AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚರತ್ನ ಯಾತ್ರೆ ವೇಳೆ ಕಂಡ ಜನರ ಕಷ್ಟಗಳ ಸರಮಾಲೆಯನ್ನೇ ಸದನದ ಮುಂದಿಟ್ಟ ಕುಮಾರಸ್ವಾಮಿ

ಬಿಜೆಪಿ ಸರ್ಕಾರದಲ್ಲಿ ಒಂದು ವ್ಯವಸ್ಥೆ ಸರಿಯಿಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಹರಿಹಾಯ್ದರು. ರಾಜ್ಯಪಾಲರ ಭಾಷಣದ ಮೇಲೆ ವೇಳೆ ಡಬಲ್ ಎಂಜಿನ್ ಸರಕಾರದ ಕಾರ್ಯವೈಖರಿ ಕುರಿತು ಪ್ರಸ್ತಾಪಿಸಿದರು.

TV9 Web
| Edited By: |

Updated on:Feb 16, 2023 | 3:29 PM

Share

ಬೆಂಗಳೂರು: ಈ ಸರ್ಕಾರದ ಅವಧಿಯಲ್ಲಿ ಬಡವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲ. ರಾಯಚೂರಿನಲ್ಲಿ 6 ಕಿ.ಮೀ ಮಕ್ಕಳು ನಡೆಯುವ ಸ್ಥಿತಿ ನಿರ್ಮಾಣವಾಗಿದೆ. ಕೊರೋನಾ ಬಂದಾಗ ಎಲ್ಲಾ ಸರಿ ಮಾಡಿದ್ದೇವೆ ಎಂದು ಭಾಷಣ ಮಾಡಿದ್ದಾರೆ. ಆದರೆ ಒಂದು ವ್ಯವಸ್ಥೆ ಇಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ (Kumaraswamy) ಹರಿಹಾಯ್ದರು.  ರಾಜ್ಯಪಾಲರ ಭಾಷಣದ ಮೇಲೆ ವೇಳೆ ಡಬಲ್ ಎಂಜಿನ್ ಸರಕಾರದ ಕಾರ್ಯವೈಖರಿ ಕುರಿತು ಮಾತನಾಡಿ, ಶಾಲೆ ಹೋಗುವ ಮಕ್ಕಳ್ಳಿಗೆ ಬಸ್​ ಇಲ್ಲದೆ ಸಂಗತಿ ಗೊತ್ತಾಯಿತು. ಕೊರಟಗೆರೆಯಲ್ಲಿ ಅದಕ್ಕೆ ನಾನೇ ಒಂದು ವಾಹನ ವ್ಯವಸ್ಥೆ ಮಾಡಿದೆ ಎಂದು ಹೇಳಿದರು.

ತೊಗರಿ ಬೆಳೆಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ

ತೊಗರಿ ಬೆಳೆಗಾರರಿಗೆ ನೆಟ್ಟೆ ರೋಗದಿಂದ ಸಂಕಷ್ಟವಾಗಿದೆ. ಅವರಿಗೆ ಪರಿಹಾರ ಕೊಡಲು ಯಾವುದೇ ಸಚಿವರು ಇನ್ನೂ ಭರವಸೆ ಕೊಟ್ಟಿಲ್ಲ. ತೊಗರಿ ಬೆಳೆಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಬೆಳೆ ವಿಮೆ ಇನ್ನೂ ರೈತರಿಗೆ ಬಂದಿಲ್ಲ. ಹತ್ತಿ, ತೊಗರಿ, ಕಬ್ಬು, ಸೇರಿದಂತೆ ಎಲ್ಲಾ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ನನ್ನ ಸರ್ಕಾರದ ಅವಧಿಯಲ್ಲಿ ಸಾಲ ಮನ್ನಾ ಮಾಡಿದ್ದರಿಂದ ಡಿಸಿಸಿ ಬ್ಯಾಂಕ್​ಗಳು ಉಳಿದವು. ಇಲ್ಲದಿದ್ದರೆ ದಿವಾಳಿ ಆಗುತ್ತಿದ್ದವು ಎಂದು ತಿಳಿಸಿದರು.

ಇದನ್ನೂ ಓದಿ: Bangalore, Karnataka News Live: ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ, ಸಚಿವ ಅಶ್ವಥ್ ನಾರಾಯಣ ಭಾವಚಿತ್ರಕ್ಕೆ ಚಪ್ಪಲಿ ಏಟು

ಸಾಲಮನ್ನಾದ ಲಾಭ ರೈತರಿಗೆ ಆಗುತ್ತಿಲ್ಲ

ತಾಜ್​ ವೆಸ್ಟ್ ಎಂಡ್​ನಲ್ಲಿ ಇದ್ದ ಬಗ್ಗೆ ಬಂದಿರುವ ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವೆಸ್ಟ್​ ಎಂಡ್​ಗೆ ನಾನು ಆಟ ಆಡಲು ಹೋಗಿದ್ನಾ? 19 ಗಂಟೆ ಕೆಲಸ ಮಾಡಿದ್ದೇನೆ, ಬಡವರಿಗೆ ನೆರವಾಗಿದ್ದೇನೆ. ಬಂಗ್ಲೆ ಕೊಟ್ಟಿದ್ದಾರಾ ನನಗೆ ಎಂದು ಪ್ರಶ್ನಿಸಿದರು. ನಮ್ಮ ರಾಜ್ಯದಲ್ಲಿ ಪ್ರಗತಿಯ ಜೊತೆಗೆ ಬಡತನವು ಜಾಸ್ತಿಯಾಗಿದೆ. ನಗರದ ಸ್ಲಂ ಮತ್ತು ಹಳ್ಳಿಗಳಿಗೆ ಹೋಗಿ ನೋಡಿ, ಸಾಲ ಮನ್ನಾದ ಲಾಭ ರೈತರಿಗೆ ಆಗುತ್ತಿಲ್ಲ ಎಂದರು.

ಸಾಲಮನ್ನಾ ಯೋಜನೆ ಲಘುವಾಗಿ ಪರಿಗಣಿಸಿದ ಬಿಜೆಪಿ ಸರ್ಕಾರ 

ಹುಬ್ಬಳ್ಳಿಯಲ್ಲಿ ಎರಡು ಬ್ಯಾಂಕ್​ಗಳು ರೈತರಿಗೆ ಸಾಲಮನ್ನಾ ಲಾಭ ಕೊಡ್ತಿಲ್ಲ. ಅಂತಹ ಬ್ಯಾಂಕ್​ಗಳ ಮೇಲೆ ಕ್ರಮ ಆಗಬೇಕಿತ್ತು. ಇನ್ನೂ ಯಾಕೆ ಕ್ರಮ ತೆಗೆದುಕೊಂಡಿಲ್ಲ? ಹಿಂದಿನ ಸರ್ಕಾರದ ಸಾಲಮನ್ನಾ ಯೋಜನೆಯನ್ನು ಈ ಸರಕಾರ ಮುಂದುವರಿಸುತ್ತಿಲ್ಲ. ಸಾಲ ಮನ್ನಾ ಯೋಜನೆಯನ್ನು ಈ ಸರ್ಕಾರ ಲಘುವಾಗಿ ಪರಿಗಣಿಸಿದೆ. ರೈತರಿಗೆ ಸಾಲಮನ್ನಾ ಲಾಭ ಸಿಗಬೇಕಲ್ಲವೇ? 1890 ಕೋಟಿ ರೂ. ಸಾಲಮನ್ನಾದ ಲಾಭ ರೈತನಿಗೆ ಇನ್ನೂ ಕೊಟ್ಟಿಲ್ಲ ಎಂದ ಕಿಡಿಕಾರಿದರು.

ಇದನ್ನೂ ಓದಿ: ಬ್ರಾಹ್ಮಣ ಸಿಎಂ ವಿಚಾರ: ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ವಿಧಾನ ಪರಿಷತ್​​ ಮಾಜಿ ಸದಸ್ಯೆ ಎಸ್​ ಆರ್​ ಲೀಲಾ

ಕುಮಾರಸ್ವಾಮಿಗೆ ಸಚಿವ ಜೆ.ಸಿ. ಮಾಧುಸ್ವಾಮಿ ಆಕ್ಷೇಪ

ಕಾಂಗ್ರೆಸ್ ಬಿಜೆಪಿ ಸದನದಲ್ಲಿ ತೌಡು ಕುಟ್ಟುವ ಕೆಲಸ ಮಾಡ್ತಿದೆ ಎಂದು ಹೆಚ್​. ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಇದಕ್ಕೆ ಸದನದಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು. ನಮ್ಮ ಬಗ್ಗೆ ಮಾತನಾಡಿ ಅದು ರಾಜಕೀಯ. ಆದರೆ ತೌಡು ಕುಟ್ಟುವ ಕೆಲಸ ಎಂದು ಸಾರ್ವಜನಿಕವಾಗಿ ಹೇಳಿದರೆ ಹೇಗೆ? ನಾನು‌ ಸದನಕ್ಕೆ ಹೋಗಲ್ಲ ಎಂದು ಹೇಳಿದರೆ ಹೇಗೆ? ತಾವು ಹಿರಿಯರು, ಮಾರ್ಗದರ್ಶಕರಾಗಬೇಕು. ರಾಜಕೀಯವಾಗಿ ಮಾತನಾಡಿ, ಆದರೆ ಸದನದ ಕಾರ್ಯಕಲಾಪಗಳ ಬಗ್ಗೆ ಈ ರೀತಿ ಮಾತನಾಡುದು ಸರಿಯಲ್ಲ ಎಂದರು.

ಇದಕ್ಕೆ ಸದನದಲ್ಲಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ನಾನು ತೌಡು ಕುಟ್ಟುವ ಕೆಲಸ ಆಗಿದೆ ಎಂದು ಎಲ್ಲೂ ಹೇಳಿಲ್ಲ. ಸದನದಲ್ಲಿ ನಿನ್ನೆ ಸಿದ್ದರಾಮಯ್ಯ ಮಾತನಾಡುವಾಗ ತೌಡು ಕುಟ್ಟುವ ಕೆಲಸ ಎಂದು ಚರ್ಚೆ ಆಗಿದೆ. ಬೆಳಗಾವಿ ಅಧಿವೇಶನಕ್ಕೆ ಪಕ್ಷದ ಕಾರ್ಯಕ್ರಮ ಇದ್ದ ಕಾರಣ ಬರಲಿಲ್ಲ. ಆದರೆ ನಾನು ಈ ರೀತಿಯಲ್ಲಿ ಹೇಳಿಕೆ ಕೊಟ್ಟಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:29 pm, Thu, 16 February 23

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ