AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sumalatha Ambareesh: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಎಂದು ಸಂಸದೆ ಸುಮಲತಾ ಅಂಬರೀಶ್​ ಉತ್ತರಿಸಿದ್ದಾರೆ.

Sumalatha Ambareesh: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಬಿಜೆಪಿಗೆ ಸೇರ್ಪಡೆ: ಸುಮಲತಾ
ಸಂಸದೆ ಸುಮಲತಾ ಅಂಬರೀಶ್​
TV9 Web
| Edited By: |

Updated on:Apr 03, 2024 | 1:19 PM

Share

ಮಂಡ್ಯ, ಏಪ್ರಿಲ್​ 03: ನಾನು ಈ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ (BJP) ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ​ ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದರು.

ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ರಿ. ನನಗೆ ಐತಿಹಾಸಿಕ ಗೆಲುವು ಕೊಡುಗೆಯಾಗಿ ಕೊಟ್ಟಿದ್ದೀರಿ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ಜನಸಾಮಾನ್ಯರ ಸಮಸ್ಯೆಗಳ ಪರ ನಾನು ನಿಂತಿದ್ದೇನೆ. ಜಿಲ್ಲೆ ಅಭಿವೃದ್ಧಿ ಮಾಡುವುದಷ್ಟೇ ನನ್ನ ಮನಸ್ಸಿನಲ್ಲಿದ್ದಿದ್ದು. ಕೆಆರ್​ಎಸ್​ ಡ್ಯಾಂ ಸಂರಕ್ಷಣೆ, ಅಕ್ರಮ ಗಣಿಗಾರಿಕೆ ವಿರುದ್ಧ ಯುದ್ಧವನ್ನೇ ಮಾಡಿದ್ದೇನೆ. ಮೈಷುಗರ್​ ಕಾರ್ಖಾನೆಗಾಗಿ ಎರಡು ವರ್ಷ ಹೋರಾಡಿದ್ದೇನೆ ಎಂದು ತಿಳಿಸಿದರು.

2019ರಲ್ಲಿ ಅದೊಂದು ಬೇರೆ ತರಹದ ಸವಾಲಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಕೊನೆಗಳಿಗೆವರೆಗೂ ಬಿಜೆಪಿ ಟಿಕೆಟ್ ಉಳಿಸಿಕೊಳ್ಳಲು ಹೋರಾಟ ಮಾಡಿದೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರ ನಿಂತುಕೊಳ್ಳೊಲು ಹೇಳಿದರು. ನನಗೆ ಬೇರೆ ಬೇರೆ ಕ್ಷೇತ್ರದ ಆಫರ್​ ನೀಡಿದರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಗೆದ್ದರು, ಸೋತರು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದರು.

ಇದನ್ನೂ ಓದಿ: ಸುಮಲತಾಗೋಸ್ಕರ ಕೈ ಸರ್ಜರಿ ಮುಂದೂಡಿಕೊಂಡ ದರ್ಶನ್

ಸುಮಲತಾ ಅವಶ್ಯಕತೆ ನಮಗೆ ಬೇಕಿಲ್ಲ ಅಂತ ಕಾಂಗ್ರೆಸ್​​ನ ಪ್ರಮುಖ ನಾಯಕರು ಹೇಳಿದರು. ನನಗೆ ಗೌರವ ಇಲ್ಲದ ಕಡೆ ಹೋಗಿ ಎಂದು ಒತ್ತಾಯಿಸಬೇಡಿ. ನಾನು ಕಾಂಗ್ರೆಸ್​ಗೆ ಹೋಗಲ್ಲ. ಕಾಂಗ್ರೆಸ್​ನವರು ಬೇಡ ಎಂದಿದ್ದಾರೆ, ನಾನು ಹೋಗಲ್ಲ. ಕೇಂದ್ರ ಸರ್ಕಾರ ನಾಲ್ಕು ಸಾವಿರ ಕೋಟಿ ಅನುದಾನ ನೀಡಿದೆ. ಪ್ರತಿ ವಿಷಯದಲ್ಲೂ ನನ್ನನ್ನು ವಿಶ್ವಾಸಕ್ಕೆ ಪಡೆಯುತ್ತಿದ್ದರು. ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು ಎಂದು ತಿಳಿಸಿದ್ದಾರೆ.

ಸಂಸದೆ ಸ್ಥಾನ ಶಾಶ್ವತವಲ್ಲ. ಮತ್ತೊಬ್ಬರು ಸಂಸದರಾಗಿ ಬರುತ್ತಾರೆ. ಆದರೆ ನಾನು ಮಂಡ್ಯದ ಸೊಸೆಯಾಗಿ ಕೊನೆಯವರೆಗೂ ಉಳಿಯುತ್ತೇನೆ. ಬದಲಾದ ಪರಿಸ್ಥಿತಿ, ಸನ್ನಿವೇಶವನ್ನು ನಾವು ಅರ್ಥ ಮಾಡಿಕೊಳ್ಳಬೇಕು. ಹಠ ಸಾಧನೆ ಮಾಡುವ ಉದ್ದೇಶ ಇದ್ದರೇ ಪಕ್ಷೇತರ ಸ್ಪರ್ಧೆ ಮಾಡಬಹುದು. ಅದರಿಂದ ಯಾರಿಗೆ ಲಾಭ? ನನ್ನ ಸ್ವಾರ್ಥ ಏನು ಇಲ್ಲ, ಲಾಭಕ್ಕಾಗಿ ಯೋಚಿಸಿದರೇ ಬೇರೆ ಕ್ಷೇತ್ರ ಆಯ್ಕೆ ಮಾಡಬಹುದಿತ್ತು. ಬಂದ ಅವಕಾಶಗಳನ್ನು ಮಂಡ್ಯಕ್ಕಾಗಿ ಬಿಟ್ಟಿದ್ದೇನೆ. ರಾಜಕೀಯ ಮಾಡಿದರೇ ಮಂಡ್ಯದಲ್ಲಿ ಮಾತ್ರ ಅಂತ ನಿರ್ಧಾರ ಮಾಡಿದ್ದೇನೆ. ಅಸಂಖ್ಯಾತ ಅಂಬರೀಶ್ ಅಭಿಮಾನಿಗಳನ್ನ ಬಿಟ್ಟು ಹೋದರೆ ಮಂಡ್ಯ ಸೊಸೆ ಅನಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:00 pm, Wed, 3 April 24

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?