AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಮಂಡ್ಯ ಕ್ಷೇತ್ರದಲ್ಲಿ ಎರಡೂ ಪಕ್ಷಗಳಲ್ಲಿ ಒಮ್ಮತ ಮೂಡಿಬಂದಿಲ್ಲ. ಹೈಕಮಾಂಡ್ ಬಿಟ್ಟುಕೊಟ್ಟರೂ ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಸ್ಥಳೀಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುವುದೇ ಜೆಡಿಎಸ್​ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ.

ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ
ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ
ಪ್ರಶಾಂತ್​ ಬಿ.
| Edited By: |

Updated on: Feb 08, 2024 | 7:42 AM

Share

ಮಂಡ್ಯ, ಫೆ.8: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್(BJP-JDS) ಮೈತ್ರಿ ಮಾಡಿಕೊಂಡಿದ್ದರೂ ಮಂಡ್ಯ (Mandya) ಕ್ಷೇತ್ರದಲ್ಲಿ ಎರಡೂ ಪಕ್ಷಗಳಲ್ಲಿ ಒಮ್ಮತ ಮೂಡಿಬಂದಿಲ್ಲ. ಹೈಕಮಾಂಡ್ ಬಿಟ್ಟುಕೊಟ್ಟರೂ ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಸ್ಥಳೀಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುವುದೇ ಜೆಡಿಎಸ್​ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಅದಾಗ್ಯೂ, ಕ್ಷೇತ್ರದಿಂದ ಸ್ಪರ್ಧೆ ಮಾಡಲು ಜೆಡಿಎಸ್ ಕೆಲಸ ಆರಂಭಿಸಿದೆ.

ಈಗಾಗಲೇ ಮೈತ್ರಿ ಮಾತುಕತೆ ವೇಳೆ ಮಂಡ್ಯ ಜೆಡಿಎಸ್ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಸಿಗ್ನಲ್ ಕೊಟ್ಟಿದೆ. ಆದರೆ, ಸ್ಥಳೀಯವಾಗಿ ಮಂಡ್ಯದಲ್ಲಿ ಕಮಲ ದಳ ನಾಯಕ ನಡುವೆ ಒಮ್ಮತ ಮೂಡಿಬಂದಿಲ್ಲ. ಬಿಜೆಪಿಯ ಸ್ಥಳೀಯ ನಾಯಕರ ಮನವೊಲಿಕೆಗೆ ಜೆಡಿಎಸ್ ಕಸರತ್ತು ಮುಂದುವರಿಸಿದೆ. ಅದಾಗ್ಯೂ, ಮಂಡ್ಯದ ಮೈತ್ರಿ ಅಭ್ಯರ್ಥಿಯಾರೆಂಬುದು ತೀವ್ರ ಕುತೂಹಲ ಕೆರಳಿಸಿದೆ.

ಸೋತಲ್ಲಿ ಪುಟಿದೇಳಲು ಜೆಡಿಎಸ್ ಯುವರಾಜ ಪ್ಲಾನ್?

ಮಂಡ್ಯ ಲೋಕಸಭಾ ಚುನಾವಣಾ ಅಖಾಡ ಮತ್ತೆ ಗರಿಗೆದರಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ನಡುವೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಪರ್ಯಟಣೆ ಕುತೂಹಲ ಕೆರಳಿಸಿದೆ. ಮುಂದಿನ ವಾರದಲ್ಲಿ ನಿಖಿಲ್ ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಸಿಡಿದೆದ್ದ ನಾರಾಯಣಗೌಡ; ಸಿದ್ದರಾಮಯ್ಯ ಜೊತೆ ರಜಸ್ಯ ಮಾತುಕತೆ

ಮುಂದಿನ ವಾರ ಅಥವಾ ಈ‌ ತಿಂಗಳ ಕೊನೆಯ ವಾರದಲ್ಲಿ ನಿಖಿಲ್ ಮಂಡ್ಯ ಪ್ರವಾಸ ಕೈಗೊಳ್ಳಲಿದ್ದು, ಮಂಡ್ಯ ಕ್ಷೇತ್ರದ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪ್ರವಾಸ ಕೈಗೊಳ್ಳಲಿದ್ದಾರೆ. ಕ್ಷೇತ್ರಗಳ ಪ್ರತಿ ಹೋಬಳಿಯಲ್ಲೂ ಮಹಿಳಾ, ಯುವ ಘಟಕ ಸೇರಿ ಪಕ್ಷದ ಎಲ್ಲ ಘಟಕದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಆ ಮೂಲಕ ಪಕ್ಷದ ಮುಖಂಡರ ವಿಶ್ವಾಸಗಳಿಸಲು ನಿಖಿಲ್ ರಣತಂತ್ರ ರೂಪಿಸುತ್ತಿದ್ದಾರೆ. ಯಾವುದೇ ಸಮಾವೇಶ, ರ್ಯಾಲಿ ನಡೆಸದೆ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಪ್ಲಾನ್ ಮಾಡುತ್ತಿದ್ದಾರೆ. ಹಾಗಾದರೆ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಗುವುದು ಖಚಿತವೇ? ತಂಬ ಕುತೂಹಲವೂ ಮೂಡಿಸಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್