AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ 2024: ಕುಮಾರಸ್ವಾಮಿ ಗೆದ್ದರೆ ಸಚಿವರಾಗುತ್ತಾರೆ, ಹೀಗಾಗಿ ಹೆಚ್​ಡಿಕೆಗೆ ಮತ ಹಾಕಿ: ಜೆಡಿಎಸ್​ ಮುಖಂಡರಿಂದ ಪ್ರಚಾರ

ಜೆಡಿಎಸ್​ ಕಾರ್ಯಕರ್ತರು ತಾಲೂಕು, ಹೋಬಳಿ ಮತ್ತು ಗ್ರಾಮ ಮಟ್ಟದ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿದರೆ ಮೋದಿ ಸರ್ಕಾರದಲ್ಲಿ ಅವರು ಕೇಂದ್ರ ಸಚಿವರಾಗುತ್ತಾರೆ ಎಂದು ಹೇಳುತ್ತಿದ್ದಾರೆ.

ಲೋಕಸಭಾ ಚುನಾವಣೆ 2024: ಕುಮಾರಸ್ವಾಮಿ ಗೆದ್ದರೆ ಸಚಿವರಾಗುತ್ತಾರೆ, ಹೀಗಾಗಿ ಹೆಚ್​ಡಿಕೆಗೆ ಮತ ಹಾಕಿ: ಜೆಡಿಎಸ್​ ಮುಖಂಡರಿಂದ ಪ್ರಚಾರ
ಹೆಚ್​ಡಿ ಕುಮಾರಸ್ವಾಮಿ
ಪ್ರಶಾಂತ್​ ಬಿ.
| Edited By: |

Updated on:Apr 05, 2024 | 8:41 AM

Share

ಮಂಡ್ಯ, ಏಪ್ರಿಲ್​ 05: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರುತ್ತಿರುವ ಹಾಗೆ ಲೋಕಸಭೆ ಚುನಾವಣೆಯ (Lok Sabha Election 2024) ಕಾವು ಹೆಚ್ಚಾಗುತ್ತಿದೆ. ನಾಮಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿದ್ದು, 28 ಲೋಕಸಭಾ ಕ್ಷೇತ್ರಗಳಿಗೆ 183 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಏಪ್ರಿಲ್​ 26 ರಂದು ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತದೆ. ಇಂದಿನಿಂದ ಪ್ರಚಾರದ ಭರಾಟೆ ಜೋರಾಗುತ್ತದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್​ (JDS) ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಪರವಾಗಿ ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರು ಪ್ರಚಾರ ಆರಂಭಿಸಿದ್ದಾರೆ. ತಾಲೂಕು, ಹೋಬಳಿ ಮತ್ತು ಗ್ರಾಮಗಳಲ್ಲಿ ಮಟ್ಟದಲ್ಲಿ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಪ್ರಚಾರ ಸಭೆಗಳಲ್ಲಿ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿದರೆ ಮೋದಿ ಸರ್ಕಾರದಲ್ಲಿ ಅವರು ಕೇಂದ್ರ ಸಚಿವರಾಗುತ್ತಾರೆ. ಅದೆ ಸ್ಟಾರ್​ ಚಂದ್ರು ಅವರಿಗೆ ಮತ ಹಾಕಿದರೆ ಕೇವಲ ಸಂಸದರಾಗಿರುತ್ತಾರೆ ಎಂದು ಪ್ರಚಾರ ಮಾಡುತ್ತಿದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಕೃಷಿ ಖಾತೆ ನೀಡುವುದು ಪಕ್ಕಾ. ಕೇಂದ್ರ ಸಚಿವರಾದರೆ ಮಂಡ್ಯ ಸಾಕಷ್ಟು ಅಭಿವೃದ್ಧಿಯಾಗುತ್ತದೆ. ಮಂಡ್ಯ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಕಾವೇರಿ ಸಮಸ್ಯೆಗೂ ಪರಿಹಾರ ಸಿಗುತ್ತದೆ. ಹೀಗಾಗಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಮತ ಹಾಕಿ ಎಂದು ಬಿಜೆಪಿ ಮತ್ತು ಜೆಡಿಎಸ್​ ಎರಡೂ ಪಕ್ಷದ ಕಾರ್ಯಕರ್ತರು ಜನರಿಗೆ ಹೇಳುತ್ತಿದ್ದಾರೆ. ಈ ಮೂಲಕ ಭಾವನಾತ್ಮಕವಾಗಿ ಮತ ಸೆಳೆಯಲು ದೋಸ್ತಿಗಳ ಮೆಗಾ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಕಣದಲ್ಲಿದ್ದಾರೆ 10 ಕೋಟ್ಯಧಿಪತಿಗಳು, ವಿವರ ಇಲ್ಲಿದೆ

ಸಿಎಂ ಮಾಡುವಂತೆ ಪ್ರಚಾರ ನಡೆಸಿದ್ದ ಹೆಚ್​ಡಿಕೆ ಬೆಂಬಲಿಗರು

2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್​ ಕಾರ್ಯಕರ್ತರು ಹೆಚ್​ಡಿ ಕುಮಾರಸ್ವಾಮಿ ಗೆದ್ದರೆ ಮುಖ್ಯಮಂತ್ರಿಯಾಗುತ್ತಾರೆ. ಅವರು ಮುಖ್ಯಮಂತ್ರಿಯಾಗಲು ಪೂರ್ಣ ಬಹುಮತದ ಅವಶ್ಯಕತೆ ಇದೆ. ಹೀಗಾಗಿ ನೀವು ಜೆಡಿಎಸ್​ ಪಕ್ಷಕ್ಕೆ ಮತ ಹಾಕಬೇಕು ಎಂದು ಕಾರ್ಯಕರ್ತರು ಮತದಾರರ ಬಳಿ ಮತಯಾಚಿಸಿದ್ದರು. ಇದರಿಂದ 2018 ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್​ ಅಭ್ಯರ್ಥಿಗಳು ಗೆದ್ದಿದ್ದರು. ನಂತರ ಜೆಡಿಎಸ್​-ಕಾಂಗ್ರೆಸ್​ ಮೈತ್ರಿಯಾಗಿ, ಹೆಚ್​ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ ಇವರ ಕುರ್ಚಿ ಐದು ವರ್ಷ ಪೂರೈಸಲಿಲ್ಲ. ಕೇವಲ ಒಂದು ವರ್ಷದಲ್ಲಿ ಅಧಿಕಾರ ಕಳೆದುಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Fri, 5 April 24

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ