ವಿಧಾನಪರಿತ್ ಸದಸ್ಯ ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಆಕ್ರೋಶ ಭಗಿಲೆದ್ದಿದ್ದು, ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಮತೆ ಒತ್ತಾಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ
ಬಿಕೆ ಹರಿಪ್ರಸಾದ್
ರಾಮ್​, ಮೈಸೂರು
| Edited By: |

Updated on: Jul 24, 2023 | 9:59 AM

Share

ಮೈಸೂರು, (ಜುಲೈ 24): ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದ್ದ ವಿಧಾನಪರಿಷತ್ ಸದಸ್ಯ BK Hariprasad )ಬಿಕೆ ಹರಿಪ್ರಸಾದ್ ( ಹೇಳಿಕೆ ರಾಜ್ಯ ಕಾಂಗ್ರೆಸ್​ನಲ್ಲಿ (Congress) ಸಂಚಲನ ಮೂಡಿಸಿದೆ. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು; ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಿ.ಕೆ.ಹರಿಪ್ರಸಾದ್​ ಆಕ್ರೋಶ

ಬಿ ಕೆ ಹರಿಪ್ರಸಾದ್ ಅವರದ್ದು ದುರಂಹಕಾರದ ಹೇಳಿಕೆ. ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಿ ವಿಧಾನಪರಿಷತ್ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಅದನ್ನು ಬಿಟ್ಟು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ಸರಿಯಲ್ಲ ಎಂದು ಸಿದ್ದರಾಮಯ್ಯನವರ ಅಭಿಮಾನಿ , KPCC ಕಾರ್ಯದರ್ಶಿ ವರುಣ ಮಹೇಶ್ ಎಚ್ಚರಿಕೆ ನೀಡಿದರು.

ಇನ್ನು ಈ ಬಗ್ಗೆ ಮೈಸೂರಿನಲ್ಲಿ ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ