AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್​ ಕೈ ಸೇರಿದ 20 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ, ಸಚಿವರಿಂದ ಅಭಿಪ್ರಾಯ ಸಂಗ್ರಹ

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭಾರಿ ತಲೆಕೆಡಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಪ್ರಾಥಮಿಕ ಪಟ್ಟಿ ಡಿಕೆ ಶಿವಕುಮಾರ್​ ಅವರ ಕೈ ಸೇರಿದ್ದು, ಶುಕ್ರವಾರ (ಫೆ.24) ರಂದು ನಡೆದ ತಮ್ಮ ಮನೆಯ ಕಾರ್ಯಕ್ರಮದಲ್ಲೂ ಈ ಬಗ್ಗೆ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ.

ಡಿಕೆ ಶಿವಕುಮಾರ್​ ಕೈ ಸೇರಿದ 20 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ, ಸಚಿವರಿಂದ ಅಭಿಪ್ರಾಯ ಸಂಗ್ರಹ
ಡಿಸಿಎಂ ಡಿಕೆ ಶಿವಕುಮಾರ್​
ಪ್ರಸನ್ನ ಗಾಂವ್ಕರ್​
| Edited By: |

Updated on:Feb 24, 2024 | 8:37 AM

Share

ಬೆಂಗಳೂರು, ಫೆಬ್ರವರಿ 24: ಲೋಕಸಭೆ ಚುನಾವಣೆಗೆ (Lok Sabha Election) ಎರಡು ತಿಂಗಳು ಬಾಕಿ ಉಳಿದಿವೆ. ಎಲ್ಲ ರಾಜಕೀಯ ಪಕ್ಷಗಳು ಈಗಾಗಲೆ ಚುನಾವಣೆ ತಯಾರಿ ಆರಂಭಿಸಿವೆ. ರಾಜ್ಯದಲ್ಲೂ ಚುನಾವಣಾ ಅಖಾಡ ತಯಾರಿಯಾಗುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್​ (Congress) ಮತ್ತು ಬಿಜೆಪಿ (BJP) ಹಾಗೂ ಇದರ ಮಿತ್ರ ಪಕ್ಷ ಜೆಡಿಎಸ್ (JDS)​​ ಚುನಾವಣೆಗೆ ಸಿದ್ದವಾಗುತ್ತಿದೆ. ಆದರೆ ಟಿಕೆಟ್​ ಹಂಚಿಕೆ ವಿಚಾರವಾಗಿ ಎರಡೂ ರಾಷ್ಟ್ರೀಯ ಪಕ್ಷದಲ್ಲಿ ಸಾಕಷ್ಟು ಪ್ರಶ್ನೆಗಳು ಉದ್ಭವವಾಗಿವೆ. ಹಾಗೆ ತಲೆನೋವು ಆಗಿದೆ. ಆಯಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಈಗಾಗಲೆ ಸರ್ವೆ ನಡೆದಿದ್ದು, ಪ್ರಾಥಮಿಕ ಹಂತದ ಪಟ್ಟಿ ಸಿದ್ದವಾಗಿದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ (DK Shivakumar) ಭಾರಿ ತಲೆಕೆಡಿಸಿಕೊಂಡಿದ್ದಾರೆ.

ಅಭ್ಯರ್ಥಿಗಳ ಪ್ರಾಥಮಿಕ ಪಟ್ಟಿ ಡಿಕೆ ಶಿವಕುಮಾರ್​ ಅವರ ಕೈ ಸೇರಿದ್ದು, ಶುಕ್ರವಾರ (ಫೆ.24) ರಂದು ನಡೆದ ತಮ್ಮ ಮನೆಯ ಕಾರ್ಯಕ್ರಮದಲ್ಲೂ ಈ ಬಗ್ಗೆ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್​ 20 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಚಿವರ ಮಂದಿಟ್ಟು, ಒಂದೊಂದು ಕ್ಷೇತ್ರದ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಕ್ಷೇತ್ರಕ್ಕೆ ಈ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೆ ಸೂಕ್ತವೇ ಎಂದು ಮತ್ತೆ ಸಚಿವರಿಂದ ಸಲಹೆ ಪಡೆದುಕೊಂಡಿದ್ದಾರೆ.

ರಾಜ್ಯಾದ್ಯಂತ ಗ್ಯಾರಂಟಿ ಸಮಾವೇಶ

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ತಾನು ಘೋಷಿಸಿರುವ ಐದು ಗ್ಯಾರೆಂಟಿಗಳನ್ನು ರಾಜ್ಯ ಕಾಂಗ್ರೆಸ್​ ಯಶಸ್ವಿಯಾಗಿ ಜಾರಿಗೆ ತಂದಿದೆ. ಇದೀಗ ಲೋಕಸಭೆ ಚುನಾವಣೆ ಇದ್ದು, ಈ ಗ್ಯಾರೆಂಟಿಗಳನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ರಾಜ್ಯ ಕಾಂಗ್ರೆಸ್​ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗ್ಯಾರಂಟಿ ಸಮಾವೇಶ ಮಾಡಲು ಕಾಂಗ್ರೆಸ್​​ ಮುಂದಾಗಿದೆ. ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ರಾಜ್ಯದ ವಿವಿಧಡೆ ಗ್ಯಾರಂಟಿ ಕಾರ್ಯಕ್ರಮ ನಡೆಯಲಿವೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು, ಯತೀಂದ್ರ ಸ್ಪರ್ಧೆಗೆ ಸಿಎಂ ಹಿಂದೇಟು!

ಶಿವಮೊಗ್ಗದಲ್ಲಿ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ಗ್ಯಾರಂಟಿ ಕಾರ್ಯಕ್ರಮ ನಡೆದರೇ, ಧಾರವಾಡದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗ್ಯಾರಂಟಿ ಸಮಾವೇಶ ನಡೆಯಲಿದೆ. ನಾಳೆ (ಫೆ.25) ಮಾಗಡಿಯಲ್ಲಿ ಡಿಕೆ ಶಿವಕುಮಾರಿಂದ ಗೃಹ ಲಕ್ಷ್ಮೀ ಸಮಾವೇಶ ಜರುಗಲಿದೆ. ಈ ಮೂಲಕ ಕಾಂಗ್ರೆಸ್ ಚುನಾವಣೆಗೂ ಮುನ್ನ ಗ್ಯಾರಂಟಿ ಅಸ್ರ್ತಗಳನ್ನ ಬಳಸಲು ಮುಂದಾಗಿದೆ.

ಗ್ಯಾರಂಟಿ ಯೋಜನೆ ಪಲಾನುಭವಿಗಳನ್ನ ಟಾರ್ಗೆಟ್ ​​ಮಾಡಿ ಮತ ಪಡೆಯಲು ಪ್ಲಾನ್ ಮಾಡಿದೆ. ಈ ಹಿಂದೆ ಬಿಜೆಪಿ ಯೋಜನೆಗಳ ಪಲಾನುಭವಿಗಳ ಸಂವಾದ ರ್ಯಾಲಿ ಮಾಡುತ್ತಿತ್ತು. ಇದೆ ತಂತ್ರವನ್ನು ಕಾಂಗ್ರೆಸ್​ ಅನುಸರಿಸಲಿದೆ. ಚುನಾವಣೆಗೂ ಮುನ್ನ ಮೇಗಾ ಗ್ಯಾರಂಟಿ ರ್ಯಾಲಿ ನಡೆಸುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:36 am, Sat, 24 February 24

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ