AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್-ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ: ಕೃಷ್ಣ ಬೈರೇಗೌಡ

2024ಕ್ಕೆ ಡಿಕೆ ಶಿವಕುಮಾರ್ ಅವರು ತಿಹಾರ್ ಜೈಲಿಗೆ ಹೋಗುತ್ತಾರೆಂದು ಹೆಚ್​ಡಿ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಕೃಷ್ಣ ಬೈರೇಗೌಡ, ಜೆಡಿಎಸ್ ಮತ್ತು ಬಿಜೆಪಿ ಸಂಚಿನ ಸತ್ಯವನ್ನು ​ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ ಎಂದರು. ಅಷ್ಟು ಸುಲಭವಾಗಿ ಹೇಳುತ್ತಿದ್ದಾರೆ ಅಂದರೆ ಬಿಜೆಪಿಗೆ ಷರತ್ತು ವಿಧಿಸಿರಬಹುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಜೆಡಿಎಸ್-ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ: ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ ಮತ್ತು ಹೆಚ್​ಡಿ ಕುಮಾರಸ್ವಾಮಿ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Oct 10, 2023 | 4:17 PM

Share

ಚಿತ್ರದುರ್ಗ, ಅ.10: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಜೈಲಿಗೆ ಹೋಗುತ್ತಾರೆ ಎಂಬ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹೇಳಿಕೆಗೆ ತಿರುಗೇಟು ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಜೆಡಿಎಸ್ ಮತ್ತು ಬಿಜೆಪಿ ಸಂಚಿನ ಸತ್ಯವನ್ನು ಕುಮಾರಸ್ವಾಮಿ ಮಾತಿನ ಮೂಲಕ ಹೇಳಿದ್ದಾರೆ ಎಂದಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಹೇಳಿಕೆಗೆ ಈಗಾಗಲೇ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಬಿಜೆಪಿ‌ ಜೊತೆ ಜೆಡಿಎಸ್ ಕೈಜೋಡಿಸಿದೆ. ಬೇರೆ ಪಕ್ಷದ ರಾಜಕೀಯ ಹೇಳಿಕೆ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ, ಎಲ್ಲವನ್ನೂ ಎದುರಿಸಲು ಸಜ್ಜಾಗಿದ್ದೇವೆ ಎಂದರು.

ಇದನ್ನೂ ಓದಿ: ಶಿವಕುಮಾರ್ ರನ್ನು ಜೈಲಿಗೆ ಕಳಿಸಲೆಂದೇ ಕುಮಾರಸ್ವಾಮಿ ಬಿಜೆಪಿ ಜೊತೆ ಸಖ್ಯ ಬೆಳೆಸಿರುವರೇ? ಕೆಎಂ ಶಿವಲಿಂಗೇಗೌಡ

ಯಾವುದೇ ಸರ್ಕಾರ ಮಾಡದ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಕ್ರಾಂತಿಕಾರಿ ಗ್ಯಾರಂಟಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ. ಸರ್ಕಾರ ಬಡವರಿಗೆ ಸಹಾಯ ಮಾಡುತ್ತಿರುವುದು ಬಿಜೆಪಿ, ಜೆಡಿಎಸ್ ನಾಯಕರ ಕಣ್ಣು ಕುಕ್ಕುತ್ತಿದೆ. ನಮ್ಮ ಸರ್ಕಾರ‌ ಬಡವರು, ರೈತರು, ದುಡಿಯುವ ವರ್ಗದ ಪರವಿದೆ. ಜೆಡಿಎಸ್ ಮತ್ತು ಬಿಜೆಪಿಯವರು ಒಂದಾಗಿ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರನ್ನು ಜೈಲಿಗೆ ಕಳಿಸುವುದಾಗಿ ಹೇಳುತ್ತಿದ್ದಾರೆ. ಸೇಡಿನ ರಾಜಕಾರಣ ಮುಂದುವರಿದರೆ ಜನರೇ ಉತ್ತರ ನೀಡುತ್ತಾರೆ ಎಂದರು.

ಷರತ್ತು ವಿಧಿಸಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ

2024ಕ್ಕೆ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್, ಯಾವ ವಿಚಾರಕ್ಕೆ ಜೈಲಿಗೆ ಹಾಕುತ್ತಾರೆಂದು ಸರಿಯಾಗಿ ಹೇಳಬೇಕಲ್ವಾ? ಷರತ್ತು ವಿಧಿಸಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರಬೇಕು. ಅಷ್ಟು ಸುಲಭವಾಗಿ ಹೇಳುತ್ತಿದ್ದಾರೆ ಅಂದರೆ ಅಮಿತ್ ಶಾ ಜೊತೆ ಚರ್ಚೆ ವೇಳೆ ಕುಮಾರಸ್ವಾಮಿ ಷರತ್ತು ವಿಧಿಸಿರಬಹುದು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Tue, 10 October 23

Follow Us
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ರ‍್ಯಾಗಿಂಗ್​ನಿಂದ ನೊಂದ ಕೋತಿಮರಿಗೆ ಅಮ್ಮನಾದ ಗೊಂಬೆ!
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ
ಆಸ್ತಿ ನೋಂದಣಿಗೆ ಜನರ ಅಲೆದಾಟ ತಪ್ಪಿಸಲು ಬಜೆಟ್​ನಲ್ಲಿ ಮಹತ್ವದ ಘೋಷಣೆ