AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ‘ಬಕ್ರೀದ್ ಮೇ ಬಚೇಂಗೆ ತೋ…’ ಎಂದು ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ

ಒಂದು ಮಾತಿದೆ ಬಕ್ರೀದ್ ಮೇ ಬಚೇಂಗೆ ತೋ ಮೊಹರಂ ಮೇ ನಾಚೇಂಗೆ (ಆಡು ಬಕ್ರೀದ್ ನಲ್ಲಿ ಬದುಕಿದರೆ ಅದು ಮೊಹರಂ ಸಮಯದಲ್ಲಿ ಕುಣಿಯುತ್ತದೆ) ಮೊದಲು ಮತದಾನವಾಗಲಿ.

2024ರ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ‘ಬಕ್ರೀದ್ ಮೇ ಬಚೇಂಗೆ ತೋ...’ ಎಂದು ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
TV9 Web
| Edited By: |

Updated on:Oct 12, 2022 | 9:56 PM

Share

ದೆಹಲಿ: ಕಾಂಗ್ರೆಸ್ (Congress) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಸೋಮವಾರ (ಅಕ್ಟೋಬರ್ 17) ಪಕ್ಷದ ಅಧ್ಯಕ್ಷರ ಚುನಾವಣೆಗಾಗಿ ಮಧ್ಯಪ್ರದೇಶದಲ್ಲ ಪ್ರಚಾರ ಮಾಡುವಾಗ 2024 ರ ಪ್ರಧಾನಿ ಅಭ್ಯರ್ಥಿಯ ಕುರಿತು ಕೇಳಿದ ಪ್ರಶ್ನೆಗೆ ಸೇತುವೆಗೆ ಬಂದಾಗ ದಾಟುತ್ತೇನೆ ಎಂದಿದ್ದಾರೆ. 2024 ರ ರಾಷ್ಟ್ರೀಯ ಚುನಾವಣೆಗೆ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಅವರು ರಾಹುಲ್ ಗಾಂಧಿಯ (Rahul Gandhi) ವಿರುದ್ಧ ಸ್ಪರ್ಧಿಸುತ್ತಾರೆಯೇ ಎಂದು ಕೇಳಿದಾಗ ಈ ಬಗ್ಗೆ ತುಂಬಾ ಮುಂಚೆಯೇ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. “ಈ ಚುನಾವಣೆಗಳನ್ನು ಮೊದಲು ಎದುರಿಸೋಣ. ಒಂದು ಮಾತಿದೆ ಬಕ್ರೀದ್ ಮೇ ಬಚೇಂಗೆ ತೋ ಮೊಹರಂ ಮೇ ನಾಚೇಂಗೆ (ಆಡು ಬಕ್ರೀದ್ ನಲ್ಲಿ ಬದುಕಿದರೆ ಅದು ಮೊಹರಂ ಸಮಯದಲ್ಲಿ ಕುಣಿಯುತ್ತದೆ) ಮೊದಲು ಮತದಾನವಾಗಲಿ.ನಾನು ಮುಖ್ಯಸ್ಥನಾಗಲಿ, ನಂತರ ನೋಡೋಣ ಎಂದು ಖರ್ಗೆ ಹೇಳಿದ್ದಾರೆ.

ಕಳೆದ 20 ವರ್ಷಗಳಲ್ಲಿ ಗಾಂಧಿಯೇತರರು ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷರ ಮೊದಲ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವರು ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ.

80 ವರ್ಷ ವಯಸ್ಸಿನ ಖರ್ಗೆ ಮತ್ತು ಶಶಿ ತರೂರ್ ನಡುವೆ ಕಾಂಗ್ರೆಸ್ ಅಧ್ಯಕ್ಷಸ್ಥಾನಕ್ಕೆ ಸ್ಪರ್ಧೆ ನಡೆಯಲಿದೆ. ಖರ್ಗೆ ಅಥವಾ ಬೇರೆ ಯಾರಾದರೂ ತಮ್ಮ “ಅಧಿಕೃತ” ಅಭ್ಯರ್ಥಿ ಅಲ್ಲ ಎಂದು ಕಾಂಗ್ರೆಸ್ ಹೇಳಿದೆ. ಗಾಂಧಿ ಕುಟುಂಬ ಸ್ಪರ್ಧಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ತಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಖರ್ಗೆ ಅವರ ಪ್ರಮುಖ ಪ್ರತಿಸ್ಪರ್ಧಿ ಶಶಿ ತರೂರ್. ಇಬ್ಬರೂ ಅಭ್ಯರ್ಥಿಗಳು ಕಾಂಗ್ರೆಸ್ ಪ್ರತಿನಿಧಿಗಳ ಬೆಂಬಲವನ್ನು ಪಡೆಯಲು ವಿವಿಧ ರಾಜ್ಯಗಳಿಗೆ ಪ್ರಯಾಣಿಸುತ್ತಿರುವಾಗ, ಅನೇಕ ರಾಜ್ಯಗಳಲ್ಲಿ ತರೂರ್ ಅವರಿಗಿಂತ ಹೆಚ್ಚಿನ ಜನರು ಖರ್ಗೆ ಅವರಿಗೆ ಬೆಂಬಲ ಸೂಚಿಸುತ್ತಿದ್ದು ಖರ್ಗೆ ಚುನಾವಣೆ ಗೆಲ್ಲುವುದು ಬಹುತೇಕ ಖಚಿತವಾದಂತಿದೆ.

Published On - 9:52 pm, Wed, 12 October 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ