AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿಚಾರಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ, ಸಿದ್ದರಾಮಯ್ಯ ತಕ್ಷಣ ರಾಜಕೀಯ ನಿವೃತ್ತಿ ಪಡೆಯಲಿ; ಸಚಿವ ಈಶ್ವರಪ್ಪ ಹೇಳಿಕೆ

ಹಿಂದೂ, ಮುಸ್ಲಿಮರಿಗೆ ಪರಿಹಾರ ತಾರತಮ್ಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೀಚ ಕೆಲಸಕ್ಕೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಮಠಗಳನ್ನು ಒಡೆಯಲು ಹೊರಟಿದ್ದಾರೆ ಎಂದರು.

ಹಿಜಾಬ್ ವಿಚಾರಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ, ಸಿದ್ದರಾಮಯ್ಯ ತಕ್ಷಣ ರಾಜಕೀಯ ನಿವೃತ್ತಿ ಪಡೆಯಲಿ; ಸಚಿವ ಈಶ್ವರಪ್ಪ ಹೇಳಿಕೆ
ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on:Mar 26, 2022 | 11:05 AM

Share

ಶಿವಮೊಗ್ಗ: ಹಿಜಾಬ್ ವಿಚಾರವಾಗಿ ಬಿಜೆಪಿ (BJP) ವಿರುದ್ಧ ಕಾಂಗ್ರೆಸ್ (Congress) ಹುಚ್ಚು ನಾಯಿಯಂತೆ ಕೂಗುತ್ತಿದೆ ಅಂತ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ದೇಶದ ಜನರನ್ನು ಕಾಂಗ್ರೆಸ್ ಮೋಸ ಮಾಡುತ್ತಾ ಬಂದಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್​ಗೇ ಇರಲ್ಲ. ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಕಾಂಗ್ರೆಸ್​ನವರು ಮಾತನಾಡುತ್ತಿಲ್ಲ. ಧೈರ್ಯ ಇದ್ದರೆ ಕಾಂಗ್ರೆಸ್ ನಾಯಕರು ಇದನ್ನು ಖಂಡಿಸಲಿ. ಸಿದ್ದರಾಮಯ್ಯ ಕಾಂಗ್ರೆಸ್ ನಿರ್ನಾಮ ಮಾಡಿ ಹೋಗುತ್ತಾರೆ ಅಂತ ಹೇಳಿದರು.

ಹಿಂದೂ, ಮುಸ್ಲಿಮರಿಗೆ ಪರಿಹಾರ ತಾರತಮ್ಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೀಚ ಕೆಲಸಕ್ಕೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಮಠಗಳನ್ನು ಒಡೆಯಲು ಹೊರಟಿದ್ದಾರೆ ಎಂದರು.

ಹರ್ಷ ಕೊಲೆ ಆದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ತುಟಿ ಬಿಚ್ಚಿಲ್ಲ. ಹಿಂದೂ ಮತ್ತು ಮುಸ್ಲಿಂರು ಹೊಂದಾಣಿಕೆ ಮಾಡಿಕೊಳ್ಳಬೇಕಿದೆ. ಕಳೆದ ಚುನಾವಣೆಯಲ್ಲಿ ಮೂರೂವರೆ ಸಾವಿರ ಮತಗಳು ನನಗೆ ಬಂದಿದೆ. ಇಡೀ ದೇಶದಲ್ಲಿ ಮುಸ್ಲಿಂರು ಬಿಜೆಪಿಗೆ ಮತ ಹಾಕುತ್ತಿದ್ದಾರೆ. ದೇಶದಲ್ಲಿ ಪರಿವರ್ತನೆ ಆಗುತ್ತದೆ. ಈ ಪರಿವರ್ತನೆಗೆ ಕಾಂಗ್ರೆಸ್​ನವರು ಮುಸ್ಲಿಂರನ್ನು ಬಿಡುತ್ತಿಲ್ಲ ಅಂತ ಈಶ್ವರಪ್ಪ ಹೇಳಿದ್ದಾರೆ.

ಹಿಜಾಬ್ ವಿವಾದದಲ್ಲಿ ಸ್ವಾಮೀಜಿಗಳ ಬಟ್ಟೆ ಪ್ರಸ್ತಾಪಿಸಿದ ಸಿದ್ದರಾಮಯ್ಯ ರಾಜಕೀಯ ತೆವಲು ತೀರಿಸಿಕೊಳ್ಳಲು ಇಂತಹ ಹೇಳಿಕೆ ನೀಡಿದ್ದಾರೆ. ಇದು ಸಿದ್ದರಾಮಯ್ಯ ಮಾಡಿದ ಅಕ್ಷಮ್ಯ ಅಪರಾಧ. ಸಿದ್ದರಾಮಯ್ಯ ತಕ್ಷಣ ರಾಜಕೀಯ ನಿವೃತ್ತಿ ಪಡೆಯಲಿ. ಸಿದ್ದರಾಮಯ್ಯರನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ನಡವಳಿಕೆ ಹಿಂದೂ ವಿರೋಧಿ. ಸಿದ್ದರಾಮಯ್ಯ ಭಂಡರು, ರಾಜಕೀಯ ನಿವೃತ್ತಿ ಪಡೆಯಲ್ಲ. ಸಿದ್ದರಾಮಯ್ಯರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಿ ಅಂತ ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ

ಬೆಂಗಳೂರು ಕರಗದಲ್ಲಿ ಮುಸ್ಲಿಮರಿಗೆ ಮಳಿಗೆ ಹಾಕಲು ಬಿಡಲ್ಲ; ಕರಗ ಉತ್ಸವದ ಮಾಜಿ ಅಧ್ಯಕ್ಷ ಗೋಪಿ ಹೇಳಿಕೆ

ರಾಜಸ್ಥಾನ ರಾಜ್ಯ ಸರ್ಕಾರದ ವಿರುದ್ಧ ಶಾಸಕನ ಪ್ರತಿಭಟನೆ; ಪಾರ್ಕ್​​ನಲ್ಲಿ 12 ತಾಸು ಓಡುವುದಾಗಿ ಘೋಷಣೆ

Published On - 11:03 am, Sat, 26 March 22

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ