ಸಿಎಂ, ಡಿಸಿಎಂ ಮುಂದೆ ಮುನಿಯಪ್ಪರ ದಲಿತ ಎಡಗೈ-ಬಲಗೈ ಸಮುದಾಯದ ಪ್ರಾತಿನಿಧ್ಯದ ವಾದ

Lok Sabha Election 2024: ಈಗಾಗಲೇ ಐದು ಮೀಸಲು ಕ್ಷೇತ್ರಗಳ ಪೈಕಿ ಮೂರು ದಲಿತ ಬಲ ಸಮುದಾಯಕ್ಕೆ ನೀಡಲಾಗಿದೆ. ಚಿತ್ರದುರ್ಗದಲ್ಲಿ ಮಾತ್ರ ದಲಿತ ಎಡ ಸಮುದಾಯಕ್ಕೆ ಟಿಕೇಟ್ ನೀಡಲಾಗಿದೆ. ಅಕಸ್ಮಾತ್ ಕೋಲಾರ ತಮ್ಮ ಕುಟುಂಬಕ್ಕೆ ನೀಡದೆ ಇದ್ದರೇ ದಲಿತ ಎಡ ಸಮುದಾಯದ ಮತಗಳ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸಚಿವ ಕೆಹೆಚ್​ ಮಹದೇವಪ್ಪ ಸಿಎಂ ಮತ್ತು ಡಿಸಿಎಂ ಮುಂದೆ ಹೇಳಿದ್ದಾರೆ.

ಸಿಎಂ, ಡಿಸಿಎಂ ಮುಂದೆ ಮುನಿಯಪ್ಪರ ದಲಿತ ಎಡಗೈ-ಬಲಗೈ ಸಮುದಾಯದ ಪ್ರಾತಿನಿಧ್ಯದ ವಾದ
ಕೆಹೆಚ್​ ಮುನಿಯಪ್ಪ
Follow us
| Updated By: ವಿವೇಕ ಬಿರಾದಾರ

Updated on:Mar 29, 2024 | 12:28 PM

ಕೋಲಾರ, ಮಾರ್ಚ್​ 29: ರಾಜ್ಯದ ಐದು ಪರಿಶಿಷ್ಟ ಜಾತಿಯ ಲೋಕಸಭಾ ಕ್ಷೇತ್ರಗಳಲ್ಲಿ ಸಾಮಾಜಿಕ ನ್ಯಾಯದಡಿ ಕೋಲಾರ ಕ್ಷೇತ್ರ ಕೂಡ ಒಂದು. ಕಾಂಗ್ರೆಸ್ (Congress)​ ಮೊದಲಿನಿಂದಲೂ ಎರಡು ಕ್ಷೇತ್ರದ ಟಿಕೆಟ್​ ದಲಿತ ಬಲಗೈ, ಎರಡು ಕ್ಷೇತ್ರ ಎಡಗೈ ಹಾಗೂ ಒಂದು ಭೋವಿ ಅಥವಾ ಲಂಬಾಣಿ ಸಮುದಾಯಕ್ಕೆ ನೀಡುತ್ತಾ ಬಂದಿದೆ. ಆದರೆ ಕಾಂಗ್ರೆಸ್ ಈ ಬಾರಿ ​ವಿಜಯಪುರ, ಕಲಬುರಗಿ ಕ್ಷೇತ್ರದ ಟಿಕೆಟ್​ ಅನ್ನು ಬಲಗೂ ಸಮುದಾಯವರಿಗೆ ನೀಡಿದೆ. ಇನ್ನು ಚಾಮರಾಜನಗರದಲ್ಲೂ ಬಲಗೈ ಸಮುದಾಯದ ಡಾ.ಹೆಚ್​.ಸಿ ಮಹದೇವಪ್ಪ ಪುತ್ರ ಸುನಿಲ್​ ಬೋಸ್​ಗೆ ನೀಡುವುದು ಬಹುತೇಕ ಪಕ್ಕಾ ಆಗಿದೆ.

ಕಾಂಗ್ರೆಸ್​ ಚಿತ್ರದುರ್ಗ ಕ್ಷೇತ್ರ ಒಂದನ್ನೂ ಮಾತ್ರ ಎಡಗೈ ಸಮುದಾಯಕ್ಕೆ (ಬಿ.ಎನ್​. ಚಂದ್ರಪ್ಪ) ಟಿಕೆಟ್​ ನೀಡಿದೆ. ಇದೀಗ ಕೋಲಾರದಲ್ಲೂ ಎಡಗೈ ಸಮುದಾಯಕ್ಕೆ ಟಿಕೆಟ್​ ನೀಡಿದರೇ 3 ಬಲ + 2 ಎಡ ಅಭ್ಯರ್ಥಿಗಳಿಗೆ ಟಿಕೆಟ್​ ಸಿಕ್ಕಂತಾಗುತ್ತದೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಪಟ್ಟು ಹಿಡಿದಿದ್ದಾರೆ.

ಹೀಗಾಗಿ ಕೆ ಎಚ್ ಮುನಿಯಪ್ಪ ನಿನ್ನೆ (ಮಾ.28) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು. ಈ ವೇಳೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೂಡ ಹಾಜರಿದ್ದರು.

ಇದನ್ನೂ ಓದಿ: ಕೋಲಾರ ಕಾಂಗ್ರೆಸ್​ ಶಾಸಕರ ಸಂಧಾನ ಸಭೆ ಯಶಸ್ವಿ: ಹಾಗಾದ್ರೆ ಲೋಕಸಭೆ ಟಿಕೆಟ್ ಯಾರಿಗೆ..?

ದಲಿತ ಎಡ-ಬಲ ಸಮುದಾಯದ ಪ್ರಾತಿನಿಧ್ಯದ ವಾದ

ಈಗಾಗಲೇ ಐದು ಮೀಸಲು ಕ್ಷೇತ್ರಗಳ ಪೈಕಿ ಮೂರು ದಲಿತ ಬಲ ಸಮುದಾಯಕ್ಕೆ ನೀಡಲಾಗಿದೆ. ಚಿತ್ರದುರ್ಗದಲ್ಲಿ ಮಾತ್ರ ದಲಿತ ಎಡ ಸಮುದಾಯಕ್ಕೆ ಟಿಕೇಟ್ ನೀಡಲಾಗಿದೆ. ಅಕಸ್ಮಾತ್ ಕೋಲಾರ ತಮ್ಮ ಕುಟುಂಬಕ್ಕೆ ನೀಡದೆ ಇದ್ದರೇ ದಲಿತ ಎಡ ಸಮುದಾಯದ ಮತಗಳ ಮೇಲೆ ನೇರ ಪರಿಣಾಮ ಬೀರುತ್ತದೆ.

ಉಳಿದ ಮೀಸಲು ಕ್ಷೇತ್ರಗಳಲ್ಲೂ ದಲಿತ ಎಡ ಸಮುದಾಯದ ಪರಿಣಾಮ ಉಲ್ಟಾ ಆಗುವ ಸಾಧ್ಯತೆ ಇದೆ. ದಲಿತ ಎಡ ವರ್ಗಕ್ಕೆ ಟಿಕೇಟ್ ನೀಡದೇ ಇದ್ದರೆ ಎಲ್ಲ ಮೀಸಲು ಕ್ಷೇತ್ರದ ಮೇಲೂ ದುಷ್ಪರಿಣಾಮ ಬೀಳಬಹುದೆಂದು ಎಚ್ಚರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Fri, 29 March 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ