AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನವೊಲಿಕೆಗೆ ಸಂಘ ಪರಿವಾರ ಕರೆ, ಚುನಾವಣೆಯಿಂದ ಹಿಂದೆ ಸರಿಯಲ್ಲ, ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದ ಈಶ್ವರಪ್ಪ

ಪುತ್ರ ಕಾಂತೇಶ್​​ಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಮತ್ತು ಬಿಎಸ್​ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಈ ಬಂಡಾಯವನ್ನು ಶಮನಗೊಳಿಸಲು ಬಿಜೆಪಿ ಮತ್ತು ಸಂಘ ಪರಿವಾರದವರು ಕರೆ ಮಾಡಿ ಮನವೊಲಿಸಲು ಯತ್ನಿಸಿದ್ದಾರೆ.

ಮನವೊಲಿಕೆಗೆ ಸಂಘ ಪರಿವಾರ ಕರೆ, ಚುನಾವಣೆಯಿಂದ ಹಿಂದೆ ಸರಿಯಲ್ಲ, ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ ಎಂದ ಈಶ್ವರಪ್ಪ
ಕೆಎಸ್​ ಈಶ್ವರಪ್ಪ
TV9 Web
| Edited By: |

Updated on: Mar 18, 2024 | 11:08 AM

Share

ಶಿವಮೊಗ್ಗ, ಮಾರ್ಚ್​ 18: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಇಂದು (ಮಾ.18) ಪ್ರಧಾನಿ ನರೇಂದ್ರ ಮೋದಿಯ (Narendra Modi) ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಾನು ಹೋಗಲ್ಲ ಎಂದು ಮಾಜಿ ಸಚಿವ ಕೆಎಸ್​​ ಈಶ್ವರಪ್ಪ (KS Eshwarappa) ಹೇಳಿದ್ದಾರೆ. ಶಿವಮೊಗ್ಗದ ಬೀಳಗಿಯ ರಾಚಟೇಶ್ವರ ಮಠದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಹೋರಾಟ ಕುಟುಂಬ ರಾಜಕಾರಣ ‌ವಿರುದ್ಧು. ಸಿಟಿ ರವಿ, ಬಸನಗೌಡ ಪಾಟೀಲ್​ ಯತ್ನಾಳ, ನಳೀನ ಕುಮಾರ ಕಟೀಲು ಅವರಿಗೆ ಟಿಕೆಟ್ ನೀಡಿಲ್ಲ. ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ವಿರೋಧ ಮಾಡಿದರು. ಆದರೆ ಕರ್ನಾಟಕದಲ್ಲಿ ಬಿ.ಎಸ್​​ ಯಡಿಯೂರಪ್ಪ ಅವರ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು.

ಹೀಗಾಗಿ ಪಕ್ಷೇತರ ಸ್ಪರ್ಧೆ ಮಾಡಿದ್ದೇನೆ. ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ. ಕೇಂದ್ರದ ನಾಯಕರು ದೂರವಾಣಿ ಸಂಪರ್ಕ ಮಾಡಿದರೂ, ಸ್ಪಷ್ಟ ನಿರ್ಧಾರ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಕೇಂದ್ರ ನಾಯಕರನ್ನು ಮನೆಯಲ್ಲಿ ಕೂರಿಸಿ ಹೊರ ಹೋದ ಈಶ್ವರಪ್ಪ: ಶಮನವಾಗದ ಬಂಡಾಯ

ಸಂಘ ಪರಿವಾರದಿಂದ ಕರೆ

ಕೆಎಸ್​ ಈಶ್ವರಪ್ಪ ಅವರಿಗೆ ಸಂಘ ಪರಿವಾರದ ಪ್ರಮುಖ ಗೋಪಾಲ್​​ ಅಯೋದ್ಯೆಯಿಂದ ಕರೆ ಮಾಡಿ ಮನವೊಲಿಸಲು ಯತ್ನಿಸಿದ್ದಾರೆ. ಆದರೆ ಕೆಎಸ್​ ಈಶ್ವರಪ್ಪ ಮಾತ್ರ ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ನಾನು ಹಿಂದೆ ಸರಿಯಲ್ಲ ಎಂದಿದ್ದಾರೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಮನವೊಲಿಸುವ ಪ್ರಯತ್ನ ಕೈ ಬಿಟ್ಟ ಬಿಜೆಪಿ

ಮನವೊಲಿಸಲು ಮನೆಗೆ ಹೋಗಿದ್ದ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಬಳಿ ಬಿಎಸ್​ ಯಡಿಯೂರಪ್ಪ ಕುಟುಂಬದ ಬಗ್ಗೆ ಕೆಎಸ್​ ಈಶ್ವರಪ್ಪ ಗರಂ ಆಗಿದ್ದರು. ಈ ಕ್ಷಣ ನನ್ನ ಮಗನಿಗೆ ಟಿಕೆಟ್ ಘೋಷಣೆ ಮಾಡಿದರೂ ನಾನು ಹಿಂದೆ ಸರಿಯಲ್ಲ. ಇಷ್ಟು ದಿನ ಯಡಿಯೂರಪ್ಪ ಆಗಿದ್ದಾಯ್ತು, ಇನ್ಮುಂದೆ ವಿಜಯೇಂದ್ರಗೆ ಕೂಡಾ ಜೈಕಾರ ಹಾಕುತ್ತಿರಬೇಕಾ? ವಿಜಯೇಂದ್ರ ಮುಂದೆ ಮುಖ್ಯಮಂತ್ರಿ ಆಗೋದನ್ನು ನಾವು ನೋಡಿಕೊಂಡು ಕೂರಬೇಕಾ? ಎಂದು ಪ್ರಶ್ನಿಸಿದ್ದಾರೆ.

ದೆಹಲಿಯವರು ಮನವೊಲಿಸುವುದಾದರೆ ಒಲಿಸಲಿ, ನಾನು ಮಾತನಾಡುವುದಿಲ್ಲ ಎಂದು ಬಿಎಸ್​ ಯಡಿಯೂರಪ್ಪ ಈಗಾಗಲೆ ಹೇಳಿದ್ದಾರೆ. ಈ ಮಧ್ಯೆ ಜನರೇ ತೀರ್ಮಾನ ಮಾಡುತ್ತಾರೆ ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ಪುನರುಚ್ಛಾರ ಮಾಡಿದ್ದಾರೆ. ಹೀಗಾಗಿ ರಾಜ್ಯ ಬಿಜೆಪಿ ಮತ್ತು ಹೈಕಮಾಂಡ್​ ಕೆಎಸ್​ ಈಶ್ವರಪ್ಪ ಮನವೊಲಿಕೆಯನ್ನು ಕೈ ಬಿಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Web contact
Web contact

TV9 Kannada

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ