AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ಕುಮಾರಸ್ವಾಮಿ ಗೆದ್ದರೆ ಸಚಿವರಾಗುತ್ತಾರೆ, ಹೀಗಾಗಿ ಹೆಚ್​ಡಿಕೆಗೆ ಮತ ಹಾಕಿ: ಜೆಡಿಎಸ್​ ಮುಖಂಡರಿಂದ ಪ್ರಚಾರ

ಜೆಡಿಎಸ್​ ಕಾರ್ಯಕರ್ತರು ತಾಲೂಕು, ಹೋಬಳಿ ಮತ್ತು ಗ್ರಾಮ ಮಟ್ಟದ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿದರೆ ಮೋದಿ ಸರ್ಕಾರದಲ್ಲಿ ಅವರು ಕೇಂದ್ರ ಸಚಿವರಾಗುತ್ತಾರೆ ಎಂದು ಹೇಳುತ್ತಿದ್ದಾರೆ.

ಲೋಕಸಭಾ ಚುನಾವಣೆ 2024: ಕುಮಾರಸ್ವಾಮಿ ಗೆದ್ದರೆ ಸಚಿವರಾಗುತ್ತಾರೆ, ಹೀಗಾಗಿ ಹೆಚ್​ಡಿಕೆಗೆ ಮತ ಹಾಕಿ: ಜೆಡಿಎಸ್​ ಮುಖಂಡರಿಂದ ಪ್ರಚಾರ
ಹೆಚ್​ಡಿ ಕುಮಾರಸ್ವಾಮಿ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Apr 05, 2024 | 8:41 AM

ಮಂಡ್ಯ, ಏಪ್ರಿಲ್​ 05: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರುತ್ತಿರುವ ಹಾಗೆ ಲೋಕಸಭೆ ಚುನಾವಣೆಯ (Lok Sabha Election 2024) ಕಾವು ಹೆಚ್ಚಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, 28 ಲೋಕಸಭಾ ಕ್ಷೇತ್ರಗಳಿಗೆ 183 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಏಪ್ರಿಲ್​ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತದೆ. ಇಂದಿನಿಂದ ಪ್ರಚಾರದ ಭರಾಟೆ ಜೋರಾಗುತ್ತದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್​ (JDS) ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಪರವಾಗಿ ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ತಾಲೂಕು, ಹೋಬಳಿ ಮತ್ತು ಗ್ರಾಮಗಳಲ್ಲಿ ಮಟ್ಟದಲ್ಲಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿದರೆ ಮೋದಿ ಸರ್ಕಾರದಲ್ಲಿ ಅವರು ಕೇಂದ್ರ ಸಚಿವರಾಗುತ್ತಾರೆ. ಅದೆ ಸ್ಟಾರ್​ ಚಂದ್ರು ಅವರಿಗೆ ಮತ ಹಾಕಿದರೆ ಕೇವಲ ಸಂಸದರಾಗಿರುತ್ತಾರೆ ಎಂದು ಪ್ರಚಾರ ಮಾಡುತ್ತಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಕೃಷಿ ಖಾತೆ ನೀಡುವುದು ಪಕ್ಕಾ. ಕೇಂದ್ರ ಸಚಿವರಾದರೆ ಮಂಡ್ಯ ಸಾಕಷ್ಟು ಅಭಿವೃದ್ಧಿಯಾಗುತ್ತದೆ. ಮಂಡ್ಯ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಕಾವೇರಿ ಸಮಸ್ಯೆಗೂ ಪರಿಹಾರ ಸಿಗುತ್ತದೆ. ಹೀಗಾಗಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿ ಎಂದು ಬಿಜೆಪಿ ಮತ್ತು ಜೆಡಿಎಸ್​ ಎರಡೂ ಪಕ್ಷದ ಕಾರ್ಯಕರ್ತರು ಜನರಿಗೆ ಹೇಳುತ್ತಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ಮತ ಸೆಳೆಯಲು ದೋಸ್ತಿಗಳ ಮೆಗಾ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಕಣದಲ್ಲಿದ್ದಾರೆ 10 ಕೋಟ್ಯಧಿಪತಿಗಳು, ವಿವರ ಇಲ್ಲಿದೆ

ಸಿಎಂ ಮಾಡುವಂತೆ ಪ್ರಚಾರ ನಡೆಸಿದ್ದ ಹೆಚ್​ಡಿಕೆ ಬೆಂಬಲಿಗರು

2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಗೆದ್ದರೆ ಮುಖ್ಯಮಂತ್ರಿಯಾಗುತ್ತಾರೆ. ಅವರು ಮುಖ್ಯಮಂತ್ರಿಯಾಗಲು ಪೂರ್ಣ ಬಹುಮತದ ಅವಶ್ಯಕತೆ ಇದೆ. ಹೀಗಾಗಿ ನೀವು ಜೆಡಿಎಸ್​ ಪಕ್ಷಕ್ಕೆ ಮತ ಹಾಕಬೇಕು ಎಂದು ಕಾರ್ಯಕರ್ತರು ಮತದಾರರ ಬಳಿ ಮತಯಾಚಿಸಿದ್ದರು. ಇದರಿಂದ 2018 ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್​ ಅಭ್ಯರ್ಥಿಗಳು ಗೆದ್ದಿದ್ದರು. ನಂತರ ಜೆಡಿಎಸ್​-ಕಾಂಗ್ರೆಸ್​ ಮೈತ್ರಿಯಾಗಿ, ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ ಇವರ ಕುರ್ಚಿ ಐದು ವರ್ಷ ಪೂರೈಸಲಿಲ್ಲ. ಕೇವಲ ಒಂದು ವರ್ಷದಲ್ಲಿ ಅಧಿಕಾರ ಕಳೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Fri, 5 April 24

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?