AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ: ದೇವೇಗೌಡರ ಕುಟುಂಬದ ಅಭ್ಯರ್ಥಿ ವಿರುದ್ಧ ನಾನು ಸ್ಪರ್ಧಿಸುವೆ: ಬಿಜೆಪಿ ಮುಖಂಡ

ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರು ವರ್ಷ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಹಾಸನದಿಂದ ನಾನೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದರು.

ಲೋಕಸಭೆ ಚುನಾವಣೆ: ದೇವೇಗೌಡರ ಕುಟುಂಬದ ಅಭ್ಯರ್ಥಿ ವಿರುದ್ಧ ನಾನು ಸ್ಪರ್ಧಿಸುವೆ: ಬಿಜೆಪಿ ಮುಖಂಡ
ದೇವರಾಜೆಗೌಡ
ಮಂಜುನಾಥ ಕೆಬಿ
| Edited By: |

Updated on:Mar 04, 2024 | 11:32 AM

Share

ಹಾಸನ, ಮಾರ್ಚ 04: ಮುಂದಿನ ಲೋಕಸಭೆ ಚುನಾವಣೆಯನ್ನು (Lok Sabha Election) ಜಂಟಿಯಾಗಿ ಎದುರಿಸಲು ​ಬಿಜೆಪಿ (BJP) ಜೊತೆ ಜೆಡಿಎಸ್ (JDS) ಮೈತ್ರಿ ಮಾಡಿಕೊಂಡಿದೆ. ಆದರೆ ಬಿಜೆಪಿ ಮುಖಂಡ ದೇವರಾಜೇಗೌಡ (Devaraje Gowda) ಮಾತ್ರ ಹೆಚ್​​ಡಿ ದೇವಗೌಡರ (HD Devegowda) ಕುಟುಂಬದ ವಿರುದ್ಧ ಇನ್ನೂ ಕಿಡಿ ಕಾರುತ್ತಿದ್ದಾರೆ. ಮೈತ್ರಿ ನಂತರವೂ ಹಾಸನದಲ್ಲಿ ದೇವರಾಜೇಗೌಡ ಮತ್ತು ಹೆಚ್​ಡಿ ದೇವೆಗೌಡ ಕುಟುಂಬದ ನಡುವಿನ ಅಸಮಾಧಾನ ತಣದಿಲ್ಲ. “ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದ ಯಾರೇ ಅಭ್ಯರ್ಥಿ ಆದರೂ ಅವರ ವಿರುದ್ಧ ನಾನು ಸ್ಪರ್ದೆ ಮಾಡುತ್ತೇನೆ” ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದ್ದಾರೆ.

ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರು ವರ್ಷ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೆ ಅವರು ಮೇಲ್ಮನವಿ ಸಲ್ಲಿಸಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ಹಾಸನದಿಂದ ನಾನೇ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಕೂಡ ಇದಕ್ಕೆ ದ್ವನಿಗೂಡಿಸಿದ್ದಾರೆ. ಇದು ನಮ್ಮ ಬಿಜೆಪಿಯ ಪ್ರಾಮಾಣಿಕ ಕಾರ್ಯಕರ್ತರ ದಾರಿ ತಪ್ಪಿಸುವ ಕೆಲಸವಾಗಿದೆ ಎಂದರು.

ಇದರ ವಿರುದ್ಧ ನಾನು ಕೇಂದ್ರದ ನಾಯಕರಿಗೆ ದೂರು ನೀಡಿದ್ದೆ. ಕೇಂದ್ರದ ನಾಯಕರು ನನ್ನ ಕರೆಸಿ ಮಾತನಾಡಿದ್ದಾರೆ. ಹಾಸನದಿಂದ ಮೈತ್ರಿ ಅಭ್ಯರ್ಥಿ ಘೋಷಣೆ ಮಾಡಿಲ್ಲ, ನೀವು ಕೆಲಸ ಮಾಡಿ ಎಂದು ಹೇಳಿದ್ದಾರೆ. ಹಾಗಾಗಿಯೆ ಜಿಲ್ಲೆಯಲ್ಲಿ ಚುನಾವಣೆ ಕಛೇರಿ ತೆರೆಯಲಾಗಿದೆ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗುವುದು ಬೇಡ. ನಮ್ಮ ಕೆಲ ನಾಯಕರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಓಡಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ದೇವೇಗೌಡರು ನಮ್ಮನ್ನು ಚಡ್ಡಿಗಳು ಎಂದಿದ್ದರು. ದೇವೇಗೌಡರು ದೇಶ ಬಿಡುತ್ತೇನೆ ಎಂದಿದ್ದರು. ಭವಾನಿ ರೇವಣ್ಣ ನಡು ರಾತ್ರಿಯಲ್ಲಿ ವಾಮಾಚಾರ ಮಾಡುತ್ತಾರೆ. ಹಂದಿ, ಕುರಿ ಮತ್ತು ಮೇಕೆ ಕಡಿದು ವಾಮಾಚಾರ ಮಾಡಿದ್ದಾರೆ. ದೇವೇಗೌಡರು ಯಜ್ಞಯಾಗಾದಿ ಮಾಡುತ್ತಾರೆ. ಇವರು ದೇವರನ್ನೇ ಕಟ್ಟಿಹಾಕುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾವು ಹೇಗೆ ಇವರೊಂದಿಗೆ ಮೈತ್ರಿಯಿಂದ ಕೆಲಸ ಮಾಡುವುದು ಪ್ರಶ್ನಿಸಿದರು.

ಕೆಲವು ರಾಜ್ಯ ನಾಯಕರು ಕೂಡ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ದೇವೇಗೌಡರ ಮನೆಗೆ ಹೋಗಿ ಓಲೈಕೆ ಕೆಲಸ ಮಾಡುತ್ತಿದ್ದಾರೆ. ಹಾಸನದಲ್ಲಿ ಬಿಜೆಪಿ ಗೆಲ್ಲುವ ವಾತಾವರಣ ಇದೆ. ಸುಪ್ರೀಂಕೋರ್ಟ್​​ನಲ್ಲಿ ಪ್ರಕರಣ ಅಂತಿಮ ಹಂತಕ್ಕೆ ಬಂದು ಕುತ್ತಿಗೆಗೆ ಬಂದಿದೆ. ರೇವಣ್ಣ ಕೂಡ ಜೈಲಿಗೆ ಹೋಗುವ ಪರಿಸ್ಥಿತಿ ಬಂದೇ ಬರುತ್ತೆ. ಈ ಬಾರಿ ಪಕ್ಷಾತೀತವಾಗಿ ನಾವು ಚುನಾವಣೆ ಮಾಡುತ್ತೇವೆ. ನಮ್ಮ ಕೆಲ ನಾಯಕರು ಜೆಡಿಎಸ್ ಮೇಲಿನ ಸಿಟ್ಟಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಲು ಆಲೋಚನೆ ಮಾಡಿದ್ದಾರೆ. ಯಾರೂ ಈ ರೀತಿ ಗೊಂದಲಕ್ಕೆ ಒಳಗಾಗೋದು ಬೇಡ ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಸಮರ, ಸುಪ್ರೀಂಕೋರ್ಟ್‌ನಲ್ಲಿ ಕೇವಿಯೆಟ್ ಫೈಲ್ ಮಾಡಿದ ದೇವರಾಜೇಗೌಡ

ಕರ್ನಾಟಕದಲ್ಲಿ ಮುಂದೆ ರಾಷ್ಟ್ರಪತಿ ಆಡಳಿತ ಬರಲಿದೆ. ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಕೇಸ್ ನಡೆಯುತ್ತಿದೆ. ಈ ತೀರ್ಪು ಬಂದ ಕೂಡಲೆ ಕರ್ನಾಟಕ ಸರ್ಕಾರ ವಜಾ ಆಗುತ್ತೆ. ತೀರ್ಪು ಬಂದ ಹತ್ತು ನಿಮಿಷಕ್ಕೆ ರಾಷ್ಟ್ರಪತಿ ಆಡಳಿತ ಜಾರಿ ಆಗುತ್ತೆ ಎಂದು ಭವಿಷ್ಯ ನುಡಿದರು.

ಯಾರು ಈ ದೇವರಾಜೇಗೌಡ

2019ರ ಲೋಕಸಭೆ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಅವರು ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ಜಿ ದೇವರಾಜೇಗೌಡ ತಮ್ಮ ದೂರಿನಲ್ಲಿ ತಿಳಿಸಿದ್ದರು.

ಇದಾದ ಬಳಿಕ ಮಾಜಿ ಸಚಿವ ರೇವಣ್ಣ ಅವರ ಕುಟುಂಬ ಸದಸ್ಯರ ಮತ್ತು ಸಂಸದ ಪ್ರಜ್ವಲ್‌ ರೇವಣ್ಣ ಅವರ ಭ್ರಷ್ಟಾಚಾರ, ಕರ್ಮಕಾಂಡ ಕೆಲವು ವಿಡಿಯೋಗಳು ನನ್ನ ಹತ್ತಿರವಿದ್ದು, ಸಮಯ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಬಾಂಬ್​ ಸಿಡಿಸಿದ್ದರು. ಅಂದಿನಿಂದ ಇಲ್ಲಿಯವರೆಗು ರೇವಣ್ಣ ಕುಟುಂಬ ಮತ್ತು ದೇವರಾಜೇಗೌಡ ಮಧ್ಯೆ ಶೀತಲ ಸಮರ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:36 am, Mon, 4 March 24

Follow Us
Manjunath KB
Manjunath KB
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ