AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈತ್ರಿಯಿಂದ ಆನೆಬಲ: ಹಾಸನದಲ್ಲಿ ಹೆಚ್​ಡಿ ದೇವೇಗೌಡ ತಾಲೂಕುವಾರು ಸಭೆ

ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ದೆ ಮಾಡುವ ಬಗ್ಗೆ ಊಹಾಪೋಹ ಇದೆ. ಪ್ರಧಾನಿ ಮೋದಿಯವರು ಏನು ಹೇಳುತ್ತಾರೋ ಗೊತ್ತಿಲ್ಲ. ಅವರು ಸ್ಪರ್ಧಿಸಲೇಬೇಕು ಎಂದು ಸೂಚಿಸಿದರೆ ಮಂಡ್ಯ ಅಥವಾ ತುಮಕೂರಿನಿಂದ ಸ್ಪರ್ಧಿಸಬಹುದು ಎಂದು ಹೆಚ್​ಡಿ ದೇವೇಗೌಡ ಹೇಳಿದ್ದಾರೆ.

ಮೈತ್ರಿಯಿಂದ ಆನೆಬಲ: ಹಾಸನದಲ್ಲಿ ಹೆಚ್​ಡಿ ದೇವೇಗೌಡ ತಾಲೂಕುವಾರು ಸಭೆ
ಹೆಚ್​ಡಿ ದೇವೇಗೌಡ
Follow us
ಮಂಜುನಾಥ ಕೆಬಿ
| Updated By: Ganapathi Sharma

Updated on: Jan 25, 2024 | 11:32 AM

ಹಾಸನ, ಜನವರಿ 25: ಲೋಕಸಭೆ ಚುನಾವಣೆಗೆ (Lok Sabha Elections 2024) ಬಿಜೆಪಿ ಜತೆಗಿನ ಮೈತ್ರಿಯಿಂದ ಮತ್ತೆ ಪುಟಿದೆದ್ದಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡರು (HD Deve Gowda) ಹಾಸನದಲ್ಲಿ ತಾಲೂಕುವಾರು ಸಭೆ ನಡೆಸುತ್ತಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಈ ಜಿಲ್ಲೆಯಲ್ಲಿ ಪ್ರತೀ ತಾಲ್ಲೂಕುವಾರು ಸಭೆ ನಡೆಸೋ ಬಗ್ಗೆ ಮೊದಲೇ ಹೇಳಿದ್ದೆ. ಪಕ್ಷದ ಎಲ್ಲಾ ಹಂತದ ಚುನಾಯಿತ ಹಾಲಿ ಹಾಗೂ ಮಾಜಿ ಸದಸ್ಯರ ಭೇಟಿಯಾಗುತ್ತಿದ್ದೇನೆ. ಅರಸೀಕೆರೆ, ಬೇಲೂರು ಹಾಸನ‌ ಮುಗಿಸಿ ಬುಧವಾರ ಚನ್ನರಾಯಪಟ್ಟಣ ಹಾಗೂ ಇಂದು (ಶುಕ್ರವಾ) ಆಲೂರಿನಲ್ಲಿ ಸಭೆ ನಡೆಸುತ್ತಿದ್ದೇನೆ ಎಂದರು.

ನಮ್ಮ (ಜೆಡಿಎಸ್) ಹಾಗೂ ಬಿಜೆಪಿ ನಡುವೆ ಇನ್ನೂ ಸೀಟು ಹಂಚಿಕೆ ಅಂತಿಮ ಆಗಿಲ್ಲ. ಆದರೆ ಹಾಸನದಲ್ಲಿ ಹಾಲಿ ಸದಸ್ಯರು ನಮ್ಮವರೇ ಇದ್ದಾರೆ. ಕೆಲವರು ದೇವೇಗೌಡರು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದಿದ್ದರಿಂದ ಗೊಂದಲ ಇತ್ತು. ಹಾಗಾಗಿ ನಾನೇ ಆ ವಿಚಾರವಾಗಿ ಸ್ಪಷ್ಟನೆ ನೀಡಿದ್ದು, ಕಾರ್ಯಕರ್ತರ ಭೇಟಿಯಾಗಿದ್ದೇನೆ. ಈ ಲೋಕಸಭಾ ಕ್ಷೇತ್ರ ಗೆಲ್ಲಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಿವೈ ವಿಜಯೇಂದ್ರ ಮನೆಗೆ ಬಂದಾಗ ಪ್ರಜ್ಚಲ್ ಅವರೇ ಸ್ವಾಗತ ಮಾಡಿದರು. ಹಿಂದೆ ನಾವು ಹಾಗು ಬಿಜೆಪಿ ಹೋರಾಟ ಮಾಡಿರಬಹುದು. ಆದರೆ ಈಗ ಒಂದಾಗಿ ಹೋಗುತ್ತೇವೆ. ಬಹುಶಃ ಮುಂದಿನ ವಾರದಲ್ಲಿ ಸೀಟು ಹಂಚಿಕೆ ತೀರ್ಮಾನ ಆಗಬಹುದು. ಕುಮಾರಸ್ವಾಮಿ ಅವರು ಬಿಜೆಪಿಯ ಕೆಲ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಸೀಟು ಹಂಚಿಕೆ ವಿಚಾರದಲ್ಲಿ ಕುಮಾರಸ್ವಾಮಿ ತೀರ್ಮಾನದ ಬಗ್ಗೆ ನಾನು ಮಧ್ಯಪ್ರವೇಶ ಮಾಡಲ್ಲ. ನಮಗೆ ಮಂಡ್ಯ ಕೋಲಾರ, ತುಮಕೂರು ಎಂದು ಊಹಾಪೋಹಗಳಿವೆ. ಹಾಸನದಲ್ಲಿ ಹಾಲಿ ಸಂಸದರು ನಮ್ಮವರೇ ಇದ್ದಾರೆ. ಅನೇಕರು ದೇವೇಗೌಡರು ಇಲ್ಲಿಂದ ನಿಂತು ಗೆಲ್ಲಬೇಕು ಎಂಬ ಭಾವನೆ ಮೂಡಿಸಿದ್ದರು. ಆದರೆ ನನಗೆ 91 ವರ್ಷ ವಯಸ್ಸಾಗಿದೆ. ಹಾಗಾಗಿ ನಾನು ಸ್ಪರ್ಧಿಸಲ್ಲ. ನಾನು ಪ್ರಜ್ವಲ್ ಪರ ಪ್ರಚಾರ ಮಾಡುತ್ತೇನೆ ಎಂದು ದೇವೇಗೌಡ ಹೇಳಿದರು.

ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ದೆ ಮಾಡುವ ಬಗ್ಗೆ ಊಹಾಪೋಹ ಇದೆ. ಪ್ರಧಾನಿ ಮೋದಿಯವರು ಏನು ಹೇಳುತ್ತಾರೋ ಗೊತ್ತಿಲ್ಲ. ಅವರು ಸ್ಪರ್ಧಿಸಲೇಬೇಕು ಎಂದು ಸೂಚಿಸಿದರೆ ಮಂಡ್ಯ ಅಥವಾ ತುಮಕೂರಿನಿಂದ ಸ್ಪರ್ಧಿಸಬಹುದು. ಅವರನ್ನು ಸಾಕಷ್ಟು ಕಡೆ ಜನ ಆಹ್ವಾನಿಸುತ್ತಿದ್ದಾರೆ. ಆದರೆ ಇದನ್ನು ತೀರ್ಮಾನ ಮಾಡುವುದು ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರು. ಅದರೆ ಇದುವರೆಗೆ ಆ ರೀತಿ ಮಾತುಕತೆ ಆಗಿಲ್ಲ. ನನ್ನ ಗಮನಕ್ಕೆ ಬಂದಹಾಗೆ ಇದುವರೆಗೆ ಚರ್ಚೆ ಆಗಿಲ್ಲ ಎಂದು ದೇವೇಗೌಡ ತಿಳಿಸಿದರು.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಶೀಘ್ರ ಫೈನಲ್: ಜನವರಿ ಕೊನೆಯಲ್ಲಿ ಅಮಿತ್ ಶಾ ಜತೆ ಕುಮಾರಸ್ವಾಮಿ ಸಭೆ

ನಿಖಿಲ್ ಈ ಬಾರಿ ಸ್ಪರ್ದೆ ಮಾಡುವುದಿಲ್ಲ ಎನ್ನುವುದು ಕುಮಾರಸ್ವಾಮಿ ಅವರ ಅಭಿಪ್ರಾಯ. ಆದರೆ ಮಂಡ್ಯದಲ್ಲಿ ಈ ಬಾರಿ ನಿಖಿಲ್ ಅವರು ಸ್ಪರ್ದೆ ಮಾಡಬೇಕು ಎನ್ನೋ ಒತ್ತಾಯ ಇದೆ. ಕುಮಾರಸ್ವಾಮಿ ಒಪ್ಪಿದರೆ ಅವರು ಸ್ಪರ್ಧೆ ಮಾಡ್ತಾರೆ ಎಂದು ಅವರು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ