ಬೆಂಗಳೂರು, ಫೆಬ್ರವರಿ 9: ಲೋಕಸಭಾ ಚುನಾವಣೆಗೆ (Lok Sabha Election) ಘಟಾನುಘಟಿ ನಾಯಕರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್ (Congress) ನಾಯಕತ್ವ ಪಟ್ಟು ಹಿಡಿದಿದೆ. ಬಿಜೆಪಿಗೆ ಠಕ್ಕರ್ ಕೊಡಬಲ್ಲ ಸಚಿವರು ಹಾಗೂ ಅನುಭವಿ ನಾಯಕರಿಗೇ ಮೊದಲ ಆದ್ಯತೆ ಎಂದು ರಾಜ್ಯ ನಾಯಕತ್ವ ಹೇಳಿದ್ದು, ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೆರಿಗೆ ಹೋರಾಟದ ಸಂದರ್ಭದಲ್ಲೇ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಜಿಲ್ಲಾವಾರು ಶಾಸಕರು ಹಾಗೂ ಸ್ಥಳೀಯ ನಾಯಕರ ಜೊತೆ ಚರ್ಚಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಶಾಸಕರ ಅಭಿಪ್ರಾಯವನ್ನೂ ಸಂಗ್ರಹಿಸಿ ಪಟ್ಟಿ ಸಿದ್ಧಪಡಿಸುತ್ತಿರುವ ಡಿಕೆ ಶಿವಕುಮಾರ್, ಶತಾಯಗತಾಯ ಗೆಲುವಿನ ಕುದುರೆಗೇ ಪಟ್ಟ ಕಟ್ಟಲೇಬೇಕೆಂದು ಪಣ ತೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಸಚಿವರಿಗೆ ಹೆಚ್ಚಿನ ಮಣೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಪ್ರಧಾನಿ ಮೋದಿ ಸಾಮಾನ್ಯ ವರ್ಗಕ್ಕೆ ಸೇರಿದವರು, ಅವರು ಜಾತಿಯ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್ ಗಾಂಧಿ
ಮತ್ತೊಂದಡೆ ಬಿಜೆಪಿ ಸಹ ಲೋಕಸಭಾ ಚುನಾವಣೆ ತಯಾರಿ ತೀವ್ರಗೊಳಿಸಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರೇ ಖುದ್ದು ಅಖಾಡಕ್ಕಿಳಿದಿದ್ದಾರೆ. ಫೆಬ್ರವರಿ 10ರಂದು ಅವರು ರಾಜ್ಯಕ್ಕ ಭೇಟಿ ನೀಡಲಿದ್ದು, ಇಲ್ಲಿನ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ