ಲೋಕಸಭೆ ಚುನಾವಣೆ: ಬಿಜೆಪಿಯಿಂದ ‘ನೋ ಮೈಕ್, ನೋ ಚೇರ್ಸ್’ ಪ್ರಚಾರಾಭಿಯಾನ! ಏನಿದರ ವಿಶೇಷ?

No Mike, No Chairs: ಲೋಕಸಭೆ ಚುನಾವಣೆ ಸಂಬಂಧ ತಳ ಮಟ್ಟದಲ್ಲಿ ಜನರನ್ನು ತಲುಪಿ ಪ್ರಚಾರ ನಡೆಸುವ ಸಲುವಾಗಿ ಕರ್ನಾಟಕ ಬಿಜೆಪಿ ಹೊಸ ರೀತಿಯ ಪ್ರಚಾರ ಅಭಿಯಾನ ಒಂದನ್ನು ಆರಂಭಿಸಲಿದೆ. ‘ನೋ ಮೈಕ್, ನೋ ಚೇರ್ಸ್’ ಹೆಸರಿನ ಪ್ರಚಾರಾಭಿಯಾನದ ವಿಶೇಷವೇನು? ಯಾವ ರೀತಿ ಪ್ರಚಾರ ನಡೆಸಲಾಗುತ್ತದೆ? ಇದರ ಹಿಂದಿನ ಬಿಜೆಪಿ ತಂತ್ರಗಾರಿಕೆ ಏನು ಎಂಬ ಮಾಹಿತಿ ಇಲ್ಲಿದೆ.

ಲೋಕಸಭೆ ಚುನಾವಣೆ: ಬಿಜೆಪಿಯಿಂದ ‘ನೋ ಮೈಕ್, ನೋ ಚೇರ್ಸ್’ ಪ್ರಚಾರಾಭಿಯಾನ! ಏನಿದರ ವಿಶೇಷ?
ಲೋಕಸಭೆ ಚುನಾವಣೆ: ಬಿಜೆಪಿಯಿಂದ ‘ನೋ ಮೈಕ್, ನೋ ಚೇರ್ಸ್’ ಪ್ರಚಾರಾಭಿಯಾನ!
Follow us
|

Updated on: Mar 21, 2024 | 8:58 AM

ಬೆಂಗಳೂರು, ಮಾರ್ಚ್​ 21: ಲೋಕಸಭೆ ಚುನಾವಣೆ (Lok Sabha Elections) ನಿಟ್ಟಿನಲ್ಲಿ ಸ್ಥಳೀಯ ಮಟ್ಟದಲ್ಲಿ ಸಣ್ಣಮಟ್ಟಿನ ಜನ ಸಮುದಾಯವನ್ನು ತಲುಪಿ ಪ್ರಚಾರ ಮಾಡುವವ ನಿಟ್ಟಿನಲ್ಲಿ ಕರ್ನಾಟಕದಲ್ಲಿ (Karnataka) ಬಿಜೆಪಿ (BJP) ಇದೇ ಮೊದಲ ಬಾರಿಗೆ ‘ನೋ ಮೈಕ್, ನೋ ಚೇರ್ಸ್’ ಅಭಿಯಾನ ಹಮ್ಮಿಕೊಂಡಿದೆ. ತಳಮಟ್ಟದಲ್ಲಿ ಜನರನ್ನು ತಲುಪುವ ಉದ್ದೇಶದೊಂದಿಗೆ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಏಪ್ರಿಲ್ 5ರ ಒಳಗೆ ರಾಜ್ಯದ ಎಲ್ಲಾ ಕಡೆಗಳಲ್ಲಿ ಚುನಾವಣಾ ಪ್ರಚಾರ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಅಭಿಯಾನದಡಿ ರಸ್ತೆ ಬದಿಗಳಲ್ಲಿ, ಸಣ್ಣಪುಟ್ಟ ಹಳ್ಳಿಗಳ ಮರಗಳ ಅಡಿಯಲ್ಲಿ ಅಥವಾ ಮನೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಗುತ್ತದೆ. ಒಂದು ಬಾರಿಯ ಸಭೆಯ ವೇಳೆ ಸುಮಾರು ನೂರು ಜನರನ್ನು ತಲುಪುವ ಗುರಿ ಹೊಂದಲಾಗಿದೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ದೊಡ್ಡ ದೊಡ್ಡ ರ‍್ಯಾಲಿಗಳನ್ನು ನಡೆಸುವ ಬದಲು ಸಣ್ಣಪುಟ್ಟ ಸಭೆಗಳನ್ನು ನಡೆಸುವ ಮೂಲಕ ಜನರನ್ನು ತಲುಪುವುದು ಉತ್ತಮ ವಿಧಾನವಾಗಿದೆ. ಈ ಮೂಲಕ ಪ್ರತಿಯೊಬ್ಬರಿಗೂ ನಾವು ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಕೊಡಬಹುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರ ಹೇಳಿಕೆ ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಈ ರೀತಿಯ ಚುನಾವಣಾ ಪ್ರಚಾರ ನಡೆಸುವ ಬಗ್ಗೆ ಬುಧವಾರ ಪಕ್ಷದ ವಿವಿಧ ಘಟಕಗಳ ಮುಖ್ಯಸ್ಥರ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಿವಿಧ ಹಂತಗಳಲ್ಲಿ ಚುನಾವಣಾ ಪ್ರಚಾರ ಅಭಿಯಾನದ ರೀತಿಯನ್ನು ಪಕ್ಷ ಬದಲಾಯಿಸಿದೆ. 8 ಕ್ಲಸ್ಟರ್​​ಗಳಲ್ಲಿ ದೊಡ್ಡ ಅಭಿಯಾನಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಕಲಬುರಗಿ ಹಾಗೂ ಶಿವಮೊಗ್ಗದಲ್ಲಿ ಈಗಾಗಲೇ ಬೃಹತ್ ಪ್ರಚಾರ ನಡೆಸಲಾಗಿದೆ. ದೊಡ್ಡ ಪ್ರಚಾರ ಅಭಿಯಾನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರಂಥ ನಾಯಕರು ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇವರೇ ಸ್ಟಾರ್ ಪ್ರಚಾರಕರು!

ಸಣ್ಣ ಮಟ್ಟದ ಸ್ಥಳೀಯ ಚುನಾವಣಾ ಪ್ರಚಾರ ಸಭೆಗಳಿಗೆ ಪಕ್ಷದ ರಾಜ್ಯ ಘಟಕವು 22 ವಿವಿಧ ಘಟಕಗಳನ್ನು ಸ್ಥಾಪಿಸಿದೆ. ಇದರಲ್ಲಿ ರೈತರು, ವಕೀಲರು, ವೈದ್ಯರು ಹಾಗೂ ಕೇಂದ್ರ ಸರ್ಕಾರ ಯೋಜನೆಗಳ ಫಲಾನುಭವಿಗಳು ಸೇರಿದ್ದಾರೆ.

ಇದನ್ನೂ ಓದಿ: ಕಂತೆ ಕಂತೆ ಹಣ, ಕುಕ್ಕರ್, ನೂರಾರು ಸೀರೆಗಳು ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು ಸಿಕ್ತು ನೋಡಿ

ಸ್ಥಳೀಯ ನಾಯಕರ ಸಹಕಾರದೊಂದಿಗೆ ಈ ಹೊಸ ಪ್ರಚಾರದ ಪರಿಕಲ್ಪನೆಯನ್ನು ನಾವು ಸಾಕಾರ ಗೊಳಿಸಲಿದ್ದೇವೆ. ಇಂಥ ಪ್ರಚಾರ ಸಭೆಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ನಾಯಕರು, ಪದಾಧಿಕಾರಿಗಳು ಹಾಗೂ ಇತರರು ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಸರ್ಕಾರದ ಉಜ್ವಲ, ಜಲಜೀವನ್ ಮಿಷನ್ ಹಾಗೂ ಇತರ ಯೋಜನೆಗಳನ್ನು ಮುಂದಿಟ್ಟುಕೊಂಡು ಮಹಿಳಾ ಮತದಾರರ ಬಳಿ ಮತಯಾಚನೆ ಮಾಡಲಿದ್ದೇವೆ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ

ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಉಭಯ ಪಕ್ಷಗಳ ನಡುವೆ ಮೂಡುವ ವೈಮನಸ್ಸು ಹಾಗೂ ಗೊಂದಲಗಳನ್ನು ಪರಿಹರಿಸುವ ಸಲುವಾಗಿ ಸಮನ್ವಯ ಸಮಿತಿಯನ್ನು ರಚಿಸಲು ಉದ್ದೇಶಿಸಲಾಗಿದೆ. ಸಮಿತಿಯಲ್ಲಿ ಎರಡು ಪಕ್ಷಗಳ ನಾಯಕರು ಇರಲಿದ್ದಾರೆ. ಕ್ಷೇತ್ರ ಮಟ್ಟದಲ್ಲಿ ಈ ನಾಯಕರು ಕಾರ್ಯನಿರ್ವಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ