AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಮಂಡ್ಯ ಕ್ಷೇತ್ರದಲ್ಲಿ ಎರಡೂ ಪಕ್ಷಗಳಲ್ಲಿ ಒಮ್ಮತ ಮೂಡಿಬಂದಿಲ್ಲ. ಹೈಕಮಾಂಡ್ ಬಿಟ್ಟುಕೊಟ್ಟರೂ ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಸ್ಥಳೀಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುವುದೇ ಜೆಡಿಎಸ್​ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ.

ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ
ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ
ಪ್ರಶಾಂತ್​ ಬಿ.
| Edited By: |

Updated on: Feb 08, 2024 | 7:42 AM

Share

ಮಂಡ್ಯ, ಫೆ.8: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್(BJP-JDS) ಮೈತ್ರಿ ಮಾಡಿಕೊಂಡಿದ್ದರೂ ಮಂಡ್ಯ (Mandya) ಕ್ಷೇತ್ರದಲ್ಲಿ ಎರಡೂ ಪಕ್ಷಗಳಲ್ಲಿ ಒಮ್ಮತ ಮೂಡಿಬಂದಿಲ್ಲ. ಹೈಕಮಾಂಡ್ ಬಿಟ್ಟುಕೊಟ್ಟರೂ ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಸ್ಥಳೀಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುವುದೇ ಜೆಡಿಎಸ್​ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಅದಾಗ್ಯೂ, ಕ್ಷೇತ್ರದಿಂದ ಸ್ಪರ್ಧೆ ಮಾಡಲು ಜೆಡಿಎಸ್ ಕೆಲಸ ಆರಂಭಿಸಿದೆ.

ಈಗಾಗಲೇ ಮೈತ್ರಿ ಮಾತುಕತೆ ವೇಳೆ ಮಂಡ್ಯ ಜೆಡಿಎಸ್ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಸಿಗ್ನಲ್ ಕೊಟ್ಟಿದೆ. ಆದರೆ, ಸ್ಥಳೀಯವಾಗಿ ಮಂಡ್ಯದಲ್ಲಿ ಕಮಲ ದಳ ನಾಯಕ ನಡುವೆ ಒಮ್ಮತ ಮೂಡಿಬಂದಿಲ್ಲ. ಬಿಜೆಪಿಯ ಸ್ಥಳೀಯ ನಾಯಕರ ಮನವೊಲಿಕೆಗೆ ಜೆಡಿಎಸ್ ಕಸರತ್ತು ಮುಂದುವರಿಸಿದೆ. ಅದಾಗ್ಯೂ, ಮಂಡ್ಯದ ಮೈತ್ರಿ ಅಭ್ಯರ್ಥಿಯಾರೆಂಬುದು ತೀವ್ರ ಕುತೂಹಲ ಕೆರಳಿಸಿದೆ.

ಸೋತಲ್ಲಿ ಪುಟಿದೇಳಲು ಜೆಡಿಎಸ್ ಯುವರಾಜ ಪ್ಲಾನ್?

ಮಂಡ್ಯ ಲೋಕಸಭಾ ಚುನಾವಣಾ ಅಖಾಡ ಮತ್ತೆ ಗರಿಗೆದರಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ನಡುವೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಪರ್ಯಟಣೆ ಕುತೂಹಲ ಕೆರಳಿಸಿದೆ. ಮುಂದಿನ ವಾರದಲ್ಲಿ ನಿಖಿಲ್ ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಸಿಡಿದೆದ್ದ ನಾರಾಯಣಗೌಡ; ಸಿದ್ದರಾಮಯ್ಯ ಜೊತೆ ರಜಸ್ಯ ಮಾತುಕತೆ

ಮುಂದಿನ ವಾರ ಅಥವಾ ಈ‌ ತಿಂಗಳ ಕೊನೆಯ ವಾರದಲ್ಲಿ ನಿಖಿಲ್ ಮಂಡ್ಯ ಪ್ರವಾಸ ಕೈಗೊಳ್ಳಲಿದ್ದು, ಮಂಡ್ಯ ಕ್ಷೇತ್ರದ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪ್ರವಾಸ ಕೈಗೊಳ್ಳಲಿದ್ದಾರೆ. ಕ್ಷೇತ್ರಗಳ ಪ್ರತಿ ಹೋಬಳಿಯಲ್ಲೂ ಮಹಿಳಾ, ಯುವ ಘಟಕ ಸೇರಿ ಪಕ್ಷದ ಎಲ್ಲ ಘಟಕದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಆ ಮೂಲಕ ಪಕ್ಷದ ಮುಖಂಡರ ವಿಶ್ವಾಸಗಳಿಸಲು ನಿಖಿಲ್ ರಣತಂತ್ರ ರೂಪಿಸುತ್ತಿದ್ದಾರೆ. ಯಾವುದೇ ಸಮಾವೇಶ, ರ್ಯಾಲಿ ನಡೆಸದೆ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಪ್ಲಾನ್ ಮಾಡುತ್ತಿದ್ದಾರೆ. ಹಾಗಾದರೆ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಗುವುದು ಖಚಿತವೇ? ತಂಬ ಕುತೂಹಲವೂ ಮೂಡಿಸಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!