AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿಗೆ ಮುಳುವಾಗುತ್ತಾ ಕೋಲಾರ? ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು, ಪಟ್ಟು ಬಿಡದ ಜೆಡಿಎಸ್​​

Lok Sabha Election 2024: ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು ಹಾಕಿದೆ. ಎಸ್.ಸಿ. ಬಲಗೈ ಸಮುದಾಯಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕೋಲಾರ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧಿಸಿದ್ದಾರೆ. ಆದರೆ ಜೆಡಿಎಸ್ ಕೋಲಾರ ಲೋಕಸಭಾ ಕ್ಷೇತ್ರ ತಮಗೆ ಬೇಕೆ ಬೇಕು ಎಂದು ಪಟ್ಟು ಹಿಡಿದಿದೆ.

ಮೈತ್ರಿಗೆ ಮುಳುವಾಗುತ್ತಾ ಕೋಲಾರ? ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು, ಪಟ್ಟು ಬಿಡದ ಜೆಡಿಎಸ್​​
ಬಿಜೆಪಿ-ಜೆಡಿಎಸ್​
ವಿವೇಕ ಬಿರಾದಾರ
|

Updated on: Mar 18, 2024 | 8:41 AM

Share

ಲೋಕಸಭೆ ಚುನಾವಣೆಗೆ (Lok Sabha Election) ಮುಹೂರ್ತ ಫಿಕ್ಸ್ ಆಗಿದೆ. ಸರ್ವೆಗಳೂ ಸಹ ಬಿಜೆಪಿ-ಜೆಡಿಎಸ್ (BJP-JDS) ಕರ್ನಾಟಕದಲ್ಲಿ 23 ಸ್ಥಾನ ಗೆಲ್ಲುತ್ತೆಂಬ ಭವಿಷ್ಯ ನುಡಿತಿವೆ. ಹೀಗಾಗಿ ಹುಮ್ಮಸ್ಸಿನಲ್ಲಿರೋ ದೋಸ್ತಿಗಳು ಸೀಟು ಹಂಚಿಕೆ ಫೈನಲ್‌ನಲ್ಲಿ ಬ್ಯುಸಿಯಾಗಿದ್ದಾರೆ. ಶನಿವಾರ (ಮಾ.16) ರಂದು ದೆಹಲಿಗೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumarswamy) ಅವರು ಅಮಿತ್ ಶಾ ಭೇಟಿ ಮಾಡಿದ್ದರು. ಈ ವೇಳೆ ಹೆಚ್​ಡಿ ಕುಮಾರಸ್ವಾಮಿ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳ ಟಿಕೆಟ್​​ ತಮಗೆ ನೀಡುವಂತೆ ಕೇಳಿದ್ದಾರಂತೆ. ಆದರೆ ಬಿಜೆಪಿ ವರಿಷ್ಠರು ಕೋಲಾರ ಕ್ಷೇತ್ರ ಬಿಟ್ಟುಕೊಡಲು ಹಿಂದೇಟು ಹಾಕಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ದೊರೆತಿದೆ. ಅಷ್ಟಕ್ಕೂ ಬಿಜೆಪಿ ಹೈಕಮಾಂಡ್​ ನಾಯಕರು ಹಿಂದೇಟು ಹಾಕಿದ್ದೇಕೆ? ಇಲ್ಲಿದೆ ಓದಿ..

ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಬಿಜೆಪಿ ಹಿಂದೇಟು ಹಾಕಿದೆ. ಎಸ್.ಸಿ. ಬಲಗೈ ಸಮುದಾಯಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕೋಲಾರ ಕ್ಷೇತ್ರ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ನಾಯಕರು ನಿರ್ಧಿಸಿದ್ದಾರೆ. ಆದರೆ ಜೆಡಿಎಸ್ ಕೋಲಾರ ಲೋಕಸಭಾ ಕ್ಷೇತ್ರ ತಮಗೆ ಬೇಕೆ ಬೇಕು ಎಂದು ಪಟ್ಟು ಹಿಡಿದಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಲ್ಲಿ ಬಿಜೆಪಿಗಿಂತ ಜೆಡಿಎಸ್ ಪಕ್ಷಕ್ಕೆ ಹೆಚ್ಚು ಮತಗಳ ಕ್ರೂಡಿಕರಣವಾಗಿತ್ತು. ಅಲ್ಲದೆ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೂವರು ಜೆಡಿಎಸ್ ಶಾಸಕರಿದ್ದಾರೆ. (ಮುಳಬಾಗಿಲು, ಶ್ರೀನಿವಾಸಪುರ, ಶಿಡ್ಲಘಟ್ಟ). ಬಿಜೆಪಿಗೆ ಹೋಲಿಸಿದರೆ ಜೆಡಿಎಸ್​ ಒಳ್ಳೆಯ ಸಂಘಟನೆ ಇದೆ. ಗೆಲ್ಲುವ ಅವಕಾಶ ಹೆಚ್ಚು ಇರುವ ಕಾರಣಕ್ಕೆ ಜೆಡಿಎಸ್ ಕೋಲಾರ ಕ್ಷೇತ್ರ ಬಿಟ್ಟುಕೊಡುವಂತೆ ಪಟ್ಟು ಹಿಡಿದಿದೆ. ಈ ವಿಚಾರವಾಗಿ ಮೈತ್ರಿ ನಾಯಕರಲ್ಲಿ ಅಸಮಾಧಾನ ಮೂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಮಂಡ್ಯ ಟಿಕೆಟ್ ಜೆಡಿಎಸ್​ಗೆ ಫಿಕ್ಸ್? ಸುಮಲತಾ ಮುಂದಿನ ನಡೆ ಏನು? ಇಲ್ಲಿದೆ ಓದಿ

ಈ ಗೊಂದಲದ ನಡುವೆಯೇ ಕೋಲಾರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮ ಮಾಡುವ ಕುರಿತು ಹೆಚ್​ಡಿ ಕುಮಾರಸ್ವಾಮಿ ನಾಳೆ (ಮಾ.19) ರಂದು ಕೋಲಾರ ಮುಖಂಡರ ಸಭೆ ಕರೆದಿದ್ದಾರೆ. ಸಭೆ ಬಳಿಕ ಅಂತಿಮ ನಿರ್ಧಾರ ತಿಳಿಸಿದ್ದಾರೆ. ಕೋಲಾರದಲ್ಲಿ ಬಲಗೈ ಸಮುದಾಯದ ಅಭ್ಯರ್ಥಿ ಕಣಕ್ಕಿಳಿಸಿದರೆ ಹೆಚ್ಚು ಅನುಕೂಲವಾಗಲಿದೆ. ಇನ್ನು ಜೆಡಿಎಸ್​ನಿಂದ‌ ಭೋವಿ ಜನಾಂಗದ ಅಭ್ಯರ್ಥಿ ಮಲ್ಲೇಶ್ ಬಾಬು ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಭೋವಿ ಅಭ್ಯರ್ಥಿ ಕಣಕ್ಕಿಳಿಸಿದರೆ ಕಾಂಗ್ರೆಸ್ ಅಭ್ಯರ್ಥಿಗೆ ಅನುಕೂಲವಾಗುವ ಸಾಧ್ಯತೆ ಹೆಚ್ಚಾಗಿದೆ.

ಸದ್ಯ ಕೋಲಾರ ಲೋಕಸಭಾ ಕ್ಷೇತ್ರ ಮೈತ್ರಿ ಪಕ್ಷಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ ಕೇವಲ ಎರಡು ಕ್ಷೇತ್ರಕ್ಕಾಗಿ ಮೈತ್ರಿ ಬೇಕಿತ್ತಾ ಎಂದು ಕೆಲವು ಜೆಡಿಎಸ್ ಶಾಸಕರು ಕುಮಾರಸ್ವಾಮಿ ಅವರಿಗೆ ಪ್ರಶ್ನೆ ಮಾಡಿದ್ದಾರೆ. ಸದ್ಯ ಚುನಾವಣೆ ಹೊಸ್ತಿಲಲ್ಲಿ ದಳಪತಿಗಳು ಗೊಂದಲದಲ್ಲಿ ಸಿಲುಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು