AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections: ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕತ್ವ ಪಟ್ಟು

ಲೋಕಸಭೆ ಚುನಾವಣೆ 2024: ಮುಂಬರುವ ಲೋಕಸಭೆ ಚುನಾವಣೆಗೆ ಘಟಾನುಘಟಿ ನಾಯಕರನ್ನೇ ಬಿಜೆಪಿ ವಿರುದ್ಧ ಕಣಕ್ಕಿಳಿಸಲು ಕಾಂಗ್ರೆಸ್ ರಾಜ್ಯ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶಾಸಕರ, ಪ್ರಮುಖ ನಾಯಕರ ಅಭಿಪ್ರಾಯ ಪಡೆಯುವ ಕೆಲಸವನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ. ‘ಟಿವಿ9’ಗೆ ದೊರೆತ ಕೆಪಿಸಿಸಿ ಆಂತರಿಕ ಚರ್ಚಾ ಪಟ್ಟಿ ಅಭ್ಯರ್ಥಿಗಳ ವಿವರ ಇಲ್ಲಿದೆ.

Lok Sabha Elections: ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕತ್ವ ಪಟ್ಟು
ಸಾಂದರ್ಭಿಕ ಚಿತ್ರ
Pramod Shastri G
| Edited By: |

Updated on: Feb 09, 2024 | 8:18 AM

Share

ಬೆಂಗಳೂರು, ಫೆಬ್ರವರಿ 9: ಲೋಕಸಭಾ ಚುನಾವಣೆಗೆ (Lok Sabha Election) ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ (Congress) ನಾಯಕತ್ವ ಪಟ್ಟು ಹಿಡಿದಿದೆ. ಬಿಜೆಪಿಗೆ ಠಕ್ಕರ್ ಕೊಡಬಲ್ಲ ಸಚಿವರು ಹಾಗೂ ಅನುಭವಿ ನಾಯಕರಿಗೇ ಮೊದಲ ಆದ್ಯತೆ ಎಂದು ರಾಜ್ಯ ನಾಯಕತ್ವ ಹೇಳಿದ್ದು, ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೆರಿಗೆ ಹೋರಾಟದ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಜಿಲ್ಲಾವಾರು ಶಾಸಕರು ಹಾಗೂ ಸ್ಥಳೀಯ ನಾಯಕರ ಜೊತೆ ಚರ್ಚಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಶಾಸಕರ ಅಭಿಪ್ರಾಯವನ್ನೂ ಸಂಗ್ರಹಿಸಿ ಪಟ್ಟಿ ಸಿದ್ಧಪಡಿಸುತ್ತಿರುವ ಡಿಕೆ ಶಿವಕುಮಾರ್, ಶತಾಯಗತಾಯ ಗೆಲುವಿನ ಕುದುರೆಗೇ ಪಟ್ಟ ಕಟ್ಟಲೇಬೇಕೆಂದು ಪಣ ತೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಸಚಿವರಿಗೆ ಹೆಚ್ಚಿನ ಮಣೆ ಹಾಕುತ್ತಿದ್ದಾರೆ ಎನ್ನಲಾಗಿದೆ.

‘ಟಿವಿ9’ಗೆ ದೊರೆತ ಕೆಪಿಸಿಸಿ ಆಂತರಿಕ ಚರ್ಚಾ ಪಟ್ಟಿ ಅಭ್ಯರ್ಥಿಗಳ ವಿವರ

  • ಬೆಳಗಾವಿ – ಸತೀಶ್ ಜಾರಕಿಹೊಳಿ ಅಥವಾ ಜಾರಕಿಹೊಳಿ ಪುತ್ರಿ
  • ಚಿಕ್ಕೋಡಿ – ಲಕ್ಷ್ಮಣ್ ಸವದಿ ಪುತ್ರ ಅಥವಾ ಗಣೇಶ್ ಹುಕ್ಕೇರಿ ಶಿಫಾರಸ್ಸು ಸಾಧ್ಯತೆ
  • ಹಾವೇರಿ – ಹೆಚ್​ಕೆ ಪಾಟೀಲ್ ಪರ ಒಲವು
  • ಮಂಗಳೂರು – ಯುಟಿ ಖಾದರ್ ಹೆಸರು ಅಚ್ಚರಿಯ ರೀತಿಯಲ್ಲಿ ಎಂಟ್ರಿ. ಹಿಂದೂ ಮತಗಳನ್ನ ಸೆಳಯಬಲ್ಲ ಸಾಮರ್ಥ್ಯದ ಹಿನ್ನಲೆ ಹಾಲಿ ವಿಧಾನಸಭಾ ಸ್ಪೀಕರ್ ಕಣಕ್ಕೆ ಕೆಪಿಸಿಸಿ ಮಟ್ಟದಲ್ಲಿ ಚಿಂತನೆ
  • ಬಾಗಲಕೋಟೆ – ಸರ್ ನಾಯಕ್, ವೀಣಾ ಕಾಶಪ್ಪನವರ್ ಅಥವಾ ಸಂಯುಕ್ತ ಶಿವಾನಂದ ಪಾಟೀಲ್
  • ಕಲಬುರ್ಗಿ – ಮಲ್ಲಿಕಾರ್ಜುನ್ ಖರ್ಗೆ ಅಳಿಯ, ರಾಧಾಕೃಷ್ಣ ಹೆಸರು ಮುಂಚೂಣಿಯಲ್ಲಿ
  • ಉತ್ತರಕನ್ನಡ – ಆರ್​ವಿ ದೇಶಪಾಂಡೆ ಪರ ಸ್ಥಳೀಯ ಶಾಸಕರೂ ಸಹ ಬ್ಯಾಟಿಂಗ್
  • ಮೈಸೂರು – ಲಕ್ಷ್ಮಣ್ ಹಾಗೂ ಶುಶ್ರುತ್ ಗೌಡ ಫೈಟಿಂಗ್
  • ಬಳ್ಳಾರಿ – ಸೌಪರ್ಣಿಕಾ ತುಕಾರಾಂ ಹೆಸರು ಮುನ್ನಲೆಗೆ
  • ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸಚಿವ ಕೃಷ್ಣಭೈರೇಗೌಡ ಹೆಸರು ತೇಲಿ ಬಿಟ್ಟಿರುವ ಕೆಪಿಸಿಸಿ
  • ಬೆಂಗಳೂರು ದಕ್ಷಿಣ – ಪ್ರಿಯಾಕೃಷ್ಣಗೆ ನೀಡುವ ಬಗ್ಗೆ ಚರ್ಚೆ
  • ಕುತೂಹಲ ಮೂಡಿಸಿರುವ ರಾಜ್ಯ ಕಾಂಗ್ರೆಸ್ ನ ಲೋಕಸಭಾ ಅಭ್ಯರ್ಥಿ ಆಯ್ಕೆ

ಇದನ್ನೂ ಓದಿ: ಪ್ರಧಾನಿ ಮೋದಿ ಸಾಮಾನ್ಯ ವರ್ಗಕ್ಕೆ ಸೇರಿದವರು, ಅವರು ಜಾತಿಯ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ

ಮತ್ತೊಂದಡೆ ಬಿಜೆಪಿ ಸಹ ಲೋಕಸಭಾ ಚುನಾವಣೆ ತಯಾರಿ ತೀವ್ರಗೊಳಿಸಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರೇ ಖುದ್ದು ಅಖಾಡಕ್ಕಿಳಿದಿದ್ದಾರೆ. ಫೆಬ್ರವರಿ 10ರಂದು ಅವರು ರಾಜ್ಯಕ್ಕ ಭೇಟಿ ನೀಡಲಿದ್ದು, ಇಲ್ಲಿನ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್