Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ: ಪ್ರತಾಪ್​ ಸಿಂಹ ವಿರುದ್ಧ ಸಚಿವ ಹೆಚ್​ಸಿ ಮಹದೇವಪ್ಪ ಕಿಡಿ

ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ಎಂದು ಪ್ರತಾಪ್​ ಸಿಂಹ ವಿರುದ್ಧ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಕಿಡಿ ಕಾರಿದ್ದಾರೆ.

ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ: ಪ್ರತಾಪ್​ ಸಿಂಹ ವಿರುದ್ಧ ಸಚಿವ ಹೆಚ್​ಸಿ ಮಹದೇವಪ್ಪ ಕಿಡಿ
ಸಂಸದ ಪ್ರತಾಪ್ ಸಿಂಹ, ಸಚಿವ ಹೆಚ್.ಸಿ.ಮಹದೇವಪ್ಪ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 13, 2023 | 3:11 PM

ಚಾಮರಾಜನಗರ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತಿನಲ್ಲಿ ಗಾಂಭೀರ್ಯತೆ ಇದೆಯಾ, ಏನಾದ್ರೂ ಅರ್ಥ ಇದೆಯಾ? ಯಾರ್ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂದು ಅವರೇ ಹೇಳಲಿ ಎಂದು ಪ್ರತಾಪ್​ ಸಿಂಹ ವಿರುದ್ಧ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ (H C Mahadevappa) ಕಿಡಿ ಕಾರಿದ್ದಾರೆ. ‘ಕಾಂಗ್ರೆಸ್​ ಮತ್ತು ಬಿಜೆಪಿ ನಾಯಕರ ಹೊಂದಾಣಿಕೆ ಬಗ್ಗೆ ತನಿಖೆ ಆಗಲ್ಲ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 40% ಕಮಿಷನ್​ ವಿಚಾರದಲ್ಲಿ ಸರ್ಕಾರ ಗಂಭೀರ ಕ್ರಮಕೈಗೊಳ್ಳಲಿದೆ. ಎಲ್ಲಿ ದುರ್ಬಳಕೆ, ಕಾನೂನು ಉಲ್ಲಂಘನೆ ಆಗಿದೆ ಎಂದು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ತನಿಖೆಗೆ ಸರ್ಕಾರ ಮೀನಮೇಷ ಎಣಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಹಣಕಾಸು ಹೊಂದಿಸುವ ಬಗ್ಗೆ ಪ್ರತಾಪ್​ ಸಿಂಹಗೆ ಹೇಳಲು ಆಗುತ್ತಾ?

ಗ್ಯಾರಂಟಿ ಯೋಜನೆಗಳಿಗೆ ಹಣ ಎಲ್ಲಿಂದ ತರುತ್ತಾರೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಸಚಿವ ಹೆಚ್​.ಸಿ.ಮಹದೇವಪ್ಪ ಟಾಂಗ್​ ನೀಡಿದ್ದು, ಹಣಕಾಸು ಕ್ರೋಡೀಕರಿಸುವುದು ಹಣಕಾಸು ಇಲಾಖೆ ಜವಾಬ್ದಾರಿ. 13 ಬಜೆಟ್ ಮಂಡಿಸಿದ ಸಿದ್ದರಾಮಯ್ಯಗೆ ಆಳವಾದ ಅನುಭವವಿದೆ. ಹಣಕಾಸು ಹೊಂದಿಸುವ ಬಗ್ಗೆ ಪ್ರತಾಪ್​ ಸಿಂಹಗೆ ಹೇಳಲು ಆಗುತ್ತಾ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇ ಟೋಲ್‌ ದರ ಹೆಚ್ಚಳ ಸಮರ್ಥಿಸಿಕೊಂಡ ಸಂಸದ ಪ್ರತಾಪ್ ಸಿಂಹ

ಯಾರು ದರ ಹೆಚ್ಚಳ ಮಾಡಿದ್ದಾರೋ ಅವರೇ ಟೀಕೆ ಮಾಡಿದರೆ ಹೇಗೆ?

ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳ ಮಾಡಿದ್ದು ಹಿಂದಿನ ಬಿಜೆಪಿ ಸರ್ಕಾರ. ಈಗ ಜಾರಿಯಾಗಿದೆ ಅಷ್ಟೇ. ಯಾರು ದರ ಹೆಚ್ಚಳ ಮಾಡಿದ್ದಾರೋ ಅವರೇ ಟೀಕೆ ಮಾಡಿದರೆ ಹೇಗೆ? ವಿದ್ಯುತ್​ ದರ ಏರಿಕೆಯನ್ನು ಈಗ ತಡೆ ಹಿಡಿಯಲು ಸಾಧ್ಯವಾಗುವುದಿಲ್ಲ ಎಂದರು.

ಇದನ್ನೂ ಓದಿ: ನಿಮ್ಮನ್ನು ಅಲ್ಲಾ ಎಂದಿಗೂ ಕ್ಷಮಿಸಲ್ಲ, ಮುಸ್ಲಿಂ ಸಮುದಾಯದ ವಿರುದ್ಧ ಬುಸುಗುಟ್ಟಿದ ಎಂಟಿಬಿ ನಾಗರಾಜ್‌

ವಿದ್ಯುತ್ ದರ ಏರಿಕೆಯಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಎಂದು ಶಾಸಕ ತನ್ವೀರ್‌ಸೇಠ್ ಸರ್ಕಾರಕ್ಕೆ ಪತ್ರ ಬರೆದ ವಿಚಾರವಾಗಿ ಮಾತನಾಡಿ, ಅದು ಅವರ ವೈಯಕ್ತಿಕ ವಿಚಾರ, ಸರ್ಕಾರ ಗಮನಹರಿಸಲಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ