AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮಿಷ ತೋರಿಸಿ ಮತಾಂತರ, ದೇಶದ ವೋಟಿಂಗ್ ಸಮೀಕ್ಷೆಯಲ್ಲಿ ಬಹಿರಂಗ: ಈಶ್ವರಪ್ಪ

ಹಿಂದುಳಿದ, ದಲಿತ, ಬಡವರಿಗೆ ವಿವಿಧ ಆಮಿಷಗಳನ್ನು ತೋರಿಸಿ ಮತಾಂತರ ಮಾಡುತ್ತಿದ್ದಾರೆ. ದೇಶದ ವೋಟಿಂಗ್ ಸಮೀಕ್ಷೆಯಲ್ಲಿ ಇದು ಬಹಿರಂಗವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. 

ಆಮಿಷ ತೋರಿಸಿ ಮತಾಂತರ, ದೇಶದ ವೋಟಿಂಗ್ ಸಮೀಕ್ಷೆಯಲ್ಲಿ ಬಹಿರಂಗ: ಈಶ್ವರಪ್ಪ
ಆವಿಷಗಳನ್ನು ಹಾಕಿ ಮತಾಂತರ ಮಾಡಲಾಗುತ್ತದೆ ಎಂದ ಕೆ.ಎಸ್.ಈಶ್ವರಪ್ಪ
TV9 Web
| Updated By: Rakesh Nayak Manchi|

Updated on:Sep 16, 2022 | 11:45 AM

Share

ಮೈಸೂರು: ಹಿಂದುಳಿದ, ದಲಿತ, ಬಡವರಿಗೆ ವಿವಿಧ ಆಮಿಷಗಳನ್ನು ತೋರಿಸಿ ಮತಾಂತರ ಮಾಡುತ್ತಿದ್ದಾರೆ. ದೇಶದ ವೋಟಿಂಗ್ ಸಮೀಕ್ಷೆಯಲ್ಲಿ ಇದು ಬಹಿರಂಗವಾಗಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (K.S.Eshwarappa) ಹೇಳಿದ್ದಾರೆ. ಮತಾಂತರ ನಿಷೇಧ ವಿಧೇಯಕಕ್ಕೆ ಕಾಂಗ್ರೆಸ್ ವಿರೋಧ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಯಾರಾದರೆ ಸ್ವಯಂ ಪ್ರೇರಿತವಾಗಿ ಮತಾಂತರವಾದರೆ ತಪ್ಪೇನಿಲ್ಲ. ಸದನದಲ್ಲಿ ನಿನ್ನೆ ನಡೆದಿದ್ದು ಚಾರಿತ್ರಿಕ ಸನ್ನಿವೇಶ, ಕಾಂಗ್ರೆಸ್​ನ ಕೆಲ ನಾಯಕರು ಬಿಲ್ ಹರಿದು ಹಾಕಿದ್ದಾರೆ. ಈ ಮೂಲಕ ಕಾಂಗ್ರೆಸ್​ನವರಿಂದ ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡಲಾಗಿದೆ. ಸೋನಿಯಾಗೆ ಸಂತೃಪ್ತಿ ಪಡಿಸಲು ಬಿಲ್ ಹರಿದು ಹಾಕಿದ್ದಾರೆ. ಈ ವಿಧೇಯಕ ಅಂಗೀಕಾರವಾಗಿರುವುದು ಇತಿಹಾಸ ಸೃಷ್ಟಿಸಿದಂತೆ. ಈ ಮೂಲಕ ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯವಾಗಿದೆ ಎಂದರು.

ಎಲ್ಲಿ ಮತಾಂತರ ನಡೆಯುತ್ತದೆ ಎಂಬ ಡಿಕೆಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಅರ್ಚಕರ ಮನೆ ಹುಡುಗಿಯನ್ನು ಮುಸ್ಲಿಂ ಹುಡುಗ ಪ್ರೀತಿಸಿ ಮತಾಂತರವಾಗುತ್ತಾನೆ. ಡಿ.ಕೆ.ಶಿವಕುಮಾರ್ ಅವರು ಬಂದರೆ ಅವರನ್ನೆ ಕರೆದು ಕೊಂಡು ಹೋಗಿ ತೋರಿಸುತ್ತೇನೆ. ಮತಾಂತರ ಮಾಡಿಸಿದ ಅರ್ಚಕರ ಮನೆ ತೋರಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್​ ಪಕ್ಷದ ಭಾರತ ಜೋಡೋ ಯಾತ್ರೆ ಬಗ್ಗೆ ಹೇಳಿಕೆ ನೀಡಿದ ಈಶ್ವರಪ್ಪ, ಅಖಂಡ ಭಾರತವನ್ನು ತುಂಡು ಮಾಡಿದವರು ಕಾಂಗ್ರೆಸಿಗರು. ಪಾಕಿಸ್ತಾನ, ಹಿಂದೂಸ್ತಾನ ಒಡೆದವರು ಕಾಂಗ್ರೆಸಿಗರು, ಪಾಕಿಸ್ತಾನ ಹಿಂದೂಸ್ತಾನ ಬೇರೆ ಬೇರೆಯಾಗಿರಬಾರದು. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಆತ್ಮಕ್ಮೆ ಶಾಂತಿ ಸಿಗಬೇಕಾದರೆ ಪಾಕಿಸ್ತಾನ ಮತ್ತು ಹಿಂದೂಸ್ತಾನ ಒಂದಾಗಬೇಕು. ಹಿಂದೆ ಮಾಡಿದ ತಪ್ಪಿಗೆ ಈಗ ಪ್ರಾಯಶ್ಚಿತ್ತವಾಗಿ ಕಾಂಗ್ರೆಸ್ ಭಾರತ ಜೋಡೋ ಯಾತ್ರೆ ಮಾಡುತ್ತಿದೆ ಎಂದು ಹೇಳಿದರು.

ಆರ್ಥಿಕ ಸಬಲರಿಗೆ ಮೀಸಲಾತಿ ಯಾಕೆ ಬೇಕು?

ಮೀಸಲಾತಿ ವಿಚಾರವಾಗಿ ಹೇಳಿಕೆ ನೀಡಿದ ಈಶ್ವರಪ್ಪ, ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಯಾಕೆ ಮೀಸಲಾತಿ ಬೇಕು? ಎಷ್ಟು ವರ್ಷಗಳಿಂದ ಖರ್ಗೆಯವರು ರಾಜಕೀಯದಲ್ಲಿ ಇದ್ದಾರೆ? ಖರ್ಗೆಯವರು ಮಂತ್ರಿಯಾಗಿ ಆರ್ಥಿಕವಾಗಿ ಸಬಲ ಹೊಂದಿದ್ದಾರೆ. ಆರ್ಥಿಕವಾಗಿ ಮೇಲೆ ಬಂದ ಮೇಲೂ ಯಾಕೆ ಮೀಸಲಾತಿ ಬೇಕು? ಇಂತಹವರಿಗೆ ಮೀಸಲಾತಿ ನಿಲ್ಲಿಸಬೇಕು. ಎಲ್ಲಾ ದಲಿತ ನಾಯಕರಿಂದ ಮೀಸಲಾತಿ ದುರುಪಯೋಗ ಆಗುತ್ತಿದೆ. ನಾನು ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿ ಆಯ್ಕೆಯಾಗಿ ಬರುತ್ತಿದ್ದೇನೆ. ನಾನು ಯಾವ ಮೀಸಲಾತಿ ಬಳಸುತ್ತಿಲ್ಲ ಎಂದರು.

ಕೋಟಿ ಕೋಟಿ ಹಣ ಸಿಕ್ಕಿರುವುದನ್ನು ಜನ ನೋಡಿದ್ದಾರೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ ವಿಚಾರ ಎಂಬ ಆರೋಪ ಸಂಬಂಧ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕೋಟಿ ಕೋಟಿ ಹಣ ಸಿಕ್ಕಿರುವುದನ್ನು ಜನ ನೋಡಿದ್ದಾರೆ. ಕಳ್ಳತನ ಮಾಡಿದ ಕಳ್ಳ ಸಂದರ್ಭವನ್ನು ನೆನೆಸಿದಂತಾಗಿದೆ. ಡಿ.ಕೆ ಶಿವಕುಮಾರ್ ಜೈಲಿಗೆ ಹೋಗಿ ಬಂದಿದ್ದಾರೆ, ಅವರು ಜಾಮೀನಿನ ಮೇಲೆ‌ ಹೊರಗಿದ್ದಾರೆ. ಈ ರೀತಿ ಹೇಳಿಕೆ ಶೋಭೆ ತರುವುದಿಲ್ಲ. ಅವರು ಮುಕ್ತವಾಗಿ ತನಿಖೆ ಎದುರಿಸಲಿ. ನಿರಪರಾಧಿಯಾಗಿ ಬರಲಿ‌ ಅಂತಾ ನಾನು ಕೂಡ ಹಾರೈಸುತ್ತೇನೆ. ಇದು ರಾಜಕೀಯದ ದೊಂಬರಾಟ ಎಂಬ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷರು ಕ್ಷಮೆ ಯಾಚಿಸಬೇಕು ಎಂದರು.

Published On - 11:45 am, Fri, 16 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ