AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಯಾರಿಗೆಲ್ಲ ಟಿಕೆಟ್? ಸಂಭಾವ್ಯ ಅಭ್ಯರ್ಥಿಗಳ ವಿವರ ಇಲ್ಲಿದೆ

ಲೋಕಸಭೆ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸಂಬಂಧ ಇಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಸಭೆ ಬಳಿಕ ಬಹುತೇಕ ಇಂದೇ ಎರಡನೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಇದರಲ್ಲಿ ಕರ್ನಾಟಕದ ಹಲವು ಕ್ಷೇತ್ರಗಳಿಗೂ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ವಿವರ ಇಲ್ಲಿದೆ.

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಯಾರಿಗೆಲ್ಲ ಟಿಕೆಟ್? ಸಂಭಾವ್ಯ ಅಭ್ಯರ್ಥಿಗಳ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Pramod Shastri G
| Edited By: |

Updated on: Mar 06, 2024 | 1:39 PM

Share

ಬೆಂಗಳೂರು, ಮಾರ್ಚ್​ 6: ಲೋಕಸಭೆ ಚುನಾವಣೆಗೆ (Lok Sabha Elections) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ (BJP) ಎರಡನೇ ಪಟ್ಟಿ ಬಿಡುಗಡೆ ಮಾಡುವುದಕ್ಕಾಗಿ ಇಂದು ದೆಹಲಿಯಲ್ಲಿ ಸಭೆ ನಡೆಸುತ್ತಿದೆ. ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಸಭೆಯ ಬಳಿಕ ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟೆಯನ್ನು ಬಿಡುಗಡೆ ಮಾಡುವ ನಿರೀಕ್ಷೆ ಇದೆ.

ಬಿಜೆಪಿಯ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಕೆಲವು ಮಂದಿ ನಾಯಕರಿಗೂ ಟಿಕೆಟ್ ಘೋಷಣೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

  • ಬೆಂಗಳೂರು ಗ್ರಾಮಾಂತರ : ಡಾ. ಮಂಜುನಾಥ್/ಸಿ.ಪಿ. ಯೋಗೇಶ್ವರ್
  • ಚಾಮರಾಜನಗರ: ಡಾ. ಮೋಹನ್
  • ಬೆಂಗಳೂರು ಕೇಂದ್ರ : ಪಿ.ಸಿ. ಮೋಹನ್‌
  • ತುಮಕೂರು : ವಿ.ಸೋಮಣ್ಣ/ ಜೆ‌.ಸಿ. ಮಾಧುಸ್ವಾಮಿ
  • ಬೆಂಗಳೂರು ದಕ್ಷಿಣ : ತೇಜಸ್ವಿ ಸೂರ್ಯ
  • ಬೆಂಗಳೂರು ಉತ್ತರ : ಡಿ.ವಿ. ಸದಾನಂದ ಗೌಡ/ಸಿ.ಟಿ. ರವಿ/ ನಾರಾಯಣ್/ ವಿವೇಕ್ ರೆಡ್ಡಿ
  • ಮೈಸೂರು: ಪ್ರತಾಪ್‌ ಸಿಂಹ
  • ಉಡುಪಿ-ಚಿಕ್ಕಮಗಳೂರು : ಶೋಭಾ ಕರಂದ್ಲಾಜೆ/ ಸಿ.ಟಿ. ರವಿ/ ಪ್ರಮೋದ್ ಮಧ್ವರಾಜ್
  • ದಾವಣಗೆರೆ: ಜಿ.ಎಂ. ಸಿದ್ದೇಶ್ವರ್‌/ಎಂ.ಪಿ. ರೇಣುಕಾಚಾರ್ಯ
  • ಶಿವಮೊಗ್ಗ : ಬಿ.ವೈ. ರಾಘವೇಂದ್ರ
  • ಹಾವೇರಿ: ಬಸವರಾಜ ಬೊಮ್ಮಾಯಿ/ಕೆ.ಇ. ಕಾಂತೇಶ್‌/ ಜಗದೀಶ್ ಶೆಟ್ಟರ್/ ಬಿ.ಸಿ. ಪಾಟೀಲ್
  • ಚಿಕ್ಕಬಳ್ಳಾಪುರ: ಡಾ. ಕೆ. ಸುಧಾಕರ್‌/ ಅಲೋಕ್‌ ವಿಶ್ವನಾಥ್‌
  • ಉತ್ತರ ಕನ್ನಡ : ಅನಂತ ಕುಮಾರ್‌ ಹೆಗಡೆ/ ವಿಶ್ವೇಶ್ವರ ಹೆಗಡೆ ಕಾಗೇರಿ
  • ದಕ್ಷಿಣ ಕನ್ನಡ: ನಳಿನ್‌ ಕುಮಾರ್‌ ಕಟೀಲ್‌/ಕ್ಯಾ. ಬ್ರಿಜೇಶ್ ಚೌಟ
  • ಹುಬ್ಬಳ್ಳಿ-ಧಾರವಾಡ : ಪ್ರಹ್ಲಾದ್ ಜೋಶಿ
  • ಚಿತ್ರದುರ್ಗ : ಎ. ನಾರಾಯಣ ಸ್ವಾಮಿ/ಮಾದಾರ ಚನ್ನಯ್ಯ ಸ್ವಾಮೀಜಿ
  • ಬಾಗಲಕೋಟೆ : ಪಿ.ಸಿ. ಗದ್ದಿಗೌಡರ್
  • ಬಳ್ಳಾರಿ: ಬಿ. ಶ್ರೀರಾಮುಲು/ ದೇವೇಂದ್ರಪ್ಪ
  • ಕೊಪ್ಪಳ: ಕರಡಿ ಸಂಗಣ್ಣ
  • ವಿಜಯಪುರ: ರಮೇಶ್‌ ಜಿಗಜಿಣಗಿ
  • ಕಲ್ಬುರ್ಗಿ : ಉಮೇಶ್‌ ಜಾಧವ್‌
  • ಬೆಳಗಾವಿ : ಜಗದೀಶ್‌ ಶೆಟ್ಟರ್‌/ರಮೇಶ್ ಕತ್ತಿ/ ಮಂಗಳಾ ಅಂಗಡಿ
  • ಬೀದರ್ : ಭಗವಂತ್‌ ಖೂಬಾ
  • ಚಿಕ್ಕೋಡಿ : ಅಣ್ಣಾಸಾಹೇಬ್ ಜೊಲ್ಲೆ/ರಮೇಶ್‌ ಕತ್ತಿ
  • ರಾಯಚೂರು : ರಾಜಾ ಅಮರೇಶ್ವರ ನಾಯಕ್/ ರಾಜೂ ಗೌಡ

ಇದನ್ನೂ ಓದಿ: 2 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ, ಮಂಗನ ಕಾಯಿಲೆ ತಡೆಗೆ ಕ್ರಮ: ಶಿರಸಿಯಲ್ಲಿ ಇನ್ನೂ ಏನೇನಂದ್ರು ಸಿಎಂ ಸಿದ್ದರಾಮಯ್ಯ?

ಇಂದು ಸಂಜೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗುವ ಎಲ್ಲ ಸಾಧ್ಯತೆಗಳಿವೆ. ಕರ್ನಾಟಕದ ಪ್ರಮುಖ ನಾಯಕರು ಕೂಡ ಇಂದಿನ ಸಭೆಯಲ್ಲಿ ಭಾಗವಹಿಸುತ್ತಿರುವುದರಿಂದ ರಾಜ್ಯದ ಹಲವು ಸ್ಥಾನಗಳಿಗೆ ಟಿಕೆಟ್ ಘೋಷಣೆಯಾಗುವ ನಿರೀಕ್ಷೆ ದಟ್ಟವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pramod Shastri G
Pramod Shastri G
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ