AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSDL: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ 800 ಕೋಟಿ ಅವ್ಯವಹಾರ ಆರೋಪ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದ ಬೆನ್ನಲ್ಲೆ ಶಾಸಕರ ಮೇಲಿನ ಆರೋಪಗಳು ಒಂದೊಂದಾಗಿಯೇ ಹೊರಬೀಳುತ್ತಿದೆ. ಇದೀಗ, ಮಾಡಾಳ್ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೆಎಸ್​ಡಿಎಲ್​ ನಿಯಮ ಮೀರಿ 800 ಕೋಟಿಗೂ ಅಧಿಕ ವೆಚ್ಚದ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿದ ಆರೋಪ ಕೇಳಿಬಂದಿದೆ.

KSDL: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ 800 ಕೋಟಿ ಅವ್ಯವಹಾರ ಆರೋಪ
ಮಾಡಾಳ್ ವಿರೂಪಾಕ್ಷಪ್ಪ
Follow us
Rakesh Nayak Manchi
|

Updated on:Mar 03, 2023 | 8:01 PM

ಬೆಂಗಳೂರು: ಬಿಜೆಪಿ ಶಾಸಕನ ಪುತ್ರ ಪ್ರಶಾಂತ್​ ಲೋಕಾಯುಕ್ತ (Lokayukta Raid) ಬಲೆಗೆಬಿದ್ದ ನಂತರ ಶಾಸಕರು ಅಧ್ಯಕ್ಷರಾಗಿದ್ದ ವೇಳೆ ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮ (KSDL)​ದಲ್ಲಿ ನಡೆದ ಭಾರೀ ಅವ್ಯವಹಾರ ಬೆಳಕಿಗೆ ಬಂದಿದೆ. ಕೆಎಸ್​ಡಿಎಲ್ ನಿಯಮ ಗಾಳಿಗೆ ತೂರಿ 800 ಕೋಟಿ ರೂಪಾಯಿಗೂ ಅಧಿಕ ವೆಚ್ಚದ ಕಚ್ಚಾ ಸಾಮಾಗ್ರಿಗಳನ್ನು ಖರೀದಿಸಿದ ಆರೋಪ ಸಂಬಂಧ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ವಿರುದ್ಧ KSDL ನೌಕರರ ಒಕ್ಕೂಟವು ಫೆಬ್ರವರಿ 21ರಂದೇ ಲೋಕಾಯುಕ್ತ ಕಚೇರಿಗೆ ದೂರು ನೀಡಿದೆ. ಟೆಂಡರ್​ದಾರರು ಸಾಮಾಗ್ರಿ ದರ ಶೇಕಡಾ 2ರಿಂದ 3ರಷ್ಟು ಹೆಚ್ಚಳಕ್ಕೆ ಅವಕಾಶವಿದೆ, ಆದರೆ ಕಚ್ಚಾ ಸಾಮಗ್ರಿ ದರ ಶೇ.70, 83, 140ರಷ್ಟು ಹೆಚ್ಚಿಸಿದ್ದರು. ಹೀಗಿದ್ದರೂ ಕಚ್ಚಾ ಸಾಮಗ್ರಿ ದರ ಹೆಚ್ಚಳದ ಬಗ್ಗೆ ನೆಗೋಸಿಯೇಷನ್​ ಕಮಿಟಿ, ಫೈನಾನ್ಸ್ ಕಮಿಟಿ ಕ್ರಮ ವಹಿಸಿಲ್ಲವೆಂದು ಲೋಕಾಯುಕ್ತರಿಗೆ ದೂರು ನೀಡಿದೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕೆಎಸ್​ಡಿಎಲ್ ಅಧ್ಯಕ್ಷರಾಗಿದ್ದಾಗ ಸಾಮಾಗ್ರಿ ಖರೀದಿಯಲ್ಲಿ 800 ಕೋಟಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಖರೀದಿ, ದಾಸ್ತಾನು ನಿಯಮ ಗಾಳಿಗೆ ತೂರಿ ಸ್ಯಾಂಡ್ರೋಲ್, ಸ್ಯಾಂಡಲ್ ಮೈಸೂರು ಕೋರ್, ಮಿಥೇಲ್​, ಟೋನಾಲಿಡ್, ಪ್ಯಾಚ್ ಆಯಿಲ್, ಸ್ಯಾಂಡಲ್​ವುಡ್ ಆಯಿಲ್, ಜೆರಾನಿಯಮ್ ಆಯಿಲ್ ಖರೀದಿಸಿದ್ದು, ಇದರಲ್ಲಿ ಅಕ್ರಮ ನಡೆದಿದೆ ಎಂದು ಲೋಕಾಯುಕ್ತಕ್ಕೆ ಕೆಎಸ್​ಡಿಎಲ್ ನೌಕರರ ಒಕ್ಕೂಟವು ದೂರು ನೀಡಿದೆ.

ಇದನ್ನೂ ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಸಿಕ್ಕಿತು ಕಂತೆ ಕಂತೆ ಹಣ, ಚಿನ್ನ

ಲಂಚ ಸ್ವೀಕಾರದ ವೇಳೆ ತನ್ನ ಪುತ್ರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಬೆನ್ನಲ್ಲೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕೆಎಸ್​ಡಿಎಲ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಪ್ತರ ಮೂಲಕ ಮುಖ್ಯಮಂತ್ರಿಯವರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಎಸಿಬಿ ರದ್ದುಗೊಂಡು ಲೋಕಾಯುಕ್ತ ಮರು ನಿರ್ಮಾಣದ ನಂತರ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಗಳಲ್ಲಿ ಇದು ಅತಿದೊಡ್ಡ ದಾಳಿಯಾಗಿದೆ. ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ಪುತ್ರನೇ ಬಂಧನಕ್ಕೊಳಗಾಗಿದ್ದಾನೆ. ಸದ್ಯ ದಾಖಲಾದ ಲೋಕಾಯುಕ್ತ ಎಫ್​ಐಆರ್​ನಲ್ಲಿ ಮೊದಲ ಆರೋಪಿಯಾಗಿ ಶಾಸಕ ಮಾಡಾಳ್ ಇದ್ದು, ಎರಡನೇ ಆರೋಪಿಯಾಗಿ ಶಾಸಕರ ಪುತ್ರನಾಗಿದ್ದಾನೆ. ಈತನ ಬಂಧನದ ನಂತರ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪ ಆರಂಭಗೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Fri, 3 March 23

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ