ಲೋಕಸಭೆ ಚುನಾವಣೆ: ಮಾರ್ಚ್ 15ರಿಂದ ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ! ಇಲ್ಲಿದೆ ವೇಳಾಪಟ್ಟಿ

ಲೋಕಸಭೆ ಚುನಾವಣೆ ದಿನಾಂಕ ಪ್ರಕಟಗೊಳ್ಳಲು ಇನ್ನು ಕೆಲವೇ ದಿನ ಬಾಕಿ ಇದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿಯಾಗಿ ಪ್ರಚಾರ ಅಭಿಯಾನ ಶುರು ಮಾಡಿದ್ದಾರೆ. ಉತ್ತರ ಭಾರತದಲ್ಲಿ ನಿರಂತರ ಪ್ರವಾಸದಲ್ಲಿರುವ ಮೋದಿ ಕೆಲವೇ ದಿನಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಮೋದಿಯವರ ದಕ್ಷಿಣ ಭಾರತ ಪ್ರವಾಸದ ವೇಳಾಪಟ್ಟಿ ಇಲ್ಲಿದೆ.

ಲೋಕಸಭೆ ಚುನಾವಣೆ: ಮಾರ್ಚ್ 15ರಿಂದ ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ! ಇಲ್ಲಿದೆ ವೇಳಾಪಟ್ಟಿ
ಪ್ರಧಾನಿ ಮೋದಿ
Follow us
| Updated By: ಗಣಪತಿ ಶರ್ಮ

Updated on: Mar 11, 2024 | 6:35 AM

ನವದೆಹಲಿ, ಮಾರ್ಚ್​ 11: ಈ ಬಾರಿ 400 ಸೀಟುಗಳನ್ನು ಪಡೆಯಬೇಕು. ಪ್ರಧಾನಿ ನರೇಂದ್ರ ಮೋದಿ (Narendra Modi) ಸತತ ಮೂರನೇ ಬಾರಿಗೆ ಕೇಂದ್ರದ ಗದ್ದುಗೆಗೆ ಏರಬೇಕು ಎಂಬ ಎರಡು ಅಜೆಂಡಾಗಳೊಂದಿಗೆ ಬಿಜೆಪಿ (BJP) ಭರ್ಜರಿ ಚುನಾವಣಾ ಪ್ರಚಾರ (Election Campaign) ಈಗಾಗಲೇ ಉತ್ತರ ಭಾರತದಲ್ಲಿ ಮತಬೇಟೆ ಆರಂಭಿಸಿರುವ ಪ್ರಧಾನಿ ಮೋದಿ ಕೆಲವೇ ದಿನಗಳಲ್ಲಿ ದಕ್ಷಿಣದ ರಾಜ್ಯಗಳಿಗೆ ಬರಲಿದ್ದಾರೆ. ಮಾರ್ಚ್ 15ರಿಂದ 19ರವರೆಗೆ ದಕ್ಷಿಣ ಭಾರತದಲ್ಲಿ ಮೋದಿ ಅವರ 15 ಱಲಿ ಹಾಗೂ ಸಾರ್ವಜನಿಕ ಸಭೆಗಳು ನಿಗದಿಯಾಗಿವೆ.

ಮೋದಿ ದಕ್ಷಿಣ ಭಾರತ ಪ್ರವಾಸ ವೇಳಾಪಟ್ಟಿ

  • ಮಾರ್ಚ್ 15 : ಕೋಲಾರ, ಸೇಲಂ, ಪಾಲಕ್ಕಾಡ್
  • ಮಾರ್ಚ್ 16 : ಕನ್ಯಾಕುಮಾರಿ, ವಿಶಾಖಪಟ್ಟಣಂ, ಜಹೀರಾಬಾದ್
  • ಮಾರ್ಚ್ 17 : ಪತ್ತನಂತ್ತಿಟ್ಟ, ಶಿವಮೊಗ್ಗ, ಅಮರಾವತಿ
  • ಮಾರ್ಚ್ 18 : ಮಲ್ಕಾಜ್​ಗಿರಿ, ಬೀದರ್, ಕೊಯಮತ್ತೂರು
  • ಮಾರ್ಚ್ 19: ನಾಗರ್ ಕರ್ನೂಲ್, ಧಾರವಾಡ, ಏಲೂರು

ಕರ್ನಾಟಕದಲ್ಲಿ ಮೋದಿ ಪ್ರಚಾರ ಎಲ್ಲೆಲ್ಲ, ಯಾವಾಗ?

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರಧಾನಿ ಮೋದಿ ರೋಡ್ ಶೋ, ಸಮಾವೇಶಕ್ಕೆ ಯೋಜನೆ ರೂಪಿಸಲಾಗಿದೆ. ಮಾರ್ಚ್ 17ರಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ಱಲಿ ನಡೆಯಲಿದೆ. ಶಿವಮೊಗ್ಗದಲ್ಲಿ 4 ಕ್ಷೇತ್ರಗಳನ್ನೊಳಗೊಂಡ ಸಮಾವೇಶ ಆಯೋಜಿಸಲಾಗಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ 4 ಸಾರ್ವಜನಿಕ ಱಲಿ ನಡೆಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮೋದಿ ಸಮಾವೇಶಕ್ಕೆ ಸಿದ್ಧತೆ ಮಾಡಲಾಗುತ್ತಿದೆ.

ಪ್ರಧಾನಿ ಮೋದಿ ವಾರಾಣಸಿ ಱಲಿ ಬಳಿಕ ಇದೀಗ ಗುಜರಾತ್​ನತ್ತ ಮುಖಮಾಡಿದ್ದಾರೆ. ಮಾರ್ಚ್ 12ರಂದು ಗುಜರಾತ್​ ಹಾಗೂ ರಾಜಸ್ಥಾನದಲ್ಲಿ ಮೋದಿ ಚುನಾವಣಾ ಪ್ರಚಾರ ಅಭಿಯಾನ ನಡೆಸಲಿದ್ದಾರೆ.

ಲೋಕಸಭೆ ಚುನಾವಣೆ ದಿನಾಂಕ ಬಹುತೇಕ ಈ ವಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಳೆದ ಹಲವು ದಿನಗಳಿಂದ ಪ್ರಧಾನಿ ನರೇಂದ್ರ ಮೋದಿ ಉತ್ತರ ಭಾರತದಾದ್ಯಂತ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಹಲವಾರು ಮಹತ್ವದ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ ಚುನಾವಣಾ ಪ್ರಚಾರ ಅಭಿಯಾನಗಳನ್ನೂ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉಕ್ರೇನ್​ ಮೇಲೆ ರಷ್ಯಾ ಸಂಭಾವ್ಯ ಪರಮಾಣು ದಾಳಿ ತಡೆದಿದ್ದ ಪ್ರಧಾನಿ ಮೋದಿ: ಸಿಎನ್ಎನ್ ವರದಿ

ಚುನಾವಣೆ ವೇಳಾಪಟ್ಟಿ ಪ್ರಕಟಗೊಳ್ಳುವುದರೊಂದಿಗೆ ಮೋದಿ ಅವರ ಪ್ರಚಾರ ಅಭಿಯಾನ ಇನ್ನಷ್ಟು ಬಿರುಸುಕೊಳ್ಳಲಿದೆ. ಆ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ಸಕಲ ಸಿದ್ಧತೆಗಳನ್ನು ನಡೆಸಿಕೊಂಡಿದೆ. ಮತ್ತೊಂದೆಡೆ, ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ದೆಹಲಿಯಲ್ಲಿ ಇಂದು ಬಿಡುಗಡೆಯಾಗುವ ನಿರೀಕ್ಷೆ ಇದೆ. ಇದರಲ್ಲಿ ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಇರಬಹುದು ಎಂದು ಭಾವಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು