AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha: ಲೋಕಸಭೆಯ ಬಲವನ್ನು 848ಕ್ಕೆ ಹೆಚ್ಚಿಸುವ ಸಾಧ್ಯತೆ

ಲೋಕಸಭೆಯಲ್ಲಿ 888 ಆಸನ ಸಾಮರ್ಥ್ಯದ ಹೊಸ ಸಂಸತ್ತಿನ ಕಟ್ಟಡದ ನಿರ್ಮಾಣ ಮಾಡಲಾಗುತ್ತಿದೆ. ಲೋಕಸಭೆ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಕಾರಣದಿಂದ ಹೊಸ ಡಿಲಿಮಿಟೇಶನ್ ಆಯೋಗವನ್ನು ಸ್ಥಾಪಿಸುವತ್ತ ಗಮನ ಹರಿಸಿದೆ.

Lok Sabha: ಲೋಕಸಭೆಯ ಬಲವನ್ನು 848ಕ್ಕೆ ಹೆಚ್ಚಿಸುವ ಸಾಧ್ಯತೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 24, 2023 | 11:58 AM

Share

ಭಾರತವು ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶ. ಇದೀಗ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎಂದು ಕೂಡ ವರದಿಗಳು ತಿಳಿಸಿದೆ. ಜನಸಂಖ್ಯೆ ಹೆಚ್ಚುತ್ತಿದ್ದಂತೆ. ಲೋಕಸಭೆಯಲ್ಲಿ 888 ಆಸನ ಸಾಮರ್ಥ್ಯದ ಹೊಸ ಸಂಸತ್ತಿನ ಕಟ್ಟಡದ ನಿರ್ಮಾಣ ಮಾಡಲಾಗುತ್ತಿದೆ. ಲೋಕಸಭೆ (Lok Sabha) ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಕಾರಣದಿಂದ ಹೊಸ ಡಿಲಿಮಿಟೇಶನ್ ಆಯೋಗವನ್ನು ಸ್ಥಾಪಿಸುವತ್ತ ಗಮನ ಹರಿಸಿದೆ.

ಲೋಕಸಭೆ ಸ್ಥಾನಗಳ ಸಂಖ್ಯೆಯನ್ನು 524 ರಿಂದ 545 ಕ್ಕೆ ಏರಿಸಿದಾಗ 1973 ರ 31ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸೀಟು ಪರಿಷ್ಕರಣೆಯನ್ನು ನಡೆಸಲಾಯಿತು. ಮುಂದಿನ 25 ವರ್ಷಗಳ ಕಾಲ ಲೋಕಸಭೆಯ ಬಲವನ್ನು ಉಳಿಸಿಕೊಳ್ಳಲು 1976ರಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು.

ಹೊಸ ಡಿಲಿಮಿಟೇಶನ್ (Delimitation) ಆಯೋಗವು 2026 ರಲ್ಲಿ ಬರಲಿದೆ. ಹೊಸ ಆಯೋಗವನ್ನು ಸ್ಥಾಪಿಸುವ ಪ್ರಕ್ರಿಯೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಕುಟುಂಬ ಯೋಜನಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ ಮತ್ತು ತಮ್ಮ ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟುಕೊಂಡಿರುವ ರಾಜ್ಯಗಳು ಸೀಟುಗಳ ಮರುಹಂಚಿಕೆಯಲ್ಲಿ ಅನನುಕೂಲವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಮುಂದಿರುವ ಸವಾಲು. ಸರ್ಕಾರವು ಸಂವಿಧಾನದ 81 ನೇ ಪರಿಚ್ಛೇದವನ್ನು ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ, ಇದು ದೇಶಾದ್ಯಂತ ಕ್ಷೇತ್ರಗಳಿಗೆ ಸಮಾನ ಸಂಖ್ಯೆಯ ಘಟಕಗಳನ್ನು ಕಡ್ಡಾಯಗೊಳಿಸುತ್ತದೆ ಮತ್ತು ರಾಜ್ಯಗಳ ನಡುವೆ ಸೀಟುಗಳ ಮರುಹಂಚಿಕೆಗೆ ಹೊಸ ಸೂತ್ರವನ್ನು ರೂಪಿಸುತ್ತದೆ.

ಇದನ್ನೂ ಓದಿ:Big News: ಸೆಂಟ್ರಲ್ ವಿಸ್ತಾ ಯೋಜನೆ; ಪ್ರಧಾನಿ ಹೊಸ ಕಚೇರಿ ನಿರ್ಮಾಣದ ಪ್ರಸ್ತಾವನೆಗೆ ದೆಹಲಿ ಸಮಿತಿ ಗ್ರೀನ್ ಸಿಗ್ನಲ್

ಪ್ರಸ್ತುತ ಜನಸಂಖ್ಯೆಯ ಪ್ರಕಾರ, ಹಳೆಯ ಸೂತ್ರದ ಪ್ರಕಾರ ಸೀಟುಗಳನ್ನು ಹಂಚಿಕೆ ಮಾಡಿದರೆ, ಲೋಕಸಭಾ ಸ್ಥಾನಗಳ ಸಂಖ್ಯೆ 848 ಕ್ಕೆ ಏರುವ ಸಾಧ್ಯತೆಯಿದೆ, ಉತ್ತರ ಪ್ರದೇಶವು 143 ಸ್ಥಾನಗಳನ್ನು ಪಡೆಯುತ್ತದೆ, ಆದರೆ ಕೇರಳವು 20 ಸ್ಥಾನಗಳಲ್ಲಿ ಇವೆ. ದಕ್ಷಿಣದ ರಾಜ್ಯಗಳು ಈ ಸಮಸ್ಯೆಗಳ ಬಗ್ಗೆ ಕೇಂದ್ರಕ್ಕೆ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Mon, 24 April 23

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!