AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BR Patil: ಸಿಎಂ ಸಿದ್ದರಾಮಯ್ಯಗೆ ಬರೆದಿದ್ದು ಎನ್ನಲಾದ ಪತ್ರ ನಕಲಿ; ಕಾಂಗ್ರೆಸ್‌ ಶಾಸಕ ಬಿಆರ್ ಪಾಟೀಲ್ ಸ್ಪಷ್ಟನೆ

ನಕಲಿ ಪತ್ರವನ್ನು ಬಿಜೆಪಿಯವರೇ ವೈರಲ್ ಮಾಡಿಸಿರಬಹುದು ಎಂದು ಬಿಆರ್​ ಪಾಟೀಲ್ ಆರೋಪಿಸಿದ್ದಾರೆ. ಈ ವಿಚಾರವಾಗಿ ಎಸ್‌ಪಿಗೆ ದೂರು ನೀಡುತ್ತೇನೆ ಎಂದೂ ಅವರು ತಿಳಿಸಿದ್ದಾರೆ.

BR Patil: ಸಿಎಂ ಸಿದ್ದರಾಮಯ್ಯಗೆ ಬರೆದಿದ್ದು ಎನ್ನಲಾದ ಪತ್ರ ನಕಲಿ; ಕಾಂಗ್ರೆಸ್‌ ಶಾಸಕ ಬಿಆರ್ ಪಾಟೀಲ್ ಸ್ಪಷ್ಟನೆ
ಕಾಂಗ್ರೆಸ್‌ ಶಾಸಕ ಬಿಆರ್ ಪಾಟೀಲ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 25, 2023 | 6:40 PM

Share

ಕಲಬುರಗಿ: ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಅಸಮಾಧಾನಿತ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿರುವ ವಿಚಾರವಾಗಿ ಆಳಂದ ಶಾಸಕ ಬಿಆರ್ ಪಾಟೀಲ್ (BR Patil) ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿಗೆ ಬರೆಯಲಾಗಿದೆ ಎಂಬ ಪತ್ರ ನಕಲಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಕಲಬುರಗಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನನ್ನ ಹಳೆಯ ಲೆಟರ್‌ಹೆಡ್‌ ಬಳಸಿ ಪತ್ರ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿಂದೆ ಶಾಸಕನಾಗಿದ್ದಾಗ ಬರೆದಿದ್ದ ಲೆಟರ್‌ಹೆಡ್‌ ಬಳಸಿ ಈಗ ವೈರಲ್ ಮಾಡಿದ್ದಾರೆ. ವೈರಲ್ ಮಾಡಲಾಗಿರುವ ಪತ್ರದಲ್ಲಿ ಶಾಂತಿನಗರದ ಮನೆಯ ವಿಳಾಸವಿದೆ. ಹೊಸ ಲೆಟರ್‌ಹೆಡ್‌ನಲ್ಲಿ ಅಕ್ಕಮಹಾದೇವಿ ಕಾಲೋನಿ ನಿವಾಸದ ವಿಳಾಸವಿದೆ. ನನ್ನ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಧ್ಯೆ ಭಿನ್ನಾಭಿಪ್ರಾಯ ಮೂಡಿಸಲು ನಕಲಿ ಪತ್ರ ಸೃಷ್ಟಿ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಲೆಟರ್​ಹೆಡ್ ನಕಲಿ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ನಾವು ಸಿಎಂಗೆ ಪತ್ರ ಬರೆದಿರುವುದು ನಿಜ. ಪ್ರಿಯಾಂಕ್​ ಖರ್ಗೆ ಅವರ ತಂದೆಗೆ ನೀಡುವಷ್ಟು ಗೌರವ ನನಗೂ ನೀಡ್ತಾರೆ ಎಂದು ಪಾಟೀಲ್ ಹೇಳಿದ್ದಾರೆ.

ಬಿಜೆಪಿಯವರೇ ಮಾಡಿಸಿರಬಹುದು ಎಂದ ಪಾಟೀಲ್

ನಕಲಿ ಪತ್ರವನ್ನು ಬಿಜೆಪಿಯವರೇ ವೈರಲ್ ಮಾಡಿಸಿರಬಹುದು ಎಂದು ಅವರು ಆರೋಪಿಸಿದ್ದಾರೆ. ಈ ವಿಚಾರವಾಗಿ ಎಸ್‌ಪಿಗೆ ದೂರು ನೀಡುತ್ತೇನೆ ಎಂದೂ ಅವರು ತಿಳಿಸಿದ್ದಾರೆ. ಉಸ್ತುವಾರಿ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಕಲಬುರಗಿಯ ಶಾಸಕರ ಸಹಿಯುಳ್ಳ ಪತ್ರವನ್ನು ಬಿಆರ್ ಪಾಟೀಲ್ ಮುಖ್ಯಮಂತ್ರಿಗೆ ಬರೆದಿದ್ದಾರೆ ಎನ್ನಲಾಗಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: BR Patil: ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಸಚಿವರು; ಆಳಂದ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಗಂಭೀರ ಆರೋಪ

ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಕಾಂಗ್ರೆಸ್ ಶಾಸಕರೇ ಸಚಿವರ ವಿರುದ್ಧ ನೀಡಿದ್ದಾರೆ ಎನ್ನಲಾದ ದೂರನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯನವರೇ, ನಿಮ್ಮ ಶಾಸಕರೇ ವರ್ಗಾವಣೆ ದಂಧೆ ಹಾಗೂ ಸಚಿವರ ದುರ್ವರ್ತನೆ ವಿರುದ್ಧ ಪತ್ರ ಬರೆದು ಇದೀಗ ಅದು ಋಜುವಾತಾಗಿದೆ. ಪತ್ರದಲ್ಲಿ ಮೂರನೇ ವ್ಯಕ್ತಿ ಎಂದು ಪ್ರಸ್ತಾಪಿಸಿರುವುದು ಶ್ಯಾಡೋ ಸಿಎಂರವರ ಬಗ್ಗೆಯೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ