AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ

ಸಿದ್ದರಾಮಯ್ಯ ವಿರುದ್ಧ ಹೇಳಿಕೆಗೆ ವಿಧಾನಪರಿತ್ ಸದಸ್ಯ ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಆಕ್ರೋಶ ಭಗಿಲೆದ್ದಿದ್ದು, ಅವರನ್ನು ಪರಿಷತ್ ಸ್ಥಾನದಿಂದ ವಜಾ ಮಾಡುವಮತೆ ಒತ್ತಾಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ, ಬಿಕೆ ಹರಿಪ್ರಸಾದ್​ ವಿರುದ್ಧ ಕಾಂಗ್ರೆಸ್​ನಲ್ಲೇ ಭುಗಿಲೆದ್ದ ಆಕ್ರೋಶ
ಬಿಕೆ ಹರಿಪ್ರಸಾದ್
ರಾಮ್​, ಮೈಸೂರು
| Edited By: |

Updated on: Jul 24, 2023 | 9:59 AM

Share

ಮೈಸೂರು, (ಜುಲೈ 24): ಸಿಎಂ ಆಯ್ಕೆ ಮಾಡುವುದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ಕಿಡಿಕಾರಿದ್ದ ವಿಧಾನಪರಿಷತ್ ಸದಸ್ಯ BK Hariprasad )ಬಿಕೆ ಹರಿಪ್ರಸಾದ್ ( ಹೇಳಿಕೆ ರಾಜ್ಯ ಕಾಂಗ್ರೆಸ್​ನಲ್ಲಿ (Congress) ಸಂಚಲನ ಮೂಡಿಸಿದೆ. ಅಲ್ಲದೇ ಸಿದ್ದರಾಮಯ್ಯನವರ ಅಭಿಮಾನಿಗಳು ಬಿಕೆ ಹರಿಪ್ರಸಾದ್ ವಿರುದ್ಧ ಆಕ್ರೋಶಗೊಂಡಿದ್ದು, ಅವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ KPCC ಕಾರ್ಯದರ್ಶಿ ವರುಣ ಮಹೇಶ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತು; ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಿ.ಕೆ.ಹರಿಪ್ರಸಾದ್​ ಆಕ್ರೋಶ

ಬಿ ಕೆ ಹರಿಪ್ರಸಾದ್ ಅವರದ್ದು ದುರಂಹಕಾರದ ಹೇಳಿಕೆ. ಸಿಎಂ ವಿರುದ್ಧ ಮಾತನಾಡುವ ಹರಿಪ್ರಸಾದ್​ಗೆ ನೋಟಿಸ್ ನೀಡಿ ವಿಧಾನಪರಿಷತ್ ಸ್ಥಾನದಿಂದ ವಜಾ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹರಿಪ್ರಸಾದ್ ಕಾಂಗ್ರೆಸ್ ಪಕ್ಷ‌ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು. ಅದನ್ನು ಬಿಟ್ಟು ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ಸರಿಯಲ್ಲ ಎಂದು ಸಿದ್ದರಾಮಯ್ಯನವರ ಅಭಿಮಾನಿ , KPCC ಕಾರ್ಯದರ್ಶಿ ವರುಣ ಮಹೇಶ್ ಎಚ್ಚರಿಕೆ ನೀಡಿದರು.

ಇನ್ನು ಈ ಬಗ್ಗೆ ಮೈಸೂರಿನಲ್ಲಿ ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಕೆ.ಹರಿಪ್ರಸಾದ್ ಕಾಂಗ್ರೆಸ್‌ನ ಹಿರಿಯ ನಾಯಕರು. ಅವರು ಸಾಕಷ್ಟು ಸಿಎಂಗಳನ್ನು ಮಾಡಿದ್ದಾರೆ. ಆದರೆ ಹರಿಪ್ರಸಾದ್ ಆ ರೀತಿ ಹೇಳಿಕೆ ನೀಡಿರಲಾರರು. ಇದೆಲ್ಲವೂ ಮಾದ್ಯಮಗಳ ಸೃಷ್ಟಿ. ನಾನು ಹರಿಪ್ರಸಾದ್ ಏನು ಹೇಳಿದ್ದಾರೆ ನೋಡಿಲ್ಲ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!