AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ: ಪ್ರತಾಪ್​ ಸಿಂಹ ವಿರುದ್ಧ ಸಚಿವ ಹೆಚ್​ಸಿ ಮಹದೇವಪ್ಪ ಕಿಡಿ

ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ಎಂದು ಪ್ರತಾಪ್​ ಸಿಂಹ ವಿರುದ್ಧ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಕಿಡಿ ಕಾರಿದ್ದಾರೆ.

ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ: ಪ್ರತಾಪ್​ ಸಿಂಹ ವಿರುದ್ಧ ಸಚಿವ ಹೆಚ್​ಸಿ ಮಹದೇವಪ್ಪ ಕಿಡಿ
ಸಂಸದ ಪ್ರತಾಪ್ ಸಿಂಹ, ಸಚಿವ ಹೆಚ್.ಸಿ.ಮಹದೇವಪ್ಪ
ಗಂಗಾಧರ​ ಬ. ಸಾಬೋಜಿ
|

Updated on: Jun 13, 2023 | 3:11 PM

Share

ಚಾಮರಾಜನಗರ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ ಎಂದು ಪ್ರತಾಪ್​ ಸಿಂಹ ವಿರುದ್ಧ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ (H C Mahadevappa) ಕಿಡಿ ಕಾರಿದ್ದಾರೆ. ‘ಕಾಂಗ್ರೆಸ್​ ಮತ್ತು ಬಿಜೆಪಿ ನಾಯಕರ ಹೊಂದಾಣಿಕೆ ಬಗ್ಗೆ ತನಿಖೆ ಆಗಲ್ಲ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 40% ಕಮಿಷನ್​ ವಿಚಾರದಲ್ಲಿ ಸರ್ಕಾರ ಗಂಭೀರ ಕ್ರಮಕೈಗೊಳ್ಳಲಿದೆ. ಎಲ್ಲಿ ದುರ್ಬಳಕೆ, ಕಾನೂನು ಉಲ್ಲಂಘನೆ ಆಗಿದೆ ಎಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ತನಿಖೆಗೆ ಸರ್ಕಾರ ಮೀನಮೇಷ ಎಣಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಹಣಕಾಸು ಹೊಂದಿಸುವ ಬಗ್ಗೆ ಪ್ರತಾಪ್​ ಸಿಂಹಗೆ ಹೇಳಲು ಆಗುತ್ತಾ?

ಗ್ಯಾರಂಟಿ ಯೋಜನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಸಚಿವ ಹೆಚ್​.ಸಿ.ಮಹದೇವಪ್ಪ ಟಾಂಗ್​ ನೀಡಿದ್ದು, ಹಣಕಾಸು ಕ್ರೋಡೀಕರಿಸುವುದು ಹಣಕಾಸು ಇಲಾಖೆ ಜವಾಬ್ದಾರಿ. 13 ಬಜೆಟ್ ಮಂಡಿಸಿದ ಸಿದ್ದರಾಮಯ್ಯಗೆ ಆಳವಾದ ಅನುಭವವಿದೆ. ಹಣಕಾಸು ಹೊಂದಿಸುವ ಬಗ್ಗೆ ಪ್ರತಾಪ್​ ಸಿಂಹಗೆ ಹೇಳಲು ಆಗುತ್ತಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಟೋಲ್‌ ದರ ಹೆಚ್ಚಳ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ

ಯಾರು ದರ ಹೆಚ್ಚಳ ಮಾಡಿದ್ದಾರೋ ಅವರೇ ಟೀಕೆ ಮಾಡಿದರೆ ಹೇಗೆ?

ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ ಮಾಡಿದ್ದು ಹಿಂದಿನ ಬಿಜೆಪಿ ಸರ್ಕಾರ. ಈಗ ಜಾರಿಯಾಗಿದೆ ಅಷ್ಟೇ. ಯಾರು ದರ ಹೆಚ್ಚಳ ಮಾಡಿದ್ದಾರೋ ಅವರೇ ಟೀಕೆ ಮಾಡಿದರೆ ಹೇಗೆ? ವಿದ್ಯುತ್​ ದರ ಏರಿಕೆಯನ್ನು ಈಗ ತಡೆ ಹಿಡಿಯಲು ಸಾಧ್ಯವಾಗುವುದಿಲ್ಲ ಎಂದರು.

ಇದನ್ನೂ ಓದಿ: ನಿಮ್ಮನ್ನು ಅಲ್ಲಾ ಎಂದಿಗೂ ಕ್ಷಮಿಸಲ್ಲ, ಮುಸ್ಲಿಂ ಸಮುದಾಯದ ವಿರುದ್ಧ ಬುಸುಗುಟ್ಟಿದ ಎಂಟಿಬಿ ನಾಗರಾಜ್‌

ವಿದ್ಯುತ್ ದರ ಏರಿಕೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಎಂದು ಶಾಸಕ ತನ್ವೀರ್‌ಸೇಠ್ ಸರ್ಕಾರಕ್ಕೆ ಪತ್ರ ಬರೆದ ವಿಚಾರವಾಗಿ ಮಾತನಾಡಿ, ಅದು ಅವರ ವೈಯಕ್ತಿಕ ವಿಚಾರ, ಸರ್ಕಾರ ಗಮನಹರಿಸಲಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು