AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪ ಹಿರಿಯ ಸಚಿವರು, ಏನೇ ಮನಸ್ತಾಪವಿದ್ದರೂ ಸಿಎಂ ಜೊತೆ ಚರ್ಚಿಸಬೇಕಿತ್ತು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ

ಈಶ್ವರಪ್ಪನವರು ಹಿರಿಯ ಸಚಿವರು. ಹೀಗೆ ಬಹಿರಂಗವಾಗಿ ಪತ್ರ ಬರೆಯಬಾರದಿತ್ತು. ಏನೇ ಮನಸ್ತಾಪವಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಚರ್ಚಿಸಬೇಕು. ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬೇಕು. ಅದುಬಿಟ್ಟು ಹೀಗೆ ರಾಜ್ಯಪಾಲರಿಗೆ ಪತ್ರ ಬರೆಯಬಾರದಿತ್ತು.

ಈಶ್ವರಪ್ಪ ಹಿರಿಯ ಸಚಿವರು, ಏನೇ ಮನಸ್ತಾಪವಿದ್ದರೂ ಸಿಎಂ ಜೊತೆ ಚರ್ಚಿಸಬೇಕಿತ್ತು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Apr 01, 2021 | 12:22 PM

Share

ನವದೆಹಲಿ: ತಮ್ಮ ಇಲಾಖೆಯಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿರುವ ಬಗ್ಗೆ ಖುದ್ದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ವಿರುದ್ಧವೇ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದರು. ಹೀಗೆ ಸಿಎಂ ಯಡಿಯೂರಪ್ಪ ವಿರುದ್ಧ ಕೆ.ಎಸ್. ಈಶ್ವರಪ್ಪ ದೂರು ನೀಡಿರುವ ವಿಚಾರದ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಕೆ.ಎಸ್. ಈಶ್ವರಪ್ಪನವರು ಹಿರಿಯ ಸಚಿವರು. ಹೀಗೆ ಬಹಿರಂಗವಾಗಿ ಪತ್ರ ಬರೆಯಬಾರದಿತ್ತು. ಏನೇ ಮನಸ್ತಾಪವಿದ್ದರೂ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಚರ್ಚಿಸಬೇಕು. ಪಕ್ಷದ ವೇದಿಕೆಯಲ್ಲಿ ಪ್ರಸ್ತಾಪ ಮಾಡಬೇಕು. ಅದುಬಿಟ್ಟು ಹೀಗೆ ರಾಜ್ಯಪಾಲರಿಗೆ ಪತ್ರ ಬರೆಯಬಾರದಿತ್ತು. ಸದ್ಯ ಚುನಾವಣೆ ಮೇಲೆ ಗಮನ ಹರಿಸಿದ್ದೇವೆ. ಮೂರು ಉಪ ಚುನಾವಣೆ ಗೆಲ್ಲಲಿದ್ದೇವೆ. ಬಳಿಕ ನಾವು ಪತ್ರದ ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೂಕ್ಷ್ಮವಾಗಿ ಹೇಳಿದ್ದಾರೆ.

ಪತ್ರ ಬರೆದಿರುವುದರಲ್ಲಿ ವಿಶೇಷ ಏನಿಲ್ಲ; ಅದಕ್ಕೆ ಅಷ್ಟೊಂದು ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ

ರಾಜ್ಯಪಾಲರ ಜತೆ ಇಲಾಖೆ ಕುರಿತು ಆಡಳಿತಾತ್ಮಕ ಚರ್ಚೆ ನಡೆದಿದೆ. ರಾಜ್ಯಪಾಲರಿಗೆ ಪತ್ರ ಬರೆದಿರುವುದರಲ್ಲಿ ವಿಶೇಷ ಏನಿಲ್ಲ. ಇದಕ್ಕೆ ಅಷ್ಟೊಂದು ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಈ ವಿಚಾರವನ್ನು ಅವರು ಪ್ರಾಮುಖ್ಯತೆ ಮಾಡಿದ್ದಾರೆ. ಅವರು ಮಾಡಿರುವುದನ್ನು ನಾನು ತಪ್ಪು ಎಂದು ಹೇಳಲಾ? ನನ್ನ ಇಲಾಖೆ ವಿಚಾರ ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಹೀಗಾಗಿ ನಾನು ಅವರನ್ನ ಭೇಟಿಯಾಗಿ ಗಮನಕ್ಕೆ ತಂದಿದ್ದೇನೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ K.S.ಈಶ್ವರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ತಳಮಳ: ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿ ವಿರುದ್ಧ ರಾಜ್ಯಪಾಲರು, ಹೈಕಮಾಂಡ್​ಗೆ ಈಶ್ವರಪ್ಪ ದೂರು

Published On - 10:44 am, Thu, 1 April 21

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ