AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿಗೆ ಮುಳುವಾಗುತ್ತಾ ಕೋಲಾರ? ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು, ಪಟ್ಟು ಬಿಡದ ಜೆಡಿಎಸ್​​

Lok Sabha Election 2024: ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು ಹಾಕಿದೆ. ಎಸ್.ಸಿ. ಬಲಗೈ ಸಮುದಾಯಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕೋಲಾರ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧಿಸಿದ್ದಾರೆ. ಆದರೆ ಜೆಡಿಎಸ್ ಕೋಲಾರ ಲೋಕಸಭಾ ಕ್ಷೇತ್ರ ತಮಗೆ ಬೇಕೆ ಬೇಕು ಎಂದು ಪಟ್ಟು ಹಿಡಿದಿದೆ.

ಮೈತ್ರಿಗೆ ಮುಳುವಾಗುತ್ತಾ ಕೋಲಾರ? ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು, ಪಟ್ಟು ಬಿಡದ ಜೆಡಿಎಸ್​​
ಬಿಜೆಪಿ-ಜೆಡಿಎಸ್​
ವಿವೇಕ ಬಿರಾದಾರ
|

Updated on: Mar 18, 2024 | 8:41 AM

Share

ಲೋಕಸಭೆ ಚುನಾವಣೆಗೆ (Lok Sabha Election) ಮುಹೂರ್ತ ಫಿಕ್ಸ್ ಆಗಿದೆ. ಸರ್ವೆಗಳೂ ಸಹ ಬಿಜೆಪಿ-ಜೆಡಿಎಸ್ (BJP-JDS) ಕರ್ನಾಟಕದಲ್ಲಿ 23 ಸ್ಥಾನ ಗೆಲ್ಲುತ್ತೆಂಬ ಭವಿಷ್ಯ ನುಡಿತಿವೆ. ಹೀಗಾಗಿ ಹುಮ್ಮಸ್ಸಿನಲ್ಲಿರೋ ದೋಸ್ತಿಗಳು ಸೀಟು ಹಂಚಿಕೆ ಫೈನಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಶನಿವಾರ (ಮಾ.16) ರಂದು ದೆಹಲಿಗೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumarswamy) ಅವರು ಅಮಿತ್ ಶಾ ಭೇಟಿ ಮಾಡಿದ್ದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳ ಟಿಕೆಟ್​​ ತಮಗೆ ನೀಡುವಂತೆ ಕೇಳಿದ್ದಾರಂತೆ. ಆದರೆ ಬಿಜೆಪಿ ವರಿಷ್ಠರು ಕೋಲಾರ ಕ್ಷೇತ್ರ ಬಿಟ್ಟುಕೊಡಲು ಹಿಂದೇಟು ಹಾಕಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ದೊರೆತಿದೆ. ಅಷ್ಟಕ್ಕೂ ಬಿಜೆಪಿ ಹೈಕಮಾಂಡ್​ ನಾಯಕರು ಹಿಂದೇಟು ಹಾಕಿದ್ದೇಕೆ? ಇಲ್ಲಿದೆ ಓದಿ..

ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು ಹಾಕಿದೆ. ಎಸ್.ಸಿ. ಬಲಗೈ ಸಮುದಾಯಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕೋಲಾರ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧಿಸಿದ್ದಾರೆ. ಆದರೆ ಜೆಡಿಎಸ್ ಕೋಲಾರ ಲೋಕಸಭಾ ಕ್ಷೇತ್ರ ತಮಗೆ ಬೇಕೆ ಬೇಕು ಎಂದು ಪಟ್ಟು ಹಿಡಿದಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಬಿಜೆಪಿಗಿಂತ ಜೆಡಿಎಸ್ ಪಕ್ಷಕ್ಕೆ ಹೆಚ್ಚು ಮತಗಳ ಕ್ರೂಡಿಕರಣವಾಗಿತ್ತು. ಅಲ್ಲದೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೂವರು ಜೆಡಿಎಸ್ ಶಾಸಕರಿದ್ದಾರೆ. (ಮುಳಬಾಗಿಲು, ಶ್ರೀನಿವಾಸಪುರ, ಶಿಡ್ಲಘಟ್ಟ). ಬಿಜೆಪಿಗೆ ಹೋಲಿಸಿದರೆ ಜೆಡಿಎಸ್​ ಒಳ್ಳೆಯ ಸಂಘಟನೆ ಇದೆ. ಗೆಲ್ಲುವ ಅವಕಾಶ ಹೆಚ್ಚು ಇರುವ ಕಾರಣಕ್ಕೆ ಜೆಡಿಎಸ್ ಕೋಲಾರ ಕ್ಷೇತ್ರ ಬಿಟ್ಟುಕೊಡುವಂತೆ ಪಟ್ಟು ಹಿಡಿದಿದೆ. ಈ ವಿಚಾರವಾಗಿ ಮೈತ್ರಿ ನಾಯಕರಲ್ಲಿ ಅಸಮಾಧಾನ ಮೂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮಂಡ್ಯ ಟಿಕೆಟ್ ಜೆಡಿಎಸ್​ಗೆ ಫಿಕ್ಸ್? ಸುಮಲತಾ ಮುಂದಿನ ನಡೆ ಏನು? ಇಲ್ಲಿದೆ ಓದಿ

ಈ ಗೊಂದಲದ ನಡುವೆಯೇ ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮ ಮಾಡುವ ಕುರಿತು ಹೆಚ್​ಡಿ ಕುಮಾರಸ್ವಾಮಿ ನಾಳೆ (ಮಾ.19) ರಂದು ಕೋಲಾರ ಮುಖಂಡರ ಸಭೆ ಕರೆದಿದ್ದಾರೆ. ಸಭೆ ಬಳಿಕ ಅಂತಿಮ ನಿರ್ಧಾರ ತಿಳಿಸಿದ್ದಾರೆ. ಕೋಲಾರದಲ್ಲಿ ಬಲಗೈ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಸಿದರೆ ಹೆಚ್ಚು ಅನುಕೂಲವಾಗಲಿದೆ. ಇನ್ನು ಜೆಡಿಎಸ್​ನಿಂದ‌ ಭೋವಿ ಜನಾಂಗದ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಭೋವಿ ಅಭ್ಯರ್ಥಿ ಕಣಕ್ಕಿಳಿಸಿದರೆ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲವಾಗುವ ಸಾಧ್ಯತೆ ಹೆಚ್ಚಾಗಿದೆ.

ಸದ್ಯ ಕೋಲಾರ ಲೋಕಸಭಾ ಕ್ಷೇತ್ರ ಮೈತ್ರಿ ಪಕ್ಷಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ ಕೇವಲ ಎರಡು ಕ್ಷೇತ್ರಕ್ಕಾಗಿ ಮೈತ್ರಿ ಬೇಕಿತ್ತಾ ಎಂದು ಕೆಲವು ಜೆಡಿಎಸ್ ಶಾಸಕರು ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಸದ್ಯ ಚುನಾವಣೆ ಹೊಸ್ತಿಲಲ್ಲಿ ದಳಪತಿಗಳು ಗೊಂದಲದಲ್ಲಿ ಸಿಲುಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ