AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ, ಹರ್ಯಾಣ, ಗುಜರಾತ್ ಮತ್ತು ಗೋವಾದಲ್ಲಿ ಎಎಪಿ- ಕಾಂಗ್ರೆಸ್ ಸೀಟು ಹಂಚಿಕೆ; ಯಾವ ಕ್ಷೇತ್ರ ಯಾರಿಗೆ?

ಎಎಪಿ ಕಾಂಗ್ರೆಸ್ ಸೀಟು ಒಪ್ಪಂದದ ಪ್ರಕಾರ, ಗುಜರಾತ್‌ನ 26 ಲೋಕಸಭಾ ಸ್ಥಾನಗಳ ಪೈಕಿ, ಕಾಂಗ್ರೆಸ್ ತನ್ನ 24 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.ಭರೂಚ್ ಮತ್ತು ಭಾವನಗರದಲ್ಲಿ ಎಎಪಿ ಸ್ಪರ್ಧಿಸಲಿದೆ. ಹರ್ಯಾಣದಲ್ಲಿಕಾಂಗ್ರೆಸ್ 9 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಎಎಪಿ ತನ್ನ ಅಭ್ಯರ್ಥಿಗಳನ್ನು ಕುರುಕ್ಷೇತ್ರದಲ್ಲಿ ಕಣಕ್ಕಿಳಿಸಲಿದೆ.  ಚಂಡೀಗಢದ ಏಕೈಕ ಲೋಕಸಭಾ ಸ್ಥಾನವನ್ನು ಕಾಂಗ್ರೆಸ್‌ಗೆ ಹಂಚಿಕೆ ಮಾಡಲಾಗಿದೆ.

ದೆಹಲಿ, ಹರ್ಯಾಣ, ಗುಜರಾತ್ ಮತ್ತು ಗೋವಾದಲ್ಲಿ ಎಎಪಿ- ಕಾಂಗ್ರೆಸ್ ಸೀಟು ಹಂಚಿಕೆ; ಯಾವ ಕ್ಷೇತ್ರ ಯಾರಿಗೆ?
ಎಎಪಿ- ಕಾಂಗ್ರೆಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 24, 2024 | 1:28 PM

Share

ದೆಹಲಿ ಫೆಬ್ರವರಿ 24 : ಮುಂಬರುವ ಲೋಕಸಭೆ ಚುನಾವಣೆಗೆ (Lok sabha Election) ಮುನ್ನ ಇಂಡಿಯಾ ಬ್ಲಾಕ್‌ಗೆ (INDIA bloc) ಪ್ರಮುಖ ಉತ್ತೇಜನ ನೀಡುವಂತೆ, ಆಮ್ ಆದ್ಮಿ ಪಕ್ಷ (AAP) ಮತ್ತು ಕಾಂಗ್ರೆಸ್ (Congress)  ಶನಿವಾರ ದೆಹಲಿ, ಗುಜರಾತ್, ಹರ್ಯಾಣ, ಗೋವಾ ಮತ್ತು ಚಂಡೀಗಢದಂತಹ ಇತರ ರಾಜ್ಯಗಳಿಗೆ ತಮ್ಮ ಸೀಟು ಹಂಚಿಕೆ ಒಪ್ಪಂದವನ್ನು ಘೋಷಿಸಿವೆ. ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರು ತಮ್ಮ ಪಕ್ಷವು ದೆಹಲಿಯಲ್ಲಿ ಮೂರು ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಳಿದ ನಾಲ್ಕರಲ್ಲಿ ಎಎಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಚಾಂದಿನಿ ಚೌಕ್, ಈಶಾನ್ಯ ದೆಹಲಿ ಮತ್ತು ವಾಯುವ್ಯ ದೆಹಲಿಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ನವದೆಹಲಿ, ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ ಮತ್ತು ಪೂರ್ವ ದೆಹಲಿ ಸ್ಥಾನಗಳಲ್ಲಿ ಎಎಪಿ ಸ್ಪರ್ಧಿಸಲಿದೆ.

ಒಪ್ಪಂದದ ಪ್ರಕಾರ, ಗುಜರಾತ್‌ನ 26 ಲೋಕಸಭಾ ಸ್ಥಾನಗಳ ಪೈಕಿ, ಕಾಂಗ್ರೆಸ್ ತನ್ನ 24 ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.ಭರೂಚ್ ಮತ್ತು ಭಾವನಗರದಲ್ಲಿ ಎಎಪಿ ಸ್ಪರ್ಧಿಸಲಿದೆ. ಹರ್ಯಾಣದಲ್ಲಿಕಾಂಗ್ರೆಸ್ 9 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಎಎಪಿ ತನ್ನ ಅಭ್ಯರ್ಥಿಗಳನ್ನು ಕುರುಕ್ಷೇತ್ರದಲ್ಲಿ ಕಣಕ್ಕಿಳಿಸಲಿದೆ.  ಚಂಡೀಗಢದ ಏಕೈಕ ಲೋಕಸಭಾ ಸ್ಥಾನವನ್ನು ಕಾಂಗ್ರೆಸ್‌ಗೆ ಹಂಚಿಕೆ ಮಾಡಲಾಗಿದೆ.ಗೋವಾದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ಜಂಟಿ ಸುದ್ದಿಗೋಷ್ಠಿ

ಭರೂಚ್ ಜನರಲ್ಲಿ ಕ್ಷಮೆಯಾಚಿಸಿದ ಮುಮ್ತಾಜ್ ಪಟೇಲ್

ಕಾಂಗ್ರೆಸ್ ನಾಯಕ ಮತ್ತು ಪಕ್ಷದ ಹಿರಿಯ ನಾಯಕ ದಿವಂಗತ ಅಹ್ಮದ್ ಪಟೇಲ್ ಅವರ ಪುತ್ರಿ ಮುಮ್ತಾಜ್ ಪಟೇಲ್ ಟ್ವೀಟ್ ಮಾಡಿ, “ಭರೂಚ್ ಲೋಕಸಭಾ ಸ್ಥಾನವನ್ನು ಮೈತ್ರಿ ಮಾಡಿಕೊಳ್ಳಲು ಸಾಧ್ಯವಾಗದಿದ್ದಕ್ಕಾಗಿ ನಮ್ಮ ಜಿಲ್ಲಾ ಕಾರ್ಯಕರ್ತರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ನಾನು ನಿಮ್ಮ ನಿರಾಶೆಯನ್ನು ಅರ್ಥ ಮಾಡಿಕೊಂಡಿದ್ದೇನೆ. ಒಟ್ಟಾಗಿಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ನಾವು ಮರುಸಂಘಟಿಸುತ್ತೇವೆ. ಅಹ್ಮದ್ ಪಟೇಲ್ ಅವರ 45 ವರ್ಷಗಳ ಪರಂಪರೆ ವ್ಯರ್ಥವಾಗಲು ನಾವು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವರ್ಗಾವಣೆ ನೀತಿ ಅನುಷ್ಠಾನಕ್ಕೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಆಯೋಗ ನಿರ್ದೇಶನ

ಮುಕುಲ್ ವಾಸ್ನಿಕ್ ಅವರು ಮುಮ್ತಾಜ್ ಪಟೇಲ್ ಅವರನ್ನು ಸಮಾಧಾನಿಸಲು ಪ್ರಯತ್ನಿಸಿದ್ದು, ಎಲ್ಲಾ ಕಾರ್ಯಕರ್ತರು ಮತ್ತು ನಾಯಕರು ಎಎಪಿಗೆ ಭರೂಚ್ ಸ್ಥಾನವನ್ನು ನೀಡುವ ಪಕ್ಷದ ನಿರ್ಧಾರಕ್ಕೆ ಸಮ್ಮತಿ ನೀಡಿದ್ದಾರೆ. ಸುದೀರ್ಘ ಚರ್ಚೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!