AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ‘ಬಕ್ರೀದ್ ಮೇ ಬಚೇಂಗೆ ತೋ…’ ಎಂದು ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ

ಒಂದು ಮಾತಿದೆ ಬಕ್ರೀದ್ ಮೇ ಬಚೇಂಗೆ ತೋ ಮೊಹರಂ ಮೇ ನಾಚೇಂಗೆ (ಆಡು ಬಕ್ರೀದ್ ನಲ್ಲಿ ಬದುಕಿದರೆ ಅದು ಮೊಹರಂ ಸಮಯದಲ್ಲಿ ಕುಣಿಯುತ್ತದೆ) ಮೊದಲು ಮತದಾನವಾಗಲಿ.

2024ರ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ‘ಬಕ್ರೀದ್ ಮೇ ಬಚೇಂಗೆ ತೋ...’ ಎಂದು ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 12, 2022 | 9:56 PM

Share

ದೆಹಲಿ: ಕಾಂಗ್ರೆಸ್ (Congress) ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಸೋಮವಾರ (ಅಕ್ಟೋಬರ್ 17) ಪಕ್ಷದ ಅಧ್ಯಕ್ಷರ ಚುನಾವಣೆಗಾಗಿ ಮಧ್ಯಪ್ರದೇಶದಲ್ಲ ಪ್ರಚಾರ ಮಾಡುವಾಗ 2024 ರ ಪ್ರಧಾನಿ ಅಭ್ಯರ್ಥಿಯ ಕುರಿತು ಕೇಳಿದ ಪ್ರಶ್ನೆಗೆ ಸೇತುವೆಗೆ ಬಂದಾಗ ದಾಟುತ್ತೇನೆ ಎಂದಿದ್ದಾರೆ. 2024 ರ ರಾಷ್ಟ್ರೀಯ ಚುನಾವಣೆಗೆ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಅವರು ರಾಹುಲ್ ಗಾಂಧಿಯ (Rahul Gandhi) ವಿರುದ್ಧ ಸ್ಪರ್ಧಿಸುತ್ತಾರೆಯೇ ಎಂದು ಕೇಳಿದಾಗ ಈ ಬಗ್ಗೆ ತುಂಬಾ ಮುಂಚೆಯೇ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. “ಈ ಚುನಾವಣೆಗಳನ್ನು ಮೊದಲು ಎದುರಿಸೋಣ. ಒಂದು ಮಾತಿದೆ ಬಕ್ರೀದ್ ಮೇ ಬಚೇಂಗೆ ತೋ ಮೊಹರಂ ಮೇ ನಾಚೇಂಗೆ (ಆಡು ಬಕ್ರೀದ್ ನಲ್ಲಿ ಬದುಕಿದರೆ ಅದು ಮೊಹರಂ ಸಮಯದಲ್ಲಿ ಕುಣಿಯುತ್ತದೆ) ಮೊದಲು ಮತದಾನವಾಗಲಿ.ನಾನು ಮುಖ್ಯಸ್ಥನಾಗಲಿ, ನಂತರ ನೋಡೋಣ ಎಂದು ಖರ್ಗೆ ಹೇಳಿದ್ದಾರೆ.

ಕಳೆದ 20 ವರ್ಷಗಳಲ್ಲಿ ಗಾಂಧಿಯೇತರರು ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷರ ಮೊದಲ ಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವರು ಗೆಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ.

80 ವರ್ಷ ವಯಸ್ಸಿನ ಖರ್ಗೆ ಮತ್ತು ಶಶಿ ತರೂರ್ ನಡುವೆ ಕಾಂಗ್ರೆಸ್ ಅಧ್ಯಕ್ಷಸ್ಥಾನಕ್ಕೆ ಸ್ಪರ್ಧೆ ನಡೆಯಲಿದೆ. ಖರ್ಗೆ ಅಥವಾ ಬೇರೆ ಯಾರಾದರೂ ತಮ್ಮ “ಅಧಿಕೃತ” ಅಭ್ಯರ್ಥಿ ಅಲ್ಲ ಎಂದು ಕಾಂಗ್ರೆಸ್ ಹೇಳಿದೆ. ಗಾಂಧಿ ಕುಟುಂಬ ಸ್ಪರ್ಧಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ತಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಖರ್ಗೆ ಅವರ ಪ್ರಮುಖ ಪ್ರತಿಸ್ಪರ್ಧಿ ಶಶಿ ತರೂರ್. ಇಬ್ಬರೂ ಅಭ್ಯರ್ಥಿಗಳು ಕಾಂಗ್ರೆಸ್ ಪ್ರತಿನಿಧಿಗಳ ಬೆಂಬಲವನ್ನು ಪಡೆಯಲು ವಿವಿಧ ರಾಜ್ಯಗಳಿಗೆ ಪ್ರಯಾಣಿಸುತ್ತಿರುವಾಗ, ಅನೇಕ ರಾಜ್ಯಗಳಲ್ಲಿ ತರೂರ್ ಅವರಿಗಿಂತ ಹೆಚ್ಚಿನ ಜನರು ಖರ್ಗೆ ಅವರಿಗೆ ಬೆಂಬಲ ಸೂಚಿಸುತ್ತಿದ್ದು ಖರ್ಗೆ ಚುನಾವಣೆ ಗೆಲ್ಲುವುದು ಬಹುತೇಕ ಖಚಿತವಾದಂತಿದೆ.

Published On - 9:52 pm, Wed, 12 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ