AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬುರಾವ್ ಚಿಂಚನಸೂರ್​ಗೆ ವಿಧಾನ ಪರಿಷತ್ ಟಿಕೆಟ್ ಕೊಟ್ಟ ಬಿಜೆಪಿ: ಕೋಲಿ ಸಮುದಾಯದ ಅಸಮಾಧಾನ

ಬಿಜೆಪಿ ಪಕ್ಷದಿಂದ ಕೋಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಹಲವು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಬಾಬುರಾವ್ ಚಿಂಚನಸೂರ್​ಗೆ ವಿಧಾನ ಪರಿಷತ್ ಟಿಕೆಟ್ ಕೊಟ್ಟ ಬಿಜೆಪಿ: ಕೋಲಿ ಸಮುದಾಯದ ಅಸಮಾಧಾನ
ಬಾಬುರಾವ್ ಚಿಂಚನಸೂರ್
TV9 Web
| Edited By: |

Updated on: Jul 31, 2022 | 3:13 PM

Share

ಯಾದಗಿರಿ: ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿಯಿಂದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ನೀಡಿದ್ದು ಕೋಲಿ ಸಮೂದಾಯದ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಬಿಜೆಪಿ ಪಕ್ಷದಿಂದ ಕೋಲಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಹಲವು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಕೋಲಿ ಸಮುದಾಯದವರಿಗೆ ಟಿಕೆಟ್ ತಪ್ಪಿಸಲು ಬಿಜೆಪಿ ಹುನ್ನಾರ ನಡೆಸಿದೆ. ಗುರುಮಠಕಲ್‌ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಬಾಬುರಾವ್ ಚಿಂಚನಸೂರ್ ಅವರಿಗೆ ಟಿಕೆಟ್ ಕೊಡಬೇಕಿತ್ತು. ಈ ಅವಕಾಶ ತಪ್ಪಿಸುವ ಉದ್ದೇಶದಿಂದಲೇ ಪರಿಷತ್ ಟಿಕೆಟ್ ಕೊಟ್ಟಿದ್ದಾರೆ. ಕೋಲಿ ಸಮೂದಾಯದ ಮತಗಳನ್ನು ಕ್ರೋಡಿಕರಿಸಲು ಬಿಜೆಪಿ ನಡೆಸಿರುವ ಸಂಚು ಇದು ಎಂದು ಆರೋಪ ಮಾಡಲಾಗಿದೆ.

ಮುಂದಿನ ಟಿಕೆಟ್ ತಪ್ಪಿಸಲು ವಿಧಾನ ಪರಿಷತ್ ಚುನಾವಣೆಯನ್ನು ದಾಳವಾಗಿ ಬಳಸಿಕೊಂಡಿರುವ ಬಗ್ಗೆ ನಮಗೆ ಅಸಮಾಧಾನವಿದೆ. ಐದು ಬಾರಿ ಶಾಸಕರಾಗಿ ಎರಡು ಬಾರಿ ಮಂತ್ರಿಯಾದವರು ಚಿಂಚನಸೂರ್. ಗುರುಮಠಕಲ್​ನಿಂದ ಎರಡು ಬಾರಿ ಗೆದ್ದಿದ್ದರು. ಆದರೆ ಕಳೆದ ಬಾರಿ ಸೋತಿದ್ದಾರೆ. ಅವರಿಗೆ ಅಲ್ಪ ಅವಧಿಯ ಅಧಿಕಾರ ಕೊಟ್ಟು ಅನ್ಯಾಯ ಮಾಡಲಾಗುತ್ತಿದೆ ಎಂದು ಕೋಲಿ ಸಮುದಾಯದ ಮುಖಂಡ ಉಮೇಶ್ ಮುದ್ನಾಳ್ ಅಸಮಧಾನ ವ್ಯಕ್ತಪಡಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಅವರಿಗೆ ಗುರುಮಠಕಲ್​ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೊಡಿದ್ದರೆ ಕೋಲಿ ಸಮುದಾಯ ಬೇರೆಯೇ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. 45 ವರ್ಷಗಳ ಕಾಲ‌ ಸೋತಿರದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸುವಲ್ಲಿ ಮತ್ತು ಉಮೇಶ್ ಜಾಧವ್ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಾಬುರಾವ್ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಕೋಲಿ‌ ಸಮೂದಾಯಕ್ಕೆ ಪರಿಶಿಷ್ಟ ವರ್ಗದ ಸ್ಥಾನಮಾನ ನೀಡುವ ಭರವಸೆ ನೀಡಿದ್ದ ಸರ್ಕಾರ ಈವರೆಗೆ ತನ್ನ ಮಾತು ಈಡೇರಿಸಿಲ್ಲ ಬಿಜೆಪಿಯಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಅವರು ಆರೋಪ ಮಾಡಿದರು.

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ