AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Elections: ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕತ್ವ ಪಟ್ಟು

ಲೋಕಸಭೆ ಚುನಾವಣೆ 2024: ಮುಂಬರುವ ಲೋಕಸಭೆ ಚುನಾವಣೆಗೆ ಘಟಾನುಘಟಿ ನಾಯಕರನ್ನೇ ಬಿಜೆಪಿ ವಿರುದ್ಧ ಕಣಕ್ಕಿಳಿಸಲು ಕಾಂಗ್ರೆಸ್ ರಾಜ್ಯ ನಾಯಕರು ಒಲವು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶಾಸಕರ, ಪ್ರಮುಖ ನಾಯಕರ ಅಭಿಪ್ರಾಯ ಪಡೆಯುವ ಕೆಲಸವನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಮಾಡುತ್ತಿದ್ದಾರೆ. ‘ಟಿವಿ9’ಗೆ ದೊರೆತ ಕೆಪಿಸಿಸಿ ಆಂತರಿಕ ಚರ್ಚಾ ಪಟ್ಟಿ ಅಭ್ಯರ್ಥಿಗಳ ವಿವರ ಇಲ್ಲಿದೆ.

Lok Sabha Elections: ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ ನಾಯಕತ್ವ ಪಟ್ಟು
ಸಾಂದರ್ಭಿಕ ಚಿತ್ರ
Pramod Shastri G
| Edited By: |

Updated on: Feb 09, 2024 | 8:18 AM

Share

ಬೆಂಗಳೂರು, ಫೆಬ್ರವರಿ 9: ಲೋಕಸಭಾ ಚುನಾವಣೆಗೆ (Lok Sabha Election) ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ (Congress) ನಾಯಕತ್ವ ಪಟ್ಟು ಹಿಡಿದಿದೆ. ಬಿಜೆಪಿಗೆ ಠಕ್ಕರ್ ಕೊಡಬಲ್ಲ ಸಚಿವರು ಹಾಗೂ ಅನುಭವಿ ನಾಯಕರಿಗೇ ಮೊದಲ ಆದ್ಯತೆ ಎಂದು ರಾಜ್ಯ ನಾಯಕತ್ವ ಹೇಳಿದ್ದು, ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೆರಿಗೆ ಹೋರಾಟದ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಜಿಲ್ಲಾವಾರು ಶಾಸಕರು ಹಾಗೂ ಸ್ಥಳೀಯ ನಾಯಕರ ಜೊತೆ ಚರ್ಚಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಶಾಸಕರ ಅಭಿಪ್ರಾಯವನ್ನೂ ಸಂಗ್ರಹಿಸಿ ಪಟ್ಟಿ ಸಿದ್ಧಪಡಿಸುತ್ತಿರುವ ಡಿಕೆ ಶಿವಕುಮಾರ್, ಶತಾಯಗತಾಯ ಗೆಲುವಿನ ಕುದುರೆಗೇ ಪಟ್ಟ ಕಟ್ಟಲೇಬೇಕೆಂದು ಪಣ ತೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಸಚಿವರಿಗೆ ಹೆಚ್ಚಿನ ಮಣೆ ಹಾಕುತ್ತಿದ್ದಾರೆ ಎನ್ನಲಾಗಿದೆ.

‘ಟಿವಿ9’ಗೆ ದೊರೆತ ಕೆಪಿಸಿಸಿ ಆಂತರಿಕ ಚರ್ಚಾ ಪಟ್ಟಿ ಅಭ್ಯರ್ಥಿಗಳ ವಿವರ

  • ಬೆಳಗಾವಿ – ಸತೀಶ್ ಜಾರಕಿಹೊಳಿ ಅಥವಾ ಜಾರಕಿಹೊಳಿ ಪುತ್ರಿ
  • ಚಿಕ್ಕೋಡಿ – ಲಕ್ಷ್ಮಣ್ ಸವದಿ ಪುತ್ರ ಅಥವಾ ಗಣೇಶ್ ಹುಕ್ಕೇರಿ ಶಿಫಾರಸ್ಸು ಸಾಧ್ಯತೆ
  • ಹಾವೇರಿ – ಹೆಚ್​ಕೆ ಪಾಟೀಲ್ ಪರ ಒಲವು
  • ಮಂಗಳೂರು – ಯುಟಿ ಖಾದರ್ ಹೆಸರು ಅಚ್ಚರಿಯ ರೀತಿಯಲ್ಲಿ ಎಂಟ್ರಿ. ಹಿಂದೂ ಮತಗಳನ್ನ ಸೆಳಯಬಲ್ಲ ಸಾಮರ್ಥ್ಯದ ಹಿನ್ನಲೆ ಹಾಲಿ ವಿಧಾನಸಭಾ ಸ್ಪೀಕರ್ ಕಣಕ್ಕೆ ಕೆಪಿಸಿಸಿ ಮಟ್ಟದಲ್ಲಿ ಚಿಂತನೆ
  • ಬಾಗಲಕೋಟೆ – ಸರ್ ನಾಯಕ್, ವೀಣಾ ಕಾಶಪ್ಪನವರ್ ಅಥವಾ ಸಂಯುಕ್ತ ಶಿವಾನಂದ ಪಾಟೀಲ್
  • ಕಲಬುರ್ಗಿ – ಮಲ್ಲಿಕಾರ್ಜುನ್ ಖರ್ಗೆ ಅಳಿಯ, ರಾಧಾಕೃಷ್ಣ ಹೆಸರು ಮುಂಚೂಣಿಯಲ್ಲಿ
  • ಉತ್ತರಕನ್ನಡ – ಆರ್​ವಿ ದೇಶಪಾಂಡೆ ಪರ ಸ್ಥಳೀಯ ಶಾಸಕರೂ ಸಹ ಬ್ಯಾಟಿಂಗ್
  • ಮೈಸೂರು – ಲಕ್ಷ್ಮಣ್ ಹಾಗೂ ಶುಶ್ರುತ್ ಗೌಡ ಫೈಟಿಂಗ್
  • ಬಳ್ಳಾರಿ – ಸೌಪರ್ಣಿಕಾ ತುಕಾರಾಂ ಹೆಸರು ಮುನ್ನಲೆಗೆ
  • ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸಚಿವ ಕೃಷ್ಣಭೈರೇಗೌಡ ಹೆಸರು ತೇಲಿ ಬಿಟ್ಟಿರುವ ಕೆಪಿಸಿಸಿ
  • ಬೆಂಗಳೂರು ದಕ್ಷಿಣ – ಪ್ರಿಯಾಕೃಷ್ಣಗೆ ನೀಡುವ ಬಗ್ಗೆ ಚರ್ಚೆ
  • ಕುತೂಹಲ ಮೂಡಿಸಿರುವ ರಾಜ್ಯ ಕಾಂಗ್ರೆಸ್ ನ ಲೋಕಸಭಾ ಅಭ್ಯರ್ಥಿ ಆಯ್ಕೆ

ಇದನ್ನೂ ಓದಿ: ಪ್ರಧಾನಿ ಮೋದಿ ಸಾಮಾನ್ಯ ವರ್ಗಕ್ಕೆ ಸೇರಿದವರು, ಅವರು ಜಾತಿಯ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ

ಮತ್ತೊಂದಡೆ ಬಿಜೆಪಿ ಸಹ ಲೋಕಸಭಾ ಚುನಾವಣೆ ತಯಾರಿ ತೀವ್ರಗೊಳಿಸಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರೇ ಖುದ್ದು ಅಖಾಡಕ್ಕಿಳಿದಿದ್ದಾರೆ. ಫೆಬ್ರವರಿ 10ರಂದು ಅವರು ರಾಜ್ಯಕ್ಕ ಭೇಟಿ ನೀಡಲಿದ್ದು, ಇಲ್ಲಿನ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ