ಲೋಕಸಭೆ ಚುನಾವಣೆ: ಮತ್ತೆ ಬೆಳಗಾವಿಯಿಂದಲೇ ಶುರುವಾದ ಗಿಫ್ಟ್​​ ಪಾಲಿಟಿಕ್ಸ್, ಬಿಜೆಪಿ ನಾಯಕನಿಂದ ಹೆಲ್ಮೆಟ್​ ವಿತರಣೆ

ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗಿಪ್ಟ್ ಪಾಲಿಟಿಕ್ಸ್ ಜೋರಾಗಿಯೇ ಸದ್ದು ಮಾಡಿತ್ತು. 2023 ವರ್ಷದ ಆರಂಭದಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮತದಾರರಿಗೆ ಗಿಫ್ಟ್​​ಗಳನ್ನು ನೀಡಿ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಆರಂಭಿಸಿದ್ದರು. ಇದೀಗ ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದು, ಈ ಬಾರಿಯೂ ಗಿಪ್ಟ್ ಪಾಲಿಟಿಕ್ಸ್ ಬೆಳಗಾವಿಯಿಂದಲೇ ಆರಂಭವಾಗಿದೆ.

ಲೋಕಸಭೆ ಚುನಾವಣೆ: ಮತ್ತೆ ಬೆಳಗಾವಿಯಿಂದಲೇ ಶುರುವಾದ ಗಿಫ್ಟ್​​ ಪಾಲಿಟಿಕ್ಸ್, ಬಿಜೆಪಿ ನಾಯಕನಿಂದ ಹೆಲ್ಮೆಟ್​ ವಿತರಣೆ
ಬೆಳಗಾವಿ ಗಿಫ್ಟ್​​ ಪಾಲಿಟಿಕ್ಸ್​​
Follow us
| Updated By: ವಿವೇಕ ಬಿರಾದಾರ

Updated on: Jan 15, 2024 | 8:55 AM

ಬೆಳಗಾವಿ, ಜನವರಿ 15: ಕಳೆದ ವರ್ಷ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗಿಪ್ಟ್ ಪಾಲಿಟಿಕ್ಸ್ (Gift Politics) ಜೋರಾಗಿಯೇ ಸದ್ದು ಮಾಡಿತ್ತು. 2023 ವರ್ಷದ ಆರಂಭದಲ್ಲೇ ಬೆಳಗಾವಿ (Belagavi) ಜಿಲ್ಲೆಯಲ್ಲಿ ಜನಪ್ರತಿನಿಧಿಗಳು ಮತದಾರರಿಗೆ ಗಿಫ್ಟ್​​ಗಳನ್ನು ನೀಡಿ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಆರಂಭಿಸಿದ್ದರು. ಇದೀಗ ಲೋಕಸಭೆ ಚುನಾವಣೆ ಹತ್ತಿರದಲ್ಲಿದ್ದು, ಈ ಬಾರಿಯೂ ಗಿಪ್ಟ್ ಪಾಲಿಟಿಕ್ಸ್ ಬೆಳಗಾವಿಯಿಂದಲೇ ಆರಂಭವಾಗಿದೆ. ಹೌದು ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ‌ ಶಾಸಕ ಸಂಜಯ ಪಾಟೀಲ್ ಹೆಲ್ಮೆಟ್ ವಿತರಿಸುತ್ತಿದ್ದಾರೆ.

ಆಕಾಂಕ್ಷಿ ಸಂಜಯ ಪಾಟೀಲ್ ಭಾವಚಿತ್ರ ಮತ್ತು ಕಮಲದ ಗುರುತಿರುವ ಹೆಲ್ಮೆಟ್ ಅನ್ನು ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ ಹಾಗೂ ಬೆಳಗಾವಿ ಗ್ರಾಮೀಣ‌ ಮತಕ್ಷೇತ್ರದ ಬಿಜೆಪಿ ಪದಾಧಿಕಾರಿಗಳಿಗೆ ಪದಾಧಿಕಾರಿಗಳಿಗೆ ವಿತರಿಸುತ್ತಿದ್ದಾರೆ. ಸಂಜಯ ಪಾಟೀಲ್ ಕಳೆದ ವರ್ಷವೂ ಕ್ಷೇತ್ರದ ಮತದಾರರಿಗೆ ಗಿಪ್ಟ್ ವಿತರಿಸಿದ್ದರು. ಆದರೆ ಸಂಜಯ ಪಾಟೀಲ್​ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು.

ಇದನ್ನೂ ಓದಿ: ಬಿಜೆಪಿ ಅಥವಾ ಕಾಂಗ್ರೆಸ್; ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸುಮಲತಾ ಸ್ಪರ್ಧೆ ಖಚಿತ!

ಸಂಜಯ ಪಾಟೀಲ್ ಈ ಬಾರಿಯ ಬೆಳಗಾವಿ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಎಂಟೂ ಮತಕ್ಷೇತ್ರದ ಪಕ್ಷದ ಪದಾಧಿಕಾರಿಗಳನ್ನು ಸೆಳೆಯಲು ಸಂಜಯ್​ ಪಾಟೀಲ್​ ಹೆಲ್ಮೆಟ್ ವಿತರಿಸುತ್ತಿದ್ದಾರೆ. ಈ ಹೆಲ್ಮೆಟ್ ವಿತರಿಸುವ ಸಮಾರಂಭದಲ್ಲಿ ಸಂಸದೆ ಮಂಗಲಾ ಅಂಗಡಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಬಿಜೆಪಿ ಶಾಸಕ ಅಭಯ ಪಾಟೀಲ್ ಭಾಗಿಯಾಗಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಸದ್ದು ಮಾಡಿದ್ದ ಗಿಫ್ಟ್​​, ಆಣೆ ಪ್ರಮಾಣ

ಹಾಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಜನರಿಗೆ, ಮತ ಹಾಕುವಂತೆ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿಸಿದ್ದರು. ಅವರು ಆಣೆ ಪ್ರಮಾಣ ಮಾಡಿದ ನಂತರ, ಮತದಾರರಿಗೆ ಮನೆಯ ಪಾತ್ರೆಗಳು ಮತ್ತು ಬ್ಲೆಂಡರ್ಗಳನ್ನು ನೀಡಲಾಗಿತ್ತು.

ಇನ್ನು ಖಾನಾಪುರ ಕ್ಷೇತ್ರದಲ್ಲಿ ಮಹಿಳಾ ಮತದಾರರ ಓಲೈಕೆಗೆ ಅರಿಶಿನ ಕುಂಕುಮ ಪಾಲಿಟಿಕ್ಸ್ ನಡೆದಿತ್ತು. ಅಂಜಲಿ ನಿಂಬಾಳ್ಕರ್ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಹಾಗೂ ಅಂಜಲಿ ನಿಂಬಾಳ್ಕರ್‌ ಮಹಿಳೆಯರಿಗೆ ಉಚಿತ ಲಂಚ್ ಬಾಕ್ಸ್ ವಿತರಣೆ ಮಾಡಿದ್ದರು. ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎ.ದಿಲೀಪಕುಮಾರ್‌ ಮಹಿಳೆಯರಿಗೆ ಸೀರೆ ಗಿಫ್ಟ್ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ