AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ: ಪ್ರಹ್ಲಾದ್​ ಜೋಶಿ

ಉಹಾಪೋಹಗಳಿಗೆ ನಾನು ಉತ್ತರಿಸಲ್ಲ. ಎರಡು ಬಾರಿ ಗೆದ್ದವರಿಗೂ ಪಕ್ಷ ಟಿಕೆಟ್ ಕೊಟ್ಟಿದೆ. ಎಂಟು ಸಲ ಗೆದ್ದವರಿಗೂ ಟಿಕೆಟ್ ಕೊಡಲಾಗಿದೆ. ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ: ಪ್ರಹ್ಲಾದ್​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
ಶಿವಕುಮಾರ್ ಪತ್ತಾರ್
| Edited By: |

Updated on: Mar 10, 2024 | 12:45 PM

Share

ಹುಬ್ಬಳ್ಳಿ, ಮಾರ್ಚ್​ 10: ಲೋಕಸಭೆ ಚುನಾವಣೆ (Lok Sabha Election) ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್​​ ಮೈಸೂರಿನಲ್ಲಿ (Mysore) ಈ ಬಾರಿ ಯದುವೀರ್​ ಒಡೆಯರ್​ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್​ ಸಿಂಹ (Pratap Simha) ಅವರಿಗೆ ಟಿಕೆಟ್​ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಮಾತನಾಡಿ, ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ ಎಂದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ​ಉಹಾಪೋಹಗಳಿಗೆ ನಾನು ಉತ್ತರಿಸಲ್ಲ. ಎರಡು ಬಾರಿ ಗೆದ್ದವರಿಗೂ ಪಕ್ಷ ಟಿಕೆಟ್ ಕೊಟ್ಟಿದೆ. ಎಂಟು ಸಲ ಗೆದ್ದವರಿಗೂ ಟಿಕೆಟ್ ಕೊಡಲಾಗಿದೆ. ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ ಎಂದರು.

ಬಿಸಿ ಪಾಟೀಲ್ ಟಿಕೆಟ್​ಗಾಗಿ ಪಟ್ಟು ಹಿಡಿದ ವಿಚಾರವಾಗಿ ಮಾತನಾಡಿದ ಅವರು, ಇದನ್ನು ನಮ್ಮ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಎಲ್ಲರ ಜೊತೆ ಮಾತನಾಡುತ್ತಾರೆ. ನಮ್ಮ ರಾಷ್ಟ್ರೀಯ ನಾಯಕರು ಟಿಕೆಟ್ ತೀರ್ಮಾನ ಆದ ಮೇಲೆ ಸಮಾಧಾನ ಮಾಡುತ್ತಾರೆ. ಮುಂದಿನ ಎರಡು ಮೂರು ದಿನಗಳಲ್ಲಿ ಟಿಕೆಟ್ ಫೈನಲ್ ಆಗಬಹುದು ಬಿಎಸ್​ ಯಡಿಯೂರಪ್ಪ ನಾವು (ಪ್ರಹ್ಲಾದ್​ ಜೋಶಿ) ದೆಹಲಿಗೆ ಹೋಗಬೇಕಿತ್ತು. ಎಲೆಕ್ಷನ್ ಕಮೀಟಿ ಮೀಟಿಂಗ್ ಮುಂದಕ್ಕೆ ಹೋಗಿದೆ ಎಂದರು.

ಇದನ್ನೂ ಓದಿ: ಮೈಸೂರು ಸಂಸದ ಪ್ರತಾಪ್​ ಸಿಂಹಗೆ ಟಿಕೆಟ್​ ಮಿಸ್​?: ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಚ್ಚರಿ ಹೇಳಿಕೆ

ಹುಬ್ಬಳ್ಳಿಯಲ್ಲಿ ವಿಕಸಿತ ಭಾರತ ಅಭಿಯಾನಕ್ಕೆ‌ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನಮಗೆ ಇನ್ನೊಂದು ಟರ್ಮಿನಲ್ ಅವಶ್ಯಕತೆ ಇತ್ತು. ಹೀಗಾಗಿ ನಾನು ಪ್ರಧಾನಿ ಮೋದಿಯವರಿಗೆ, ಜೋತಿರಾಧ್ಯ ಸಿಂಧ್ಯಾ ಅವರಿಗೆ ವಿನಂತಿ ಮಾಡಿದ್ದೆ. ಇವತ್ತು ಟರ್ಮಿನಲ್​ಗೆ ಶಂಕು ಸ್ಥಾಪನೆ ಆಗಿದೆ. ಬೆಂಗಳೂರಿನಂತೆ ಇಲ್ಲೂ ಕೂಡಾ ಟರ್ಮಿನಲ್ ನಿರ್ಮಾಣ ಮಾಡಲಾಗತ್ತೆ. ಇನ್ನೂ ಹೆಚ್ಚು ಏರಲೈನ್ಸ್ ಸರ್ವಿಸ್ ಸೇರಲಿವೆ ಎಂದು ತಿಳಿಸಿದರು.

ವಿಕಸಿತ ಭಾರತದ ಕಲ್ಪನೆಯಿಂದ ಎಲ್​ಇಡಿ ವೀಡಿಯೋ ವಾಹನಗಳು ಎಲ್ಲೆಡೆ ಸಂಚರಿಸುತ್ತಿವೆ. ಮೋದಿಯವರ ಕಾರ್ಯಗಳನ್ನು ದೇಶದ ಜನತೆಗೆ ತಿಳಿಸುತ್ತಿದ್ದೇವೆ. ಭಾರತ ಅಭಿವೃದ್ದಿ ಶೀಲ ದೇಶ ಎಂದು ಮನವರಿಕೆ ಮಾಡುವ ಉದ್ದೇಶದಿಂದ ಈ‌ ವಾಹನಗಳು‌ ಸಂಚರಿಸುತ್ತಿವೆ. ದೇಶಾದ್ಯಂತ ಮೋದಿಯವರ ಸಾಧನೆಗಳನ್ನು ತಿಳಿಯಪಡಿಸಲಾಗುತ್ತಿದೆ ಎಂದರು.

ವಿಕಸಿತ ಭಾರತ ಅಭಿಯಾನ ಚಾಲನೆ ಕಾರ್ಯಕ್ರಮದಲ್ಲಿ‌ ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್ ಅವರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ