AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉಗ್ರಪ್ಪ ಫುಲ್​ ಆ್ಯಕ್ಟಿವ್​​: ಗಣೇಶ ಚತುರ್ಥಿಯಂದೇ ಬಳ್ಳಾರಿಯಲ್ಲಿ ‌ಮನೆ ಮಾಡಿದ ಮಾಜಿ ಸಂಸದ

ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತು ಸುಣ್ಣಾಗಿ ಬಳ್ಳಾರಿಯಿಂದ ಕಾಲ್ಕಿತ್ತಿದ್ದ ಉಗ್ರಪ್ಪ ಅವರು ಗಣೇಶನ ಹಬ್ಬದ ದಿನದಂದು, ಸರ್ವ ವಿಘ್ನಗಳನ್ನು ನಿವಾರಣೆ ಮಾಡೆಂದು ಮತ್ತೊಮ್ಮೆ ಬಳ್ಳಾರಿಯಲ್ಲಿ ‌ಮನೆ ಮಾಡಿ ಪೂಜೆ ನೆರವೇರಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉಗ್ರಪ್ಪ ಫುಲ್​ ಆ್ಯಕ್ಟಿವ್​​: ಗಣೇಶ ಚತುರ್ಥಿಯಂದೇ ಬಳ್ಳಾರಿಯಲ್ಲಿ ‌ಮನೆ ಮಾಡಿದ ಮಾಜಿ ಸಂಸದ
ವಿಎಸ್​ ಉಗ್ರಪ್ಪ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ವಿವೇಕ ಬಿರಾದಾರ|

Updated on: Sep 18, 2023 | 2:37 PM

Share

ಬಳ್ಳಾರಿ ಸೆ.18: ಲೋಕಸಭೆ ಚುನಾವಣೆಗೆ (Lokasabha Election) ರಾಜಕೀಯ ನಾಯಕರು ಸದ್ದಿಲ್ಲದೇ ತಯಾರಿ ನಡೆಸಿದ್ದಾರೆ. ಚುನಾವಣೆಗೆ ಇನ್ನು ಹತ್ತು ತಿಂಗಳು ಬಾಕಿ ಇರುವಾಗಲೇ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ವಿ.ಎಸ್​ ಉಗ್ರಪ್ಪ (VS Ugrappa) ಫುಲ್​ ಆ್ಯಕ್ಟಿವ್ ಆಗಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತು ಸುಣ್ಣಾಗಿ ಬಳ್ಳಾರಿಯಿಂದ (Bellary) ಕಾಲ್ಕಿತ್ತಿದ್ದ ಉಗ್ರಪ್ಪ ಅವರು ಗಣೇಶನ ಹಬ್ಬದ ದಿನದಂದು, ಸರ್ವ ವಿಘ್ನಗಳನ್ನು ನಿವಾರಣೆ ಮಾಡೆಂದು ಮತ್ತೊಮ್ಮೆ ಬಳ್ಳಾರಿಯಲ್ಲಿ ‌ಮನೆ ಮಾಡಿ ಪೂಜೆ ನೆರವೇರಿಸಿದ್ದಾರೆ.

ಉಗ್ರಪ್ಪ ಅವರ ತಯಾರಿ ನೋಡಿದರೇ ಬಳ್ಳಾರಿ ಲೋಕಸಭೆ ಟಿಕೆಟ್ ಇವರಿಗೆ ನೀಡಲು ಹೈಕಮೆಂಡ್ ನಿರ್ಧರಿಸಿದೆಯಾ ಎಂಬ ಪ್ರಶ್ನೆಗಳು ರಾಜಕೀಯ ಪಡಸಾಲೆಯಲ್ಲಿ ಉದ್ಭವಿಸಿವೆ. ವಿಎಸ್​ ಉಗ್ರಪ್ಪ ಅವರು 2018ರ ಲೋಕಸಭೆ ಉಪಚುನಾಣೆ ಗೆದ್ದು ಬೀಗಿದ್ದರು. ಆದರೆ 2019ರ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದರು.

ಉಗ್ರಪ್ಪ ಸೋತ ಬಳಿಕ ಬಳ್ಳಾರಿಯಲ್ಲಿದ್ದ ಮನೆಯನ್ನು ಖಾಲಿ ಮಾಡಿಕೊಂಡು ಹೋಗಿದ್ದರು. ಆಗೋಮ್ಮೆ ಈಗೊಮ್ಮೆ ಕ್ಷೇತ್ರಕ್ಕೆ ವಿಸಿಟ್​ ಕೊಡುತ್ತಿದ್ದರು. ಆದರೆ ಇದೀಗ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪುಲ್ ಆ್ಯಕ್ಟಿವ್​ ಆಗಿದ್ದಾರೆ. ಅದರಲ್ಲಂತೂ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತ ಪೂರ್ವ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಮತ್ತಷ್ಟು ಹುರುಪು ಬಂದಿದೆ. ಇದೀಗ ಬಳ್ಳಾರಿಯಲ್ಲಿ ಮನೆ ಮಾಡಿದ್ದು ಮುಂದಿನ ವಾರ ಹೊಸಪೇಟೆಯಲ್ಲಿ ಮನೆ ಮಾಡಲಿದ್ದಾರೆ. ಚುನಾವಣೆಗೆ ಹೆಚ್ಚು ಕಡಿಮೆ ಇನ್ನೂ ಹತ್ತು ತಿಂಗಳು ಬಾಕಿ ಇರೋವಾಗಲಿ ಕಾಂಗ್ರೆಸ್ ಸಜ್ಜಾಗುತ್ತಿದ್ದು, ಉಗ್ರಪ್ಪ ಅವರನ್ನು ಮುಂದಿಬಿಟ್ಡು ಈಗಿನಿಂದಲೇ ಚುನಾವಣೆ ಕಣ ರೆಡಿ ಮಾಡುತ್ತಿದೆ.

ಇದನ್ನೂ ಓದಿ: ಬಳ್ಳಾರಿ: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್; ಏನು?

ಬಳ್ಳಾರಿ ಲೋಕಸಭಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದ್ದು ಪರಿಶಿಷ್ಟ ಪಂಗಡಕ್ಕೆ ಸೇರಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ವಿಎಸ್​ ಉಗ್ರಪ್ಪ ಅವರ ವಿರುದ್ಧ ಬಿಜೆಪಿ ವೈ ದೇವೇಂದ್ರಪ್ಪ ಅವರನ್ನು ಕಣಕ್ಕೆ ಇಳಿಸಿತ್ತು. ವೈ ದೇವೇಂದ್ರಪ್ಪ ಅವರು 54,475 ಮತಗಳ ಅಂತರದಿಂದ ಅವರು ವಿಎಸ್ ಉಗ್ರಪ್ಪ ಅವರನ್ನು ಸೋಲಿಸಿದ್ದರು. ಈ ಮೂಲಕ ಬಳ್ಳಾರಿ ಕೋಟೆಯಲ್ಲಿ ಮತ್ತೆ ಕೇಸರಿ ಬಾವುಟ ಹಾರುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!