AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟಿಸುವ ಬದಲು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು

Hassan News: 2018ರಲ್ಲಿ ಬಿಜೆಪಿಯವರು ಪ್ರಣಾಳಿಕೆಯಲ್ಲಿ 600 ಭರವಸೆ ನೀಡಿದ್ದರು. ಯಡಿಯೂರಪ್ಪ ಅವಧಿಯಲ್ಲಿ ಎಷ್ಟು ಬೊಮ್ಮಾಯಿ ಅವಧಿಯಲ್ಲಿ ಎಷ್ಟು ಭರವಸೆ ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಪ್ರತಿಭಟಿಸುವ ಬದಲು ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು
ಸಿದ್ದರಾಮಯ್ಯ
ಮಂಜುನಾಥ ಸಿ.
| Updated By: Rakesh Nayak Manchi|

Updated on: Jun 27, 2023 | 4:11 PM

Share

ಹಾಸನ: ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಹೇಳಿದ್ದೆಲ್ಲವನ್ನೂ ಮಾಡಿದ್ದಾರಾ? ಬಿಜೆಪಿಯವರಿಗೆ ಪ್ರತಿಭಟನೆ ಮಾಡುವ ಯಾವ ನೈತಿಕತೆ ಇದೆ ಎಂದು ಹಾನಸದಲ್ಲಿ (Hassan) ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ. 10 ಕೆಜಿ ಅಕ್ಕಿ ನೀಡದಿದ್ದರೆ ಜುಲೈ ಒಂದರಿಂದ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿ (BJP) ನಾಯಕರಿಗೆ ಹಾಸನದಲ್ಲಿ ಸವಾಲು ಹಾಕಿದ ಸಿದ್ದರಾಮಯ್ಯ, ಬಿಜೆಪಿಯವರು ಪ್ರತಿಭಟನೆ ಮಾಡುವ ಬದಲು ಕೇಂದ್ರದಿಂದ ಹೆಚ್ಚುವರಿ ಅಕ್ಕಿ ಕೊಡಿಸಲಿ ಎಂದರು.

ರಾಜಕೀಯ ಗಿಮಿಕ್ ಮಾಡಬಾರದು ಎಂದು ಹೇಳಿದ ಸಿದ್ದರಾಮಯ್ಯ, ನಾವು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿದ್ದೇವೆ. ಅಕ್ಕಿಯನ್ನು ಖರೀದಿ ಮಾಡುತ್ತೇವೆ. ಬಿದಿಗಿಳಿದು ಹೋರಾಟ ಮಾಡುವ ಬದಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ ಅಕ್ಕಿ ಕೊಡಿಸಲಿ. ಬಡವರಿಗೆ ಅಕ್ಕಿ ಕೊಡಬೇಕನ್ನುವುದು ನಮ್ಮ ನಿಲುವಾಗಿದೆ ಎಂದರು. ಕೇಂದ್ರ ಸರ್ಕಾರದವರು ಈಗ ರಾಜಕೀಯ ಮಾಡುತ್ತಿದ್ದಾರಲ್ವಾ, ದ್ವೇಷದ ರಾಜಕಾರಣ ಮಾಡುತ್ತೀರಲ್ವಾ ಎಂದು ಬಿಜೆಪಿ ನಾಯಕರನ್ನು ಪ್ರಶ್ನಿಸಿ ನಿಮ್ಮ ಬಳಿ ಕೇಳಿದರೆ ಅಕ್ಕಿ ಕೊಡಿಸಿ ಅಂತ ನೀವು ದಯಮಾಡಿ ಹೇಳಿ ಎಂದು ಮಾಧ್ಯಮದವರಿಗೆ ಸೂಚಿಸಿದರು.

ಕೇಂದ್ರ ಸರ್ಕಾರವನ್ನು ಕೇಳಿ 10 ಕೆಜಿ ಅಕ್ಕಿ ಕೊಡುತ್ತೇವೆ ಅಂತ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದೀರಾ ಎಂಬ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಅಶೋಕ್, ಯಡಿಯೂರಪ್ಪ, ಬಸವರಾಜ‌ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತಾ? ನಾವು ಘೋಷಣೆ ಮಾಡಿದ್ದೆವು. ಆರಂಭದಲ್ಲಿ ಎಫ್‌ಸಿಐ ಹೆಚ್ಚುವರಿ ಅಕ್ಕಿ ಕೊಡಲು ಒಪ್ಪಿತ್ತು. ನಂತರ ಕೊಡುವುದಿಲ್ಲ ಎಂದು ಪತ್ರ ಬರೆದಿದೆ. ಇದರ ಅರ್ಥ ಏನು? ರಾಜಕೀಯ ‌ಅಲ್ಲವೇ ಇದು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Anna Bhagya Scheme: 3 ಏಜನ್ಸಿಗಳಿಂದ ಅಕ್ಕಿ ವಿತರಣೆಗೆ ತಾತ್ವಿಕ ಒಪ್ಪಿಗೆ: ವಾರದಲ್ಲಿ ಅನ್ನಭಾಗ್ಯ ಯೋಜನೆ ಭವಿಷ್ಯ ನಿರ್ಧಾರ

ಬಡವರಿಗೆ ಅಕ್ಕಿ ವಿತರಣೆಯಲ್ಲೂ ರಾಜಕೀಯ ಮಾಡುವುದು ನೀಚತನ. ನಾವೇನು ಪುಕ್ಕಟೆ ಅಕ್ಕಿ ಕೇಳಿಲ್ಲ, ಹಣ ಕೊಡುತ್ತೇವೆ ಎಂದರೂ ಕೊಡುತ್ತಿಲ್ಲ. ಏನೇ ಆಗಲಿ ನಾವು 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ವಿರೋಧ ಪಕ್ಷದ ಮಾತಿಗೆ ಯಾರೂ ಕಿವಿಗೊಡಬೇಡಿ. ನಾವು ಹೇಳಿದ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಈ ಹಿಂದೆ ನಾವು 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಿದ್ದೆವು ಎಂದರು.

2022-23 ರಲ್ಲಿ ತೇರ್ಗಡೆಹೊಂದಿರುವ ಪದವಿ ವಿದ್ಯಾರ್ಥಿಗಳು, ಡಿಪ್ಲೊಮಾ ಓದಿದವರಿಗೆ 24 ತಿಂಗಳು ಯುವನಿಧಿ ಯೋಜನೆ ಕೊಡುತ್ತೇವೆ. ಅಷ್ಟರೊಳಗೆ ಅವರು ಕೆಲಸ ಹುಡುಕಿಕೊಳ್ಳಬೇಕು. ಒಂದು ವೇಳೆ ಕೆಲಸ ಸಿಕ್ಕಿದರೆ ಅವರಿಗೆ ಯುವನಿಧಿ ಕೊಡುವುದನ್ನು ನಿಲ್ಲಿಸಲಾಗುವುದು ಎಂದರು.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಮಾತನಾಡಿದ ಸಿಎಂ, ಆಗಸ್ಟ್​​ 16ರಂದು ಯೋಜನೆ ಜಾರಿಯಾಗಲಿದೆ. ಇದರಿಂದ 1.28 ಕೋಟಿ ಕುಟುಂಬಕ್ಕೆ ಅನುಕೂಲವಾಗಲಿದೆ ಎಂದರು. ಈ ವೇಳೆ ಹಿರಿಯ ನಾಗರಿಕರಿಗೆ ಏನು ಕೊಡುತ್ತೀರಾ ಎಂದು ವ್ಯಕ್ತಿಯೊಬ್ಬರು ಕೇಳಿದ ಪ್ರಶ್ನೆಗೆ ‘ಏಯ್ ಕೂತ್ಕೊಳಯ್ಯಾ’ ಎಂದರು.

ಈ ಘಟನೆ ಆಗುತ್ತಿದ್ದಂತೆ, ಶಿವಲಿಂಗೇಗೌಡರನ್ನು ಮಂತ್ರಿ ಮಾಡುವಂತೆ ಬೆಂಬಲಿಗರು ಘೋಷಣೆ ಕೂಗಲು ಆರಂಭಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಂದೆ ಶಿವಲಿಂಗೇಗೌಡರನ್ನು ಮಂತ್ರಿ ಮಾಡಲಾಗುವುದು ಎಂದರು. ಇದಕ್ಕೆ ಬೆಂಬಲಿಗರು ಸಿಳ್ಳೆ ಚಪ್ಪಾಳೆ ಹೊಡೆದರು.

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಐದೂವರೆ ಲಕ್ಷ ಹುದ್ದೆಗಳನ್ನು ಒಂದೇ ಬಾರಿ ಭರ್ತಿ ಮಾಡಲು ಸಾಧ್ಯವಿಲ್ಲ. ಹಂತ ಹಂತವಾಗಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂದರು. 5 ಗ್ಯಾರಂಟಿ ಅನುಷ್ಠಾನಕ್ಕೆ ವರ್ಷಕ್ಕೆ 59 ಸಾವಿರ ಕೋಟಿ ಹಣ ಬೇಕಾಗಿರುವುದರಿಂದ ಈ ವರ್ಷ ಸರ್ಕಾರದ ಮೇಲೆ ಹೆಚ್ಚಿನ ಹೊರೆ ಬೀಳಲಿದೆ ಎಂದರು.

ಕೆಂಪೇಗೌಡರ ದೂರ ದೃಷ್ಟಿಯಿಂದ ಬೆಂಗಳೂರು ನಿರ್ಮಾಣ

ಇಂದು ಬೆಂಗಳೂರು ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಆಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದರೆ ಅದಕ್ಕೆ ಕಾರಣ ಕೆಂಪೇಗೌಡರು. ಚಿಕ್ಕಂದಿನಲ್ಲೇ ವಿಜಯನಗರ ಸಾಮ್ರಾಜ್ಯ ನೋಡಿ ಅಂತಹ ಸುಂದರ ನಗರ ಕಟ್ಟಬೇಕು ಎಂದು ಕನಸು ಕಟ್ಟಿದವರು. 21 ನೇ ವಯಸ್ಸಿಗೆ ಗದ್ದುಗೆ ಏರಿದ ಕೆಂಪೇಗೌಡರು ಸಾಕಷ್ಟು ಅಭಿವೃದ್ಧಿ ಮಾಡಿದ್ದರು. ದೂರ ದೃಷ್ಟಿ ಇಲ್ಲದವರು ಒಳ್ಳೆ ನಾಡು, ಒಳ್ಳೆಯ ದೇಶ ಕಟ್ಟಲು ಸಾದ್ಯವಿಲ್ಲ. ಕೆಂಪೇಗೌಡರಿಗೆ ದೂರ ದೃಷ್ಟಿ ಇದ್ದಿದ್ದರಿಂದಲೇ ಈಗಿನ ಬೆಂಗಳೂರು ನಿರ್ಮಾಣ ಆಗಿದೆ. ಸಮಾಜ ಸುದಾರಕರು ಜಾತಿಗೆ ಸೀಮಿತ ಆಗಬಾರದು ಅವರು ಸಮಾಜದ ಸ್ವತ್ತಾಗಬೇಕು. ಹಾಗಾಗಿಯೇ ಅನೇಕ ಮಹನೀಯರ ಜಯಂತಿಯನ್ನು ಮಾಡಿದೆ. ಅದರಲ್ಲಿ ಕೆಂಪೇಗೌಡ ಜಯಂತಿ ಕೂಡ ಒಂದು. ಕೆಂಪೇಗೌಡ ಅವರು ನಾಡಿನ ಏಳು ಕೋಟಿ ಜನರ ಆಸ್ತಿ ಎಂದರು.

ರಾಯಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ