AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಗೆಲ್ಲಲು ಭಿನ್ನಾಭಿಪ್ರಾಯ ಮರೆತು ಹುಬ್ಬಳ್ಳಿಯಲ್ಲಿ ಮತ್ತೆ ಒಂದಾದ ಬಿಜೆಪಿ ನಾಯಕರು

ಹುಬ್ಬಳ್ಳಿ ಖಾಸಗಿ ಹೋಟೆಲ್​ನಲ್ಲಿ ತಡರಾತ್ರಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಜಗದೀಶ್ ಶೆಟ್ಟರ್ ಸಭೆ ಮಾಡಿದ್ದು, ವೈಮನಸ್ಸು ಮರೆತು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಒಂದಾಗಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಮುನೇನಕೊಪ್ಪ, ಶಾಸಕರಾದ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಎಮ್​. ಆರ್​.ಪಾಟೀಲ್, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್, ಈರಣ್ಣ ಭಾಗಿಯಾಗಿದ್ದರು.

ಲೋಕಸಭೆ ಗೆಲ್ಲಲು ಭಿನ್ನಾಭಿಪ್ರಾಯ ಮರೆತು ಹುಬ್ಬಳ್ಳಿಯಲ್ಲಿ ಮತ್ತೆ ಒಂದಾದ ಬಿಜೆಪಿ ನಾಯಕರು
ಬಿಜೆಪಿ ನಾಯಕರು
ವಿವೇಕ ಬಿರಾದಾರ
|

Updated on:Feb 04, 2024 | 8:58 PM

Share

ಹುಬ್ಬಳ್ಳಿ, ಫೆಬ್ರವರಿ 04: ವಿಧಾನಸಭೆ ಚುನಾವಣೆ ಸಮಯದಲ್ಲಿ ಟಿಕೆಟ್​ ನೀಡಲು ನಿರಾಕರಿಸಿದ್ದಕ್ಕೆ ಬಿಜೆಪಿಯ ಕಟ್ಟಾಳು ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ (Jagadish Shettar)​ ಕಮಲ ಮನೆ ತೊರೆದು ಕಾಂಗ್ರೆಸ್ (Congress)​ ಪಕ್ಷ ಸೇರಿದ್ದರು. ಈ ವೇಳೆ ಜಗದೀಶ್​ ಶೆಟ್ಟರ್​ ಅವರನ್ನು ಬಿಜೆಪಿಯಲ್ಲೇ (BJP) ಉಳಿಸಿಕೊಳ್ಳಲು ಕೇಸರಿ ನಾಯಕರು ಸಾಕಷ್ಟು ಪ್ರಯತ್ನ ಪಟ್ಟರೂ ಸಾಧ್ಯವಾಗಿರಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಜೋಡೆತ್ತು ಎಂದೇ ಹೆಸರುವಾಸಿಯಾಗಿದ್ದಾರೆ. ಆದರೆ ಶೆಟ್ಟರ್​ ಪಕ್ಷ ತೊರೆಯುತ್ತಿದ್ದಂತೆ ಇಬ್ಬರ ನಡುವೆ ಸಣ್ಣ ಬಿರುಕು ಮೂಡಿತ್ತು.

ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಿದ ಮೇಲೆ ರಾಜ್ಯ ಬಿಜೆಪಿ ನಾಯಕರ ಮೇಲೆ ನೇರಾ ನೇರ ವಾಗ್ದಾಳಿ ಮಾಡಲು ಶುರು ಮಾಡಿದ್ದರು. ಇದು ಸಚಿವ ಪ್ರಹ್ಲಾದ್​ ಜೋಶಿ ಅಸಮಾಧನಕ್ಕೂ ಕಾರಣವಾಗಿತ್ತು. ಇನ್ನು ವಿಧಾನಸಭೆಯಲ್ಲಿ ಸೆಂಟ್ರಲ್ ಕ್ಷೇತ್ರದಿಂದ ಕಾಂಗ್ರೆಸ್​ ಜಗದೀಶ್​ ಶೆಟ್ಟರ್ ಅವರಿಗೆ ಟಿಕೆಟ್​ ನೀಡಿತು. ಸೋಲಿಲ್ಲದ ಸರದಾರನಂತೆ ಸತತ ಆರು ಬಾರಿ ಗೆದ್ದಿದ್ದ ಶೆಟ್ಟರ್​ 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಾಣಬೇಕಾಯಿತು. ಇದಾದ ನಂತರ ಶೆಟ್ಟರ್​ ಅವರನ್ನು ಕಾಂಗ್ರೆಸ್​ ಎಂಎಲ್​ಸಿ ಮಾಡಿತು.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರ ಬಿಜೆಪಿ ಭದ್ರಕೋಟೆ. ಜಾತಿವಾರು ಲೆಕ್ಕಚಾರ ನೋಡುವವುದಾದರೆ ಲಿಂಗಾಯತರ ಸಂಖ್ಯೆ ಹೆಚ್ಚಾಗಿದೆ. ಜಾತಿಗಿಂತ ಮಿಗಿಲಾಗಿ ಇಲ್ಲಿ ಹಿಂದುತ್ವ ಸಿದ್ಧಾಂತ ಹೆಚ್ಚು ವರ್ಕೌಟ್​ ಆಗುತ್ತದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಬಿಜೆಪಿ ಸುಲಭ ಜಯ ಸಿಗುತ್ತದೆ. ಇನ್ನು ಜಗದೀಶ್​ ಶೆಟ್ಟರ್​ ಕಾಂಗ್ರೆಸ್​ ಸೇರಿದ ಬಳಿಕ ಸಾರ್ವಜನಿಕರ ನಡುವೆ ಕಾಣಿಸುವುದೇ ಅಪರೂಪವಾಯಿತು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಜಗದೀಶ್​ ಶೆಟ್ಟರ್​ ಗೇಮ್​ ಪ್ಲ್ಯಾನ್​: ಲಿಂಗಾಯತ ನಾಯಕರೇ ಟಾರ್ಗೆಟ್

ಶೆಟ್ಟರ್​ಗೆ ಗಾಳ ಹಾಕಿದ ಬಿಜೆಪಿ

ಜಗದೀಶ್​ ಶೆಟ್ಟರ್​​ ಮತ್ತು ಲಕ್ಷ್ಮಣ ಸವದಿ ಕಾಂಗ್ರೆಸ್​ ಸೇರಿದ ಮೇಲೆ ಲಿಂಗಯಾತ ಮತಗಳು ಚದುರಿದಂತಾಗಿದ್ದವು. ಇದರ ಪರಿಣಾಮ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅನುಭವಿಸಿತು. ಬಳಿಕ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಾಕ್ಷರಾಗಿ ಘೋಷಿಸಿದ ನಂತರ ಲಿಂಗಾಯತರ ಗಮನ ಬಿಜೆಪಿಯಡೆಗೆ ಸರಿತು. ಬಳಿಕ ಬಿವೈ ವಿಜಯೇಂದ್ರ ಮತ್ತು ಬಿಎಸ್​ ಯಡಿಯೂರಪ್ಪ ಅವರು ನಿರಂತರವಾಗಿ ಜಗದೀಶ ಶೆಟ್ಟರ್​ ಅವರನ್ನು ಸಂಪರ್ಕಿಸಿ ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಹುಬ್ಬಳ್ಳಿ-ಧಾರವಾಡ ಸ್ಥಳೀಯ ನಾಯಕರಿಗೆ ಇದು ಇಷ್ಟವಿರಲಿಲ್ಲ ಎಂಬ ಮಾತುಗಳು ಕೇಳಿಬಂದವು.

ಮತ್ತೆ ಒಂದಾದ ಶೆಟ್ಟರ್, ಜೋಶಿ

ಬಿಜೆಪಿ ಸೇರಿದ ಬಳಿಕವೂ ಪ್ರಹ್ಲಾದ್​ ಜೋಶಿ ಮತ್ತು ಜಗದೀಶ ಶೆಟ್ಟರ್ ಬಣಗಳ ನಡುವೆ ಭಿನ್ನಾಭಿಪ್ರಾಯ ಇತ್ತು ಎಂಬ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ನಿನ್ನೆ (ಫೆ.03) ರಂದು ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಗೆ ಜಗದೀಶ್​ ಶೆಟ್ಟರ್​ ಮತ್ತು ಮುನೇನಕೊಪ್ಪ ಗೈರಾಗಿದ್ದರು. ಆದರೆ ಹುಬ್ಬಳ್ಳಿ ಖಾಸಗಿ ಹೋಟೆಲ್​ನಲ್ಲಿ ತಡರಾತ್ರಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಜಗದೀಶ್ ಶೆಟ್ಟರ್ ಸಭೆ ಮಾಡಿದ್ದು, ವೈಮನಸ್ಸು ಮರೆತು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ಒಂದಾಗಿದ್ದಾರೆ. ಈ ಸಭೆಯಲ್ಲಿ ಮಾಜಿ ಸಚಿವ ಮುನೇನಕೊಪ್ಪ, ಶಾಸಕರಾದ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಎಮ್​. ಆರ್​.ಪಾಟೀಲ್, ಪಾಲಿಕೆ ಸದಸ್ಯರಾದ ಸಂತೋಷ ಚವ್ಹಾಣ್, ಈರಣ್ಣ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:57 pm, Sun, 4 February 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!