AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಮಂಡ್ಯ ಕ್ಷೇತ್ರದಲ್ಲಿ ಎರಡೂ ಪಕ್ಷಗಳಲ್ಲಿ ಒಮ್ಮತ ಮೂಡಿಬಂದಿಲ್ಲ. ಹೈಕಮಾಂಡ್ ಬಿಟ್ಟುಕೊಟ್ಟರೂ ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಸ್ಥಳೀಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುವುದೇ ಜೆಡಿಎಸ್​ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ.

ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ
ಸ್ಥಳೀಯ ಕಮಲ ಕಲಿಗಳ ವಿರೋಧ; ಬಿಜೆಪಿ ಮಂಡ್ಯ ಬಿಟ್ಟುಕೊಟ್ಟರೂ ಜೆಡಿಎಸ್​ ನಾಯಕರಿಗೆ ತಲೆಬಿಸಿ
ಪ್ರಶಾಂತ್​ ಬಿ.
| Updated By: Rakesh Nayak Manchi|

Updated on: Feb 08, 2024 | 7:42 AM

Share

ಮಂಡ್ಯ, ಫೆ.8: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್(BJP-JDS) ಮೈತ್ರಿ ಮಾಡಿಕೊಂಡಿದ್ದರೂ ಮಂಡ್ಯ (Mandya) ಕ್ಷೇತ್ರದಲ್ಲಿ ಎರಡೂ ಪಕ್ಷಗಳಲ್ಲಿ ಒಮ್ಮತ ಮೂಡಿಬಂದಿಲ್ಲ. ಹೈಕಮಾಂಡ್ ಬಿಟ್ಟುಕೊಟ್ಟರೂ ಮಂಡ್ಯವನ್ನು ಜೆಡಿಎಸ್​ಗೆ ಬಿಟ್ಟುಕೊಡಲು ಸಿದ್ಧರಿಲ್ಲದ ಸ್ಥಳೀಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ಪಡೆಯುವುದೇ ಜೆಡಿಎಸ್​ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಅದಾಗ್ಯೂ, ಕ್ಷೇತ್ರದಿಂದ ಸ್ಪರ್ಧೆ ಮಾಡಲು ಜೆಡಿಎಸ್ ಕೆಲಸ ಆರಂಭಿಸಿದೆ.

ಈಗಾಗಲೇ ಮೈತ್ರಿ ಮಾತುಕತೆ ವೇಳೆ ಮಂಡ್ಯ ಜೆಡಿಎಸ್ ಬಿಟ್ಟುಕೊಡಲು ಬಿಜೆಪಿ ಹೈಕಮಾಂಡ್ ಸಿಗ್ನಲ್ ಕೊಟ್ಟಿದೆ. ಆದರೆ, ಸ್ಥಳೀಯವಾಗಿ ಮಂಡ್ಯದಲ್ಲಿ ಕಮಲ ದಳ ನಾಯಕ ನಡುವೆ ಒಮ್ಮತ ಮೂಡಿಬಂದಿಲ್ಲ. ಬಿಜೆಪಿಯ ಸ್ಥಳೀಯ ನಾಯಕರ ಮನವೊಲಿಕೆಗೆ ಜೆಡಿಎಸ್ ಕಸರತ್ತು ಮುಂದುವರಿಸಿದೆ. ಅದಾಗ್ಯೂ, ಮಂಡ್ಯದ ಮೈತ್ರಿ ಅಭ್ಯರ್ಥಿಯಾರೆಂಬುದು ತೀವ್ರ ಕುತೂಹಲ ಕೆರಳಿಸಿದೆ.

ಸೋತಲ್ಲಿ ಪುಟಿದೇಳಲು ಜೆಡಿಎಸ್ ಯುವರಾಜ ಪ್ಲಾನ್?

ಮಂಡ್ಯ ಲೋಕಸಭಾ ಚುನಾವಣಾ ಅಖಾಡ ಮತ್ತೆ ಗರಿಗೆದರಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ನಡುವೆ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಪರ್ಯಟಣೆ ಕುತೂಹಲ ಕೆರಳಿಸಿದೆ. ಮುಂದಿನ ವಾರದಲ್ಲಿ ನಿಖಿಲ್ ಮಂಡ್ಯ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ವಿರುದ್ಧ ಸಿಡಿದೆದ್ದ ನಾರಾಯಣಗೌಡ; ಸಿದ್ದರಾಮಯ್ಯ ಜೊತೆ ರಜಸ್ಯ ಮಾತುಕತೆ

ಮುಂದಿನ ವಾರ ಅಥವಾ ಈ‌ ತಿಂಗಳ ಕೊನೆಯ ವಾರದಲ್ಲಿ ನಿಖಿಲ್ ಮಂಡ್ಯ ಪ್ರವಾಸ ಕೈಗೊಳ್ಳಲಿದ್ದು, ಮಂಡ್ಯ ಕ್ಷೇತ್ರದ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪ್ರವಾಸ ಕೈಗೊಳ್ಳಲಿದ್ದಾರೆ. ಕ್ಷೇತ್ರಗಳ ಪ್ರತಿ ಹೋಬಳಿಯಲ್ಲೂ ಮಹಿಳಾ, ಯುವ ಘಟಕ ಸೇರಿ ಪಕ್ಷದ ಎಲ್ಲ ಘಟಕದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಆ ಮೂಲಕ ಪಕ್ಷದ ಮುಖಂಡರ ವಿಶ್ವಾಸಗಳಿಸಲು ನಿಖಿಲ್ ರಣತಂತ್ರ ರೂಪಿಸುತ್ತಿದ್ದಾರೆ. ಯಾವುದೇ ಸಮಾವೇಶ, ರ್ಯಾಲಿ ನಡೆಸದೆ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಪ್ಲಾನ್ ಮಾಡುತ್ತಿದ್ದಾರೆ. ಹಾಗಾದರೆ, ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆಗುವುದು ಖಚಿತವೇ? ತಂಬ ಕುತೂಹಲವೂ ಮೂಡಿಸಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!